AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Period Pain: ಮುಟ್ಟಿನ ನೋವು ತಡೆಯಲಾರದೆ ಪೇನ್ ಕಿಲ್ಲರ್ ಮಾತ್ರೆ ಸೇವಿಸಿ ಕೋಮಾಗೆ ಜಾರಿದ ಯುವತಿ

ಬ್ರೆಜಿಲ್‌ನ ಜಾಕ್ವೆಲಿನ್ ಗಮಾಕ್​​ ಎಂಬ 21 ವರ್ಷದ ಯುವತಿ ಮುಟ್ಟಿನ ನೋವು ತಾಳಲಾರದೇ ನೋವು ನಿವಾರಕ ಮಾತ್ರೆ ಸೇವಿಸಿದ್ದು, ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಕೋಮಾಗೆ ಜಾರಿದ್ದಾಳೆ. ಯುವತಿ ಮುಟ್ಟಿನ ನೋವಿಗೆ ಐಬುಪ್ರೊಫೆನ್ ಮಾತ್ರೆ ಸೇವನೆ ಮಾಡಿದ್ದಳು ಎಂದು ವರದಿಯಾಗಿದೆ.

Period Pain: ಮುಟ್ಟಿನ ನೋವು ತಡೆಯಲಾರದೆ ಪೇನ್ ಕಿಲ್ಲರ್ ಮಾತ್ರೆ  ಸೇವಿಸಿ ಕೋಮಾಗೆ ಜಾರಿದ ಯುವತಿ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:May 08, 2024 | 3:12 PM

Share

ಮುಟ್ಟಿನ ಸೆಳೆತ ಅಥವಾ ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವು ತುಂಬಾ ಸಾಮಾನ್ಯವಾಗಿದೆ. ಆದರೆ ಮುಟ್ಟಿನ ಸಮಯ ಹತ್ತಿರ ಬರುತ್ತಿದ್ದಂತೆ ಭಯ ಶುರುವಾಗುತ್ತದೆ. ಕೆಲವರು ವಿಪರೀತ ಹೊಟ್ಟೆ, ಸೊಂಟ ನೋವು ತಾಳಲಾರದೆ ಒದ್ದಾಡುತ್ತಾರೆ.  ನೋವು ನಿವಾರಣೆಗೆ ಮಾತ್ರೆಗಳನ್ನು ತೆಗೆದುಕೊಳ್ಳುವವರು ಇದ್ದಾರೆ. ಇತ್ತೀಚಿಗಷ್ಟೇ ವಿಪರೀತ ಮುಟ್ಟಿನ ನೋವಿನಿಂದ ಬಳಲುತ್ತಿದ್ದ ಇಂಗ್ಲೆಂಡ್​​ನ ಲೈಲಾ ಎಂಬ 16 ವರ್ಷದ ಬಾಲಕಿ ತನ್ನ ಸ್ನೇಹಿತರ ಸಲಹೆಯ ಮೇರೆಗೆ ಪ್ರತೀ ತಿಂಗಳು ನೋವು ನಿವಾರಕ ಮಾತ್ರೆ ಸೇವಿಸುತ್ತಿದ್ದ ಪರಿಣಾಮ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಸಾವನ್ನಪ್ಪಿದ್ದಳು. ಇದೀಗ ಅಂತದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಬ್ರೆಜಿಲ್‌ನ ಜಾಕ್ವೆಲಿನ್ ಗಮಾಕ್​​ ಎಂಬ ಯುವತಿ ಮುಟ್ಟಿನ ನೋವು ತಾಳಲಾರದೇ ನೋವು ನಿವಾರಕ ಮಾತ್ರೆ ಸೇವಿಸಿದ್ದು, ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿದ್ದು ಕೋಮಾಗೆ ಜಾರಿದ್ದಾಳೆ. ಯುವತಿ ಮುಟ್ಟಿನ ನೋವಿಗೆ ಐಬುಪ್ರೊಫೆನ್ ಮಾತ್ರೆ ಸೇವನೆ ಮಾಡಿದ್ದಾಳೆ. ಮಾತ್ರೆ ಸೇವಿಸಿದ ಕೆಲ ಹೊತ್ತಿನ ಬಳಿಕ ಕಣ್ಣು ನೋವು ಹಾಗೂ ಮೈ ಮೇಲೆ ಗುಳ್ಳೆ ಕಾಣಿಸಿಕೊಂಡಿದೆ. ತಕ್ಷಣ ಆಕೆಯ ಪೋಷಕರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿಯನ್ನು ಐಸಿಯುಗೆ ದಾಖಲಿಸಿದ ಕೆಲ ಹೊತ್ತಿನಲ್ಲೇ ಕೋಮಾಗೆ ಜಾರಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಇದನ್ನು ಓದಿ: ಪಾಕಿಸ್ತಾನ: 13 ವರ್ಷದ ಬಾಲಕಿಯನ್ನು ಮದುವೆಯಾದ 70ರ ವೃದ್ಧನ ಬಂಧನ

ಜಾಕ್ವೆಲಿನ್, ಸ್ಟೀವನ್ಸ್-ಜಾನ್ಸನ್ ಸಿಂಡ್ರೋಮ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಪರಿಣಾಮ ಆಕೆ ತೆಗೆದುಕೊಂಡ ನೋವು ನಿವಾರಕ ಮಾತ್ರೆ ಪ್ರಾಣಕ್ಕೆ ಕಂಟಕವಾಗಿದೆ. ಸದ್ಯ 17 ದಿನಗಳ ಬಳಿಕ ಯುವತಿ ಕೋಮಾದಿಂದ ಹೊರಬಂದಿದ್ದು, ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿದೆ ಎಂದು ವರದಿಯಾಗಿದೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:05 am, Wed, 8 May 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ