AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಹಬ್ಬವೆಂದು ವಾಟರ್ ಬಲೂನ್​ ಎಸೆದ ಯುವಕ; ಪಲ್ಟಿ ಹೊಡೆದ ಆಟೋ ರಿಕ್ಷಾ: ತಮಾಷೆ ಮಾಡಲು ಹೋಗಿ ಸೀರಿಯಸ್ಸಾದ ಘಟನೆ

ಹೋಳಿ ಹಬ್ಬದ ದಿನ ತಮಾಷೆ ಮಾಡಲು ಹೋಗಿ ಪರಿಸ್ಥಿತಿ ಗಂಭೀರವಾಗಿ ತಿರುಗಿದೆ. ಬಲೂನ್ ಎಸೆದವರು ಸ್ಥಳದಿಂದ ಪರಾರಿಯಾಗುತ್ತಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು. ಬಾಗ್ಪತ್ ಪೊಲೀಸ್ ಅಧಿಕಾರಿಗಳು ಘಟನೆಯನ್ನು ಗಮನಿಸಿದ್ದಾರೆ.

ಹೋಳಿ ಹಬ್ಬವೆಂದು ವಾಟರ್ ಬಲೂನ್​ ಎಸೆದ ಯುವಕ; ಪಲ್ಟಿ ಹೊಡೆದ ಆಟೋ ರಿಕ್ಷಾ: ತಮಾಷೆ ಮಾಡಲು ಹೋಗಿ ಸೀರಿಯಸ್ಸಾದ ಘಟನೆ
ಪಲ್ಟಿ ಹೊಡೆದ ಆಟೋ ರಿಕ್ಷಾ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 24, 2022 | 1:26 PM

Share

ಬಾಗ್‌ಪತ್: ಹೋಳಿ ಹಬ್ಬ (Holi Festival) ವನ್ನು ನಾವು ಬಣ್ಣಗಳ ಹಬ್ಬವೆಂದು ಕರೆಯುತ್ತೇವೆ. ಜೊತೆಗೆ ರುಚಿಕರವಾದ ತಿನಿಸು ಮತ್ತು ತಮಾಷೆಯ ಕುಚೇಷ್ಟೆಗಳಿಗೆ ಹೆಸರು ವಾಸಿಯಾಗಿದೆ. ಆದರೆ ಕೆಲವೊಮ್ಮೆ ಈ ಕುಚೇಷ್ಟೆಗಳು ತಪ್ಪು ತಿರುವು ಪಡೆದುಕೊಳ್ಳುತ್ತವೆ ಮತ್ತು ಪರಿಸ್ಥಿತಿ ತಮಾಷೆ ಮಾಡುವ ಬದಲು ಕೆಲವು ಕಠೋರ ಸನ್ನಿವೇಶಗಳಿಗೆ ಕಾರಣವಾಗುತ್ತದೆ. ಅಂತಹದೇ ಒಂದು ವಿಡಿಯೋ ಈಗ ವೈರಲ್ ಆಗಿದೆ. ಹೌದು ಯುಪಿಯ ಬಾಗ್‌ಪತ್‌ನಲ್ಲಿ ಸ್ಥಳೀಯರೋರ್ವರು ಎಸೆದ ನೀರಿನ ಬಲೂನ್‌ ಇಂದ ವೇಗವಾಗಿ ಬಂದ ಆಟೋ-ರಿಕ್ಷಾ ಅಪಘಾತಕ್ಕೀಡಾದಂತಹ ಘಟನೆ ಸಂಭವಿಸಿದೆ. ದೃಶ್ಯಗಳ ಪ್ರಕಾರ, ಆಟೋ-ರಿಕ್ಷಾವು ಅತೀ ವೇಗದಲ್ಲಿ ಚಲಿಸುತ್ತಿದ್ದು, ಮತ್ತು ಹಲವಾರು ಪ್ರಯಾಣಿಕರು ಅದರಲ್ಲಿ ಕುಳಿತುಕೊಂಡಿದ್ದಾರೆ. ವ್ಯಕ್ತಿಯೋರ್ವ ಆಟೋ ರಿಕ್ಷಾ ಮೇಲೆ ಬಲೂನ್ ಎಸೆದಾಗ ಅದು ನಿಯಂತ್ರಣ ತಪ್ಪಿ ತಕ್ಷಣ ಪಲ್ಟಿ ಹೊಡೆಯುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಹೋಳಿ ಹಬ್ಬದ ದಿನ ತಮಾಷೆ ಮಾಡಲು ಹೋಗಿ ಪರಿಸ್ಥಿತಿ ಗಂಭೀರವಾಗಿ ತಿರುಗಿದೆ. ಬಲೂನ್ ಎಸೆದವರು ಸ್ಥಳದಿಂದ ಪರಾರಿಯಾಗುತ್ತಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು. ಬಾಗ್ಪತ್ ಪೊಲೀಸ್ ಅಧಿಕಾರಿಗಳು ಘಟನೆಯನ್ನು ಗಮನಿಸಿದ್ದಾರೆ. ಅಪಘಾತದಲ್ಲಿ ರಿಕ್ಷಾ ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಾಗ್ಪತ್ ವೃತ್ತ ಅಧಿಕಾರಿ ಅನುಜ್ ಮಿಶ್ರಾ ಭಾನುವಾರ ಹೇಳಿದ್ದಾರೆ.

ಇದನ್ನೂ ಓದಿ:

ಉಕ್ರೇನ್​ ಸೈನಿಕನಿಗೆ ಹಣ ಸಹಾಯ ಮಾಡಿದ ರಾಮ್​ ಚರಣ್​; ಆ ವ್ಯಕ್ತಿಯ ಜತೆ ಇದೆ ವಿಶೇಷ ನಂಟು

ಪಾದಯಾತ್ರೆ ನಡೆಸುತ್ತಿದ್ದ ಆಂಧ್ರ ಸಿಎಂ ಸೋದರಿ ವೈ.ಎಸ್.ಶರ್ಮಿಳಾ ಮೇಲೆ ಜೇನುನೊಣ ದಾಳಿ; ಟವೆಲ್​ ಬೀಸುತ್ತ ಓಡಿದ ಕಾರ್ಯಕರ್ತರು

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?