AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತನ್ನ ಕೈಯಾರೆ ಕಾಳು ತಿನಿಸಿ ಹಕ್ಕಿ ಮರಿಗಳ ಹಸಿವು ನೀಗಿಸಿದ ಯುವತಿ

ನಿಸ್ವಾರ್ಥ ಮನೋಭಾವದಿಂದ ಮೂಕ ಪ್ರಾಣಿ ಪಕ್ಷಿಗಳಿಗೆ ಆಹಾರ ನೀಡಿ ಅವುಗಳ ಹಸಿವನ್ನು ನೀಗಿಸುವವರನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಇದೀಗ ಯುವತಿಯೊಬ್ಬಳು ಹಕ್ಕಿ ಮರಿಗಳಿಗೆ ಕಾಳು ನೀಡಿ ಅದರ ಹಸಿವನ್ನು ನೀಗಿಸಿದ್ದಾಳೆ. ಈ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ತನ್ನ ಕೈಯಾರೆ ಕಾಳು ತಿನಿಸಿ ಹಕ್ಕಿ ಮರಿಗಳ ಹಸಿವು ನೀಗಿಸಿದ ಯುವತಿ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Aug 23, 2026 | 6:07 PM

Share

ನಮ್ಮಲ್ಲಿ ಕೆಲವರಿಗೆ ಈ ಪ್ರಾಣಿ (Animal), ಪಕ್ಷಿಗಳೆಂದರೆ ಎಲ್ಲಿಲ್ಲದ ಪ್ರೀತಿ. ಅವುಗಳಿಗೆ ಆಹಾರ ಹಾಕುವುದು, ನೀರು ಕುಡಿಯಲು ಇಡುವುದು ಹೀಗೆ ಹಸಿವು ನೀಗಿಸುವ ಕೆಲಸ ಮಾಡುತ್ತಾರೆ. ಇದೀಗ ಈ ಯುವತಿಯದ್ದು ಅಷ್ಟೇ ಒಳ್ಳೆಯ ಗುಣ. ಗೂಡಿನಲ್ಲಿದ್ದ ಪುಟಾಣಿ ಹಕ್ಕಿ ಮರಿಗಳಿಗೆ ಯುವತಿಯೊಬ್ಬಳು ತಿನ್ನಲು ಆಹಾರ ನೀಡಿದ್ದಾಳೆ. ಯುವತಿಯ ಒಳ್ಳೆಯ ಕೆಲಸಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಫ ಕಾಂಟಾ (Fa conta) ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಹಕ್ಕಿಯೊಂದು ಕಬ್ಬಿಣದ ರಾಡ್‌ನಲ್ಲಿ ಗೂಡು ಕಟ್ಟಿದೆ. ಇದರಲ್ಲಿ ಪುಟ್ಟ ಮರಿಗಳು ಆಹಾರ ತರಲು ಹೊರಟ ತಾಯಿಗಾಗಿ  ಕಾಯುತ್ತಿದೆ. ಇದನ್ನರಿತ ಯುವತಿಯೊಬ್ಬಳು ತಾಯಿ ಹಕ್ಕಿಯಂತೆ ಸದ್ದು ಮಾಡುತ್ತಾ, ಈ ಹಕ್ಕಿ ಮರಿಗಳಿಗೆ ಕಾಳುಗಳನ್ನು ನೀಡುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಜಾರು ಬಂಡಿ ಆಟ ಆಡಲು ಕೋತಿಗಳಲ್ಲಿ ಪೈಪೋಟಿ, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಈ ದೃಶ್ಯ ನೋಡಿ ಖುಷಿಯಾಯ್ತು ಎಂದಿದ್ದಾರೆ. ಇನ್ನೊಬ್ಬರು, ಈ ಮರಿಗಳು ತನ್ನ ತಾಯಿಯೇ ಆಹಾರ ನೀಡುತ್ತಿದೆ ಎಂದು ಭಾವಿಸಿರಬಹುದು ಎಂದು ಹೇಳಿದ್ದಾರೆ. ಮತ್ತೊಬ್ಬರು, ಈ ಸಣ್ಣ ಕೆಲಸದಲ್ಲಿ ಇರುವ ಖುಷಿ ಬೇರೆಲ್ಲೂ ಸಿಗಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ