AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಹಬ್ಬವೆಂದು ವಾಟರ್ ಬಲೂನ್​ ಎಸೆದ ಯುವಕ; ಪಲ್ಟಿ ಹೊಡೆದ ಆಟೋ ರಿಕ್ಷಾ: ತಮಾಷೆ ಮಾಡಲು ಹೋಗಿ ಸೀರಿಯಸ್ಸಾದ ಘಟನೆ

ಹೋಳಿ ಹಬ್ಬದ ದಿನ ತಮಾಷೆ ಮಾಡಲು ಹೋಗಿ ಪರಿಸ್ಥಿತಿ ಗಂಭೀರವಾಗಿ ತಿರುಗಿದೆ. ಬಲೂನ್ ಎಸೆದವರು ಸ್ಥಳದಿಂದ ಪರಾರಿಯಾಗುತ್ತಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು. ಬಾಗ್ಪತ್ ಪೊಲೀಸ್ ಅಧಿಕಾರಿಗಳು ಘಟನೆಯನ್ನು ಗಮನಿಸಿದ್ದಾರೆ.

ಹೋಳಿ ಹಬ್ಬವೆಂದು ವಾಟರ್ ಬಲೂನ್​ ಎಸೆದ ಯುವಕ; ಪಲ್ಟಿ ಹೊಡೆದ ಆಟೋ ರಿಕ್ಷಾ: ತಮಾಷೆ ಮಾಡಲು ಹೋಗಿ ಸೀರಿಯಸ್ಸಾದ ಘಟನೆ
ಪಲ್ಟಿ ಹೊಡೆದ ಆಟೋ ರಿಕ್ಷಾ
TV9 Web
| Edited By: |

Updated on: Mar 24, 2022 | 1:26 PM

Share

ಬಾಗ್‌ಪತ್: ಹೋಳಿ ಹಬ್ಬ (Holi Festival) ವನ್ನು ನಾವು ಬಣ್ಣಗಳ ಹಬ್ಬವೆಂದು ಕರೆಯುತ್ತೇವೆ. ಜೊತೆಗೆ ರುಚಿಕರವಾದ ತಿನಿಸು ಮತ್ತು ತಮಾಷೆಯ ಕುಚೇಷ್ಟೆಗಳಿಗೆ ಹೆಸರು ವಾಸಿಯಾಗಿದೆ. ಆದರೆ ಕೆಲವೊಮ್ಮೆ ಈ ಕುಚೇಷ್ಟೆಗಳು ತಪ್ಪು ತಿರುವು ಪಡೆದುಕೊಳ್ಳುತ್ತವೆ ಮತ್ತು ಪರಿಸ್ಥಿತಿ ತಮಾಷೆ ಮಾಡುವ ಬದಲು ಕೆಲವು ಕಠೋರ ಸನ್ನಿವೇಶಗಳಿಗೆ ಕಾರಣವಾಗುತ್ತದೆ. ಅಂತಹದೇ ಒಂದು ವಿಡಿಯೋ ಈಗ ವೈರಲ್ ಆಗಿದೆ. ಹೌದು ಯುಪಿಯ ಬಾಗ್‌ಪತ್‌ನಲ್ಲಿ ಸ್ಥಳೀಯರೋರ್ವರು ಎಸೆದ ನೀರಿನ ಬಲೂನ್‌ ಇಂದ ವೇಗವಾಗಿ ಬಂದ ಆಟೋ-ರಿಕ್ಷಾ ಅಪಘಾತಕ್ಕೀಡಾದಂತಹ ಘಟನೆ ಸಂಭವಿಸಿದೆ. ದೃಶ್ಯಗಳ ಪ್ರಕಾರ, ಆಟೋ-ರಿಕ್ಷಾವು ಅತೀ ವೇಗದಲ್ಲಿ ಚಲಿಸುತ್ತಿದ್ದು, ಮತ್ತು ಹಲವಾರು ಪ್ರಯಾಣಿಕರು ಅದರಲ್ಲಿ ಕುಳಿತುಕೊಂಡಿದ್ದಾರೆ. ವ್ಯಕ್ತಿಯೋರ್ವ ಆಟೋ ರಿಕ್ಷಾ ಮೇಲೆ ಬಲೂನ್ ಎಸೆದಾಗ ಅದು ನಿಯಂತ್ರಣ ತಪ್ಪಿ ತಕ್ಷಣ ಪಲ್ಟಿ ಹೊಡೆಯುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಹೋಳಿ ಹಬ್ಬದ ದಿನ ತಮಾಷೆ ಮಾಡಲು ಹೋಗಿ ಪರಿಸ್ಥಿತಿ ಗಂಭೀರವಾಗಿ ತಿರುಗಿದೆ. ಬಲೂನ್ ಎಸೆದವರು ಸ್ಥಳದಿಂದ ಪರಾರಿಯಾಗುತ್ತಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು. ಬಾಗ್ಪತ್ ಪೊಲೀಸ್ ಅಧಿಕಾರಿಗಳು ಘಟನೆಯನ್ನು ಗಮನಿಸಿದ್ದಾರೆ. ಅಪಘಾತದಲ್ಲಿ ರಿಕ್ಷಾ ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಾಗ್ಪತ್ ವೃತ್ತ ಅಧಿಕಾರಿ ಅನುಜ್ ಮಿಶ್ರಾ ಭಾನುವಾರ ಹೇಳಿದ್ದಾರೆ.

ಇದನ್ನೂ ಓದಿ:

ಉಕ್ರೇನ್​ ಸೈನಿಕನಿಗೆ ಹಣ ಸಹಾಯ ಮಾಡಿದ ರಾಮ್​ ಚರಣ್​; ಆ ವ್ಯಕ್ತಿಯ ಜತೆ ಇದೆ ವಿಶೇಷ ನಂಟು

ಪಾದಯಾತ್ರೆ ನಡೆಸುತ್ತಿದ್ದ ಆಂಧ್ರ ಸಿಎಂ ಸೋದರಿ ವೈ.ಎಸ್.ಶರ್ಮಿಳಾ ಮೇಲೆ ಜೇನುನೊಣ ದಾಳಿ; ಟವೆಲ್​ ಬೀಸುತ್ತ ಓಡಿದ ಕಾರ್ಯಕರ್ತರು

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್