AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar: ಆಧಾರ್ ಕಾರ್ಡ್​ನಲ್ಲಿದ್ದ ಹೆಸರು ನೋಡಿ ವಿದ್ಯಾರ್ಥಿನಿಗೆ ಅಡ್ಮಿಷನ್ ಕೊಡಲ್ಲ ಎಂದ ಶಾಲೆ!

Viral News: ಉತ್ತರ ಪ್ರದೇಶದ ಮಗುವಿನ ಆಧಾರ್ ಕಾರ್ಡ್​ನಲ್ಲಿ ಆಕೆಯ ಮಧು ಕಾ ಪಂಚ್ವಾ ಬಚ್ಚಾ ಅಥವಾ ಮಧುವಿನ ಐದನೇ ಮಗು ಎಂದು ಬರೆಯಲಾಗಿದೆ. ಇದೇ ಕಾರಣಕ್ಕೆ ಆಕೆಗೆ ಶಾಲೆಯಲ್ಲಿ ಅಡ್ಮಿಷನ್ ನಿರಾಕರಿಸಲಾಗಿದೆ.

Aadhaar: ಆಧಾರ್ ಕಾರ್ಡ್​ನಲ್ಲಿದ್ದ ಹೆಸರು ನೋಡಿ ವಿದ್ಯಾರ್ಥಿನಿಗೆ ಅಡ್ಮಿಷನ್ ಕೊಡಲ್ಲ ಎಂದ ಶಾಲೆ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 04, 2022 | 6:39 PM

ಬುಡೌನ್: ಉತ್ತರ ಪ್ರದೇಶದ ಬುಡೌನ್‌ನಲ್ಲಿರುವ ಸರ್ಕಾರಿ ಶಾಲೆಯಲ್ಲಿ ವಿಚಿತ್ರ ಕಾರಣವೊಂದಕ್ಕೆ ಮಗುವಿಗೆ ಪ್ರವೇಶ ನಿರಾಕರಿಸಲಾಗಿದೆ. ಆಕೆಯ ಆಧಾರ್ ಕಾರ್ಡ್​ನಲ್ಲಿ (Aadhaar Card) ಆಕೆಯ ಮಧು ಕಾ ಪಂಚ್ವಾ ಬಚ್ಚಾ ಅಥವಾ ಮಧುವಿನ ಐದನೇ ಮಗು (Baby Five of Madhu) ಎಂದು ಬರೆಯಲಾಗಿದೆ. ಇದೇ ಕಾರಣಕ್ಕೆ ಆಕೆಗೆ ಶಾಲೆಯಲ್ಲಿ ಅಡ್ಮಿಷನ್ ನಿರಾಕರಿಸಲಾಗಿದೆ ಎಂದು ಶಾಲಾ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಆಧಾರ್ ಕಾರ್ಡ್‌ನಲ್ಲಿ ಆಧಾರ್ ಸಂಖ್ಯೆಯೂ ಇರಲಿಲ್ಲ. ಆಕೆಯ ಹೆಸರೂ ಇರದಿದ್ದ ಹಿನ್ನೆಲೆಯಲ್ಲಿ ಆಕೆಗೆ ಪ್ರವೇಶ ನೀಡಲು ಶಾಲಾ ಆಡಳಿತ ಸಿಬ್ಬಂದಿ ನಿರಾಕರಿಸಿದ್ದಾರೆ.

ಶನಿವಾರ ಬಿಲ್ಸಿ ತಹಸಿಲ್‌ನ ರಾಯ್‌ಪುರ ಗ್ರಾಮದ ನಿವಾಸಿ ದಿನೇಶ್ ತನ್ನ ಮಗಳು ಆರತಿಗೆ ಪ್ರವೇಶ ಪಡೆಯಲು ಪ್ರಾಥಮಿಕ ಶಾಲೆಗೆ ಬಂದಾಗ ಈ ವಿಷಯ ಬೆಳಕಿಗೆ ಬಂದಿದೆ. ಏಕ್ತಾ ವರ್ಷಿಣಿ ಎಂಬ ಶಿಕ್ಷಕಿ ಆಕೆಗೆ ಪ್ರವೇಶ ನಿರಾಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಆಧಾರ್ ಕಾರ್ಡ್ ಸರಿಪಡಿಸಿಕೊಡುವಂತೆ ಶಿಕ್ಷಕರು ದಿನೇಶ್‌ಗೆ ತಿಳಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ದೀಪಾ ರಂಜನ್ ಮಾತನಾಡಿ, ‘ಅಂಚೆ ಕಚೇರಿ, ಬ್ಯಾಂಕ್​ಗಳಲ್ಲಿ ಆಧಾರ್ ಕಾರ್ಡ್ ಸಿದ್ಧಪಡಿಸಲಾಗುತ್ತಿದೆ. ನಿರ್ಲಕ್ಷ್ಯದಿಂದ ಈ ಪ್ರಮಾದ ನಡೆದಿದೆ. ಬ್ಯಾಂಕ್, ಅಂಚೆ ಕಚೇರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ. ಆ ಬಾಲಕಿಯ ಆಧಾರ್ ಕಾರ್ಡ್‌ನ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಧುವಿನ 5ನೇ ಮಗು ಎಂಬ ಹೆಸರಿರುವ ಆ ಆಧಾರ್ ಕಾರ್ಡ್​ ನೋಡಿ ನೆಟ್ಟಿಗರು ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video: ದೇವಸ್ಥಾನದ ಹೊರಗೆ ಬೆಂಕಿ ಹೊತ್ತಿಕೊಂಡು ಹೊಸ ರಾಯಲ್ ಎನ್​ಫೀಲ್ಡ್​ ಬೈಕ್​ ಸ್ಫೋಟ

PAN-Aadhaar Linking: ಪ್ಯಾನ್- ಆಧಾರ್ ಜೋಡಣೆ ಆಗಿಲ್ಲವೆ? ಚಿಂತೆ ಮಾಡಬೇಡಿ, ಇನ್ನೂ ಒಂದು ಅವಕಾಶವಿದೆ

ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್