Video Viral: ವಿಸರ್ಜನೆಯ ವೇಳೆ ಗಣಪನ ಅಪ್ಪಿಕೊಂಡು ಕಣ್ಣೀರಿಟ್ಟ ಬಾಲಕ; ವಿಡಿಯೋ ವೈರಲ್​​

ವಿಡಿಯೋದಲ್ಲಿ ಗಣಪನ ಅಪ್ಪಿಕೊಂಡು ಕಣ್ಣೀರಿಟ್ಟ ಬಾಲಕನ ಹೆಸರು ಅಭಿನವ್ ಅರೋರಾ. ಅಭಿನವ್ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿದ್ದು, ಇನ್ಸ್ಟಾಗ್ರಾಮ್​​ನಲ್ಲಿ 9.3 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿದ್ದಾನೆ. ಆಧ್ಯಾತ್ಮಿಕ ವಿಷಯ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿರುವ ಅಭಿನವ್ ಹಿಂದೂ ಹಬ್ಬಗಳನ್ನು ಆಚರಿಸುವುದು, ಹಿಂದೂ ಧರ್ಮಗ್ರಂಥಗಳ ಬಗೆಗಿನ ಮಾಹಿತಿಯನ್ನು ಹಂಚಿಕೊಳ್ಳುತ್ತಿರುತ್ತಾನೆ.

Video Viral: ವಿಸರ್ಜನೆಯ ವೇಳೆ ಗಣಪನ ಅಪ್ಪಿಕೊಂಡು ಕಣ್ಣೀರಿಟ್ಟ ಬಾಲಕ;  ವಿಡಿಯೋ ವೈರಲ್​​
Abhinav Arora
Follow us
|

Updated on:Sep 11, 2024 | 11:00 AM

ಬಾಲಕನೊಬ್ಬ ಗಣಪತಿ ಮೂರ್ತಿಯ ಮುಂದೆ ಕುಳಿತು ವಿಸರ್ಜನೆ ಮಾಡದಂತೆ ಹೇಳುತ್ತಾ ಅಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಿತ್ತಳೆ ಬಣ್ಣದ ಕುರ್ತಾ ಧರಿಸಿ ನದಿಯ ದಡದಲ್ಲಿ ಕುಳಿತಿದ್ದ ಬಾಲಕ ಗಣೇಶನ ಮೂರ್ತಿಗೆ ಲಡ್ಡೂ ತಿನ್ನಿಸುತ್ತಾ ಅಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ನೆಟ್ಟಿಗರ ಮನಗೆದ್ದಿದ್ದು ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ.

abhinavaroraofficial ಎಂಬ ಇನ್ಸ್ಟಾಗ್​ರಾಮ್​ನ್ಲಲಿ ಹಂಚಿಕೊಂಡಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಸೆ.04 ರಂದು ಹಂಚಿಕೊಂಡಿರುವ ವಿಡಿಯೋ ಕೇವಲ 7 ದಿನದಲ್ಲಿ 23.9 ಮಿಲಿಯನ್ ಅಂದರೆ 2ಕೋಟಿಗೂ ಅಧಿಕ​ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದಂತೆ ಬಾಲಕನ ಭಕ್ತಿಗೆ ನೆಟ್ಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭೂಮಿಯತ್ತ ಧಾವಿಸುತ್ತಿದೆ ಬೃಹತ್‌ ಕ್ಷುದ್ರಗ್ರಹ, ಎಚ್ಚರಿಕೆ ನೀಡಿದ ಇಸ್ರೋ

ಅಭಿನವ್ ಅರೋರಾ ಯಾರು?

ವಿಡಿಯೋದಲ್ಲಿ ಗಣಪನ ಅಪ್ಪಿಕೊಂಡು ಕಣ್ಣೀರಿಟ್ಟ ಬಾಲಕನ ಹೆಸರು ಅಭಿನವ್ ಅರೋರಾ. ಅಭಿನವ್ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿದ್ದು, ಇನ್ಸ್ಟಾಗ್ರಾಮ್​​ನಲ್ಲಿ 9.3 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿದ್ದಾನೆ. ಆಧ್ಯಾತ್ಮಿಕ ವಿಷಯ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿರುವ ಅಭಿನವ್ ಹಿಂದೂ ಹಬ್ಬಗಳನ್ನು ಆಚರಿಸುವುದು, ಹಿಂದೂ ಧರ್ಮಗ್ರಂಥಗಳನ್ನು ಓದುವುದು ಮತ್ತು ಧಾರ್ಮಿಕ ಗುರುಗಳನ್ನು ಭೇಟಿಯಾಗುವುದನ್ನು ತೋರಿಸುವ ಚಿತ್ರಗಳು ಮತ್ತು ವೀಡಿಯೊಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಿರುತ್ತಾನೆ. ಇದಲ್ಲದೇ ಈ ಬಾಲಕನನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಭಾರತದ ಅತ್ಯಂತ ಕಿರಿಯ ಆಧ್ಯಾತ್ಮಿಕ ವಾಗ್ಮಿ ಎಂದು ಗೌರವಿಸಿದ್ದರು. ಅಭಿನವ್ ವಾಣಿಜ್ಯೋದ್ಯಮಿ, ಲೇಖಕ ಮತ್ತು TEDx ಸ್ಪೀಕರ್ ತರುಣ್ ರಾಜ್ ಅರೋರಾ ಅವರ ಮಗ .

ವೈರಲ್​ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 am, Wed, 11 September 24

ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು