Viral Video: ರಸ್ತೆ ಮಧ್ಯೆ ಯುವತಿಯ ಹುಚ್ಚಾಟ, ಹೆತ್ತವರೇ ಮಕ್ಕಳು ಹಾದಿ ತಪ್ಪುತ್ತಿದ್ದಾರೆ ಎಂದ ನೆಟ್ಟಿಗರು

ಇತ್ತೀಚಿನ ದಿನಗಳಲ್ಲಿ ರೀಲ್ಸ್ ಮಾಡೋ ಭರದಲ್ಲಿ ಸಾರ್ವಜನಿಕರಿಗೆ ತೊಂದರೆಕೊಡುವಂತಹ ಪ್ರಸಂಗಗಳು ಬಹಳ ಹೆಚ್ಚಾಗುತ್ತಿವೆ. ಇದೇ ರೀತಿಯ ಘಟನೆಯೊಂದು ನಡೆದಿದ್ದು, ವಾಹನಗಳು ಸಂಚರಿಸುತ್ತಿದ್ದ ವೇಳೆಯಲ್ಲಿಯೇ ರಸ್ತೆ ಮಧ್ಯೆ ಕಾಲೇಜು ಯುವತಿಯೊಬ್ಬಳು, ಡಾನ್ಸ್ ಮಾಡುತ್ತಾ ಹುಚ್ಚಾಟ ಮೆರೆದಿದ್ದಾಳೆ. ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಇದೆಂತಹ ಹುಚ್ಚಾಟ ಎಂದು ನೆಟ್ಟಿಗರು ಯುವತಿಯ ವಿರುದ್ಧ ಫುಲ್ ಗರಂ ಆಗಿದ್ದಾರೆ. 

Viral Video: ರಸ್ತೆ ಮಧ್ಯೆ ಯುವತಿಯ ಹುಚ್ಚಾಟ, ಹೆತ್ತವರೇ ಮಕ್ಕಳು ಹಾದಿ ತಪ್ಪುತ್ತಿದ್ದಾರೆ ಎಂದ ನೆಟ್ಟಿಗರು
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 23, 2023 | 5:10 PM

ಇತ್ತೀಚಿನ ದಿನಗಳಲ್ಲಿ ಈ ರೀಲ್ಸ್ ಹುಚ್ಚು ಬಹಳ ಹೆಚ್ಚಾಗಿದೆ. ಕೆಲವೊಬ್ರು ಸಾಮಾಜಿಕ ಜಾಲತಾಣದಲ್ಲಿ ತಾವು ಫೇಮಸ್ ಆಗ್ಬೇಕು ಎಂಬ ಕಾರಣಕ್ಕೆ ಎಂತಹ ಹುಚ್ಚು ಸಾಹಸಕ್ಕೂ ಬೇಕಾದರೂ ಕೈ ಹಾಕುತ್ತಾರೆ. ಹೀಗೆ ರೈಲು, ಮೆಟ್ರೋಗಳಲ್ಲಿ ಡಾನ್ಸ್ ಮಾಡುತ್ತಾ ಹುಚ್ಚಾಟ ಮೆರೆಯುವಂತಹವರ ರೀಲ್ಸ್ ವಿಡಿಯೋಗಳನ್ನು ನಾವೆಲ್ಲರೂ ನೋಡಿರುತ್ತೇವೆ. ಅದರಲ್ಲೂ ಈಗೀಗ ರೀಲ್ಸ್ ಮಾಡೋ ಭರದಲ್ಲಿ ಸಾರ್ವಜನಿಕರಿಗೆ ತೊಂದರೆಕೊಡುವಂತಹ ಪ್ರಸಂಗಗಳು ಬಹಳ ಹೆಚ್ಚಾಗಿವೆ. ಹೆಚ್ಚಿನವರು ತಾವು ಫೇಮಸ್ ಆಗ್ಬೇಕು ಅಂತಾ ರೈಲು ಅಥವಾ ಮೆಟ್ರೋಗಳಲ್ಲಿ ಡಾನ್ಸ್ ವಿಡಿಯೋಗಳನ್ನು ಮಾಡಿದ್ರೆ, ಇಲ್ಲೊಬ್ಬಳು ಕಾಲೇಜು ಯುವತಿ ಹೆದ್ದಾರಿ ಮಧ್ಯೆಯೇ ಡಾನ್ಸ್ ಮಾಡುವ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದಾಳೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಇದೆಂತಹ ಹುಚ್ಚಾಟ ಎಂದು ಯುವತಿಯ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋವನ್ನು ಗೌರಂಗ್ ಭಾರಧ್ವಾಜ್  (@GaurangBharawa1) ಎಂಬವರು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದು, ಯುವತಿಯೊಬ್ಬಳ ರಸ್ತೆ ಮಧ್ಯೆ ಡಾನ್ಸ್ ಮಾಡುತ್ತಾ ಹುಚ್ಚಾಟ ಮೆರೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ಹೆದ್ದಾರಿಯೊಂದರಲ್ಲಿ ಸಾರ್ವಜನಿಕರು ರಸ್ತೆ ದಾಟಲು ಟ್ರಾಫಿಕ್ ಸಿಗ್ನಲ್ ಬಿದ್ದ ವೇಳೆಯಲ್ಲಿ ಕಾಲೇಜು ಯುವತಿಯೊಬ್ಬಳು, ತನ್ನ ಭುಜದ ಮೇಲಿದ್ದ ಬ್ಯಾಗನ್ನು ಎಸೆದು, ರಸ್ತೆ ಮಧ್ಯೆ ಬಂದು ಡಾನ್ಸ್ ಮಾಡುತ್ತಾ, ಹುಚ್ಚಾಟ ಮೆರೆಯುತ್ತಿರುವಂತಹ ದೃಶ್ಯಾವಳಿಯನ್ನು ಕಾಣಬಹುದು.

ಇದನ್ನೂ ಓದಿ: ತನ್ನ ಮೇಲೆ ಚಪ್ಪಲಿ ಎಸೆದವರಿಗೆ ಸರಿಯಾಗಿ ಬುದ್ಧಿ ಕಲಿಸಿದ ಹಾವು 

ಡಿಸೆಂಬರ್ 22 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಮೆಂಟ್ಸ್ಗಳನ್ನು ಪಡೆದುಕೊಂಡಿದೆ.  ಒಬ್ಬ ಬಳಕೆದಾರರು ʼಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ವರ್ತಿಸುವವರ ವಿರುದ್ಧ ಪೋಲಿಸರು ದೂರು ದಾಖಲಿಸಬೇಕುʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇಂದಿನ ಯುವ ಜನತೆ ಎತ್ತ ಸಾಗುತ್ತಿದೆ, ಫೇಮಸ್ ಆಗಬೇಕು ಎನ್ನುವ ಗೋಜಿನಲ್ಲಿ ಇದೆಂತಹ ಹುಚ್ಚಾಟ ಮೆರೆಯುತ್ತಿದ್ದಾರೆʼ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼತಂದೆ ತಾಯಿ ಕಷ್ಟ ಪಟ್ಟು ಮಕ್ಕಳು ಚೆನ್ನಾಗಿ ಓದಿ ಒಂದೊಳ್ಳೆ ಭವಿಷ್ಯವನ್ನು ಕಟ್ಟಿಕೊಳ್ಳಲಿ ಎಂದು ಕಾಲೇಜಿಗೆ ಕಳಿಸಿದ್ರೆ, ಮಕ್ಕಳು ಮಾತ್ರ ಹಾದಿ ತಪ್ಪುತ್ತಿದ್ದಾರೆʼ ಎಂದು ಕಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್