AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar: ಆಧಾರ್ ಕಾರ್ಡ್​ನಲ್ಲಿದ್ದ ಹೆಸರು ನೋಡಿ ವಿದ್ಯಾರ್ಥಿನಿಗೆ ಅಡ್ಮಿಷನ್ ಕೊಡಲ್ಲ ಎಂದ ಶಾಲೆ!

Viral News: ಉತ್ತರ ಪ್ರದೇಶದ ಮಗುವಿನ ಆಧಾರ್ ಕಾರ್ಡ್​ನಲ್ಲಿ ಆಕೆಯ ಮಧು ಕಾ ಪಂಚ್ವಾ ಬಚ್ಚಾ ಅಥವಾ ಮಧುವಿನ ಐದನೇ ಮಗು ಎಂದು ಬರೆಯಲಾಗಿದೆ. ಇದೇ ಕಾರಣಕ್ಕೆ ಆಕೆಗೆ ಶಾಲೆಯಲ್ಲಿ ಅಡ್ಮಿಷನ್ ನಿರಾಕರಿಸಲಾಗಿದೆ.

Aadhaar: ಆಧಾರ್ ಕಾರ್ಡ್​ನಲ್ಲಿದ್ದ ಹೆಸರು ನೋಡಿ ವಿದ್ಯಾರ್ಥಿನಿಗೆ ಅಡ್ಮಿಷನ್ ಕೊಡಲ್ಲ ಎಂದ ಶಾಲೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 04, 2022 | 6:39 PM

Share

ಬುಡೌನ್: ಉತ್ತರ ಪ್ರದೇಶದ ಬುಡೌನ್‌ನಲ್ಲಿರುವ ಸರ್ಕಾರಿ ಶಾಲೆಯಲ್ಲಿ ವಿಚಿತ್ರ ಕಾರಣವೊಂದಕ್ಕೆ ಮಗುವಿಗೆ ಪ್ರವೇಶ ನಿರಾಕರಿಸಲಾಗಿದೆ. ಆಕೆಯ ಆಧಾರ್ ಕಾರ್ಡ್​ನಲ್ಲಿ (Aadhaar Card) ಆಕೆಯ ಮಧು ಕಾ ಪಂಚ್ವಾ ಬಚ್ಚಾ ಅಥವಾ ಮಧುವಿನ ಐದನೇ ಮಗು (Baby Five of Madhu) ಎಂದು ಬರೆಯಲಾಗಿದೆ. ಇದೇ ಕಾರಣಕ್ಕೆ ಆಕೆಗೆ ಶಾಲೆಯಲ್ಲಿ ಅಡ್ಮಿಷನ್ ನಿರಾಕರಿಸಲಾಗಿದೆ ಎಂದು ಶಾಲಾ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಆಧಾರ್ ಕಾರ್ಡ್‌ನಲ್ಲಿ ಆಧಾರ್ ಸಂಖ್ಯೆಯೂ ಇರಲಿಲ್ಲ. ಆಕೆಯ ಹೆಸರೂ ಇರದಿದ್ದ ಹಿನ್ನೆಲೆಯಲ್ಲಿ ಆಕೆಗೆ ಪ್ರವೇಶ ನೀಡಲು ಶಾಲಾ ಆಡಳಿತ ಸಿಬ್ಬಂದಿ ನಿರಾಕರಿಸಿದ್ದಾರೆ.

ಶನಿವಾರ ಬಿಲ್ಸಿ ತಹಸಿಲ್‌ನ ರಾಯ್‌ಪುರ ಗ್ರಾಮದ ನಿವಾಸಿ ದಿನೇಶ್ ತನ್ನ ಮಗಳು ಆರತಿಗೆ ಪ್ರವೇಶ ಪಡೆಯಲು ಪ್ರಾಥಮಿಕ ಶಾಲೆಗೆ ಬಂದಾಗ ಈ ವಿಷಯ ಬೆಳಕಿಗೆ ಬಂದಿದೆ. ಏಕ್ತಾ ವರ್ಷಿಣಿ ಎಂಬ ಶಿಕ್ಷಕಿ ಆಕೆಗೆ ಪ್ರವೇಶ ನಿರಾಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಆಧಾರ್ ಕಾರ್ಡ್ ಸರಿಪಡಿಸಿಕೊಡುವಂತೆ ಶಿಕ್ಷಕರು ದಿನೇಶ್‌ಗೆ ತಿಳಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ದೀಪಾ ರಂಜನ್ ಮಾತನಾಡಿ, ‘ಅಂಚೆ ಕಚೇರಿ, ಬ್ಯಾಂಕ್​ಗಳಲ್ಲಿ ಆಧಾರ್ ಕಾರ್ಡ್ ಸಿದ್ಧಪಡಿಸಲಾಗುತ್ತಿದೆ. ನಿರ್ಲಕ್ಷ್ಯದಿಂದ ಈ ಪ್ರಮಾದ ನಡೆದಿದೆ. ಬ್ಯಾಂಕ್, ಅಂಚೆ ಕಚೇರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ. ಆ ಬಾಲಕಿಯ ಆಧಾರ್ ಕಾರ್ಡ್‌ನ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಧುವಿನ 5ನೇ ಮಗು ಎಂಬ ಹೆಸರಿರುವ ಆ ಆಧಾರ್ ಕಾರ್ಡ್​ ನೋಡಿ ನೆಟ್ಟಿಗರು ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video: ದೇವಸ್ಥಾನದ ಹೊರಗೆ ಬೆಂಕಿ ಹೊತ್ತಿಕೊಂಡು ಹೊಸ ರಾಯಲ್ ಎನ್​ಫೀಲ್ಡ್​ ಬೈಕ್​ ಸ್ಫೋಟ

PAN-Aadhaar Linking: ಪ್ಯಾನ್- ಆಧಾರ್ ಜೋಡಣೆ ಆಗಿಲ್ಲವೆ? ಚಿಂತೆ ಮಾಡಬೇಡಿ, ಇನ್ನೂ ಒಂದು ಅವಕಾಶವಿದೆ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು