AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕನಸನ್ನು ಬೆನ್ನಟ್ಟಲು ಲಿಂಕ್ಡ್​ಇನ್​ನಲ್ಲಿ ಕೆಲಸ ಬಿಟ್ಟ ಯುವತಿಯ ಯಶೋಗಾಥೆ

Dream : ಇಂದಿಗೆ ಸರಿಯಾಗಿ ಒಂದು ವರ್ಷದ ಹಿಂದೆ ಕಾರ್ಪೋರೇಟ್​ ಕೆಲಸವನ್ನು ಬಿಟ್ಟು ಮನಸಾ ಜಗತ್ತನ್ನು ಸುತ್ತಿದೆ. ನಾನೀಗ 5.3 ಲಕ್ಷ ಉತ್ಸಾಹಿ ಪ್ರಯಾಣಿಕರ ಸಮುದಾಯವನ್ನು ಹೊಂದಿದ್ದೇನೆ. ನಾನೀಗ ಪೂರ್ಣಾವಧಿಯ ಕಂಟೆಂಟ್​ ಕ್ರಿಯೇಟರ್!

Viral: ಕನಸನ್ನು ಬೆನ್ನಟ್ಟಲು ಲಿಂಕ್ಡ್​ಇನ್​ನಲ್ಲಿ ಕೆಲಸ ಬಿಟ್ಟ ಯುವತಿಯ ಯಶೋಗಾಥೆ
ಆಕಾಂಕ್ಷಾ ಮೊಂಗಾ
Follow us
TV9 Web
| Updated By: ಶ್ರೀದೇವಿ ಕಳಸದ

Updated on:May 19, 2023 | 1:19 PM

Viral: ಜೀವಿಸುವುದಕ್ಕೊಂದು ಕೆಲಸವನ್ನು ಹೇಗೋ ಹುಡುಕೊಳ್ಳಬಹುದು. ಆದರೆ ಬದುಕುವುದಕ್ಕಾಗಿ ಕನಸು ಬಹಳ ಮುಖ್ಯ. ಹಾಗೆಂದು ಕನಸು ಕಂಡವರೆಲ್ಲರೂ ನನಸನ್ನಾಗಿಸಿಕೊಳ್ಳುತ್ತಾರೆ ಎಂದು ಹೇಳಲಾಗದು. ಕೆಲವೇ ಕೆಲವರಿಗೆ ಇದು ಸಾಧ್ಯವಾಗುತ್ತದೆ. ಇದೀಗ ವೈರಲ್ ಆಗಿರುವ ಈ ಲಿಂಕ್ಡ್​ಇನ್​  ಪೋಸ್ಟ್ ಗಮನಿಸಿ. ದೆಹಲಿ ಮೂಲದ ಯುವತಿಯೊಬ್ಬಳು ತನ್ನ ಕನಸಿಗಾಗಿ ಒಂದು ವರ್ಷದ ಹಿಂದೆ ಕೆಲಸವನ್ನು ತೊರೆದಳು. ಮುಂದೇನಾಯಿತೆಂದು ಓದಿ.

ಪ್ರತಿಯೊಬ್ಬರೂ ತಮ್ಮ ಆಸಕ್ತಿಗೆ ಅನುಗುಣವಾಗಿ ಉತ್ಸಾಹದಿಂದ ಕೆಲಸ ಮಾಡಲು ಬಯಸುತ್ತಾರೆ. ಆ ಪ್ರಕಾರ ಕೆಲಸವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಏಕೆಂದರೆ ತಮ್ಮ ಆಯ್ಕೆಯಲ್ಲಿ ಸಮರ್ಥವಾಗಿ ಕೆಲಸ ಮಾಡಿ ಯಶಸ್ಸು ಗಳಿಸಬಹುದು ಎಂಬ ವಿಶ್ವಾಸ ಅವರಿಗಿರುತ್ತದೆ. ಆಕಾಂಕ್ಷಾ ಮೊಂಗಾ ಎಂಬ ಕಂಟೆಂಟ್​ ಕ್ರಿಯೇಟರ್ ಲಿಂಕ್ಡ್​ಇನ್​ನಲ್ಲಿ ಕೆಲಸ ಮಾಡುತ್ತಿದ್ದರು. ನಂತರ  2022ರಲ್ಲಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದರು. ‘ಇಂದಿಗೆ ಸರಿಯಾಗಿ ಒಂದು ವರ್ಷದ ಹಿಂದೆ ಕೆಲಸವನ್ನು ಬಿಟ್ಟಿದ್ದೆ. ನನ್ನ ಹಂಬಲವನ್ನು ಆಗುಮಾಡಿಕೊಳ್ಳುವುದಕ್ಕೋಸ್ಕರ ಜಗತ್ತನ್ನು ಪೂರ್ಣ ಮನಸ್ಸು ಕೊಟ್ಟು ಪ್ರಯಾಣಿಸಬೇಕೆಂದು ನಿರ್ಧರಿಸಿದ್ದೆ. ಅದು ಸಾಧ್ಯವಾಯಿತು’ ಎಂದಿದ್ದಾರೆ.

ಆರುಜನರ ತಂಡವನ್ನು ಕಟ್ಟಿಕೊಂಡು ಈತನಕ 12 ದೇಶಗಳಲ್ಲಿ ಈಕೆ ಪ್ರಯಾಣಿಸಿದ್ದಾರೆ. 300ಕ್ಕೂ ಹೆಚ್ಚು ವಿಡಿಯೋ ಕಂಟೆಂಟ್​ ಸೃಷ್ಟಿಸಿದ್ದಾರೆ. ಸಾಕಷ್ಟು ವಿಡಿಯೋಗಳು ವೈರಲ್ ಆಗಿವೆ. ಇವರು ಸಾಮಾಜಿಕ ಜಾಲತಾಣದಲ್ಲಿ 2,50,000 ಫಾಲೋವರ್​ಗಳನ್ನು ಹೊಂದಿದ್ದಾರೆ. ಈಗ ವೈರಲ್ ಆಗಿರುವ ಈ ಪೋಸ್ಟ್​ ಅನ್ನು ಸುಮಾರು 2 ಲಕ್ಷಕ್ಕಿಂತ ಹೆಚ್ಚು ಜನರು ನೋಡಿದ್ದಾರೆ. ನೆಟ್ಟಿಗರು ಈಕೆಯ ಪೋಸ್ಟ್​ನಿಂದ ಪ್ರಭಾವಿತರಾಗಿದ್ದಾರೆ.

ನಿಮಗೆ ಖುಷಿ ಕೊಡುವುದನ್ನೇ ನೀವು ವೃತ್ತಿಯಾಗಿಸಿಕೊಳ್ಳಿ. ಆಗ ನಿಮ್ಮ ಜೀವನ ಇನ್ನೂ ಎತ್ತರಕ್ಕೇರುತ್ತದೆ ಎಂದು ಅಭಿನಂದಿಸಿದ್ದಾರೆ ಅನೇಕರು. ನೀವು ನಿಮ್ಮ ಪ್ರಯಾಣದ ವೆಚ್ಚವನ್ನು ಹೇಗೆ ನಿರ್ವಹಿಸಿದಿರಿ ಎಂದು ಕೇಳಿದ್ದಾರೆ ಕೆಲವರು.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 1:19 pm, Fri, 19 May 23

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!