AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video:  ತುಳು ಯಕ್ಷಗಾನ ಪ್ರಸಂಗದಲ್ಲೂ ʼದರ್ಶನ್‌-ಪವಿತ್ರʼ ಹವಾ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌, ಪವಿತ್ರ ಗೌಡ ಸೇರಿದಂತೆ ಇತರೆ 10 ಜನರನ್ನು ಬಂಧಿಸಲಾಗಿದೆ. ಈ ಕೊಲೆ ಪ್ರಕರಣ ದಿನ ಕಳೆದಂತೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಧ್ಯಮ ಸೋಷಿಯಲ್‌ ಮೀಡಿಯಾದಗಳಲ್ಲಿ ಈ ಪ್ರಕರಣದ್ದೇ ಸುದ್ದಿ. ಇದೀಗ ದರ್ಶನ್‌, ಪವಿತ್ರ ಮ್ಯಾಟರ್ ಯಕ್ಷಗಾನಕ್ಕೂ ಎಂಟ್ರಿ ಕೊಟ್ಟಿದ್ದು, ಈ ಕುರಿತ ವಿಡಿಯೋ ತುಣುಕೊಂದು ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ‌

Viral Video:  ತುಳು ಯಕ್ಷಗಾನ ಪ್ರಸಂಗದಲ್ಲೂ ʼದರ್ಶನ್‌-ಪವಿತ್ರʼ ಹವಾ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on:Jun 21, 2024 | 12:43 PM

Share

ನಟಿ ಪವಿತ್ರ ಗೌಡ ಅವರಿಗೆ ಅಶ್ಲೀಲ ಮೆಸೇಜ್‌ ಮಾಡಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರ ಗೌಡ ಸೇರಿದಂತೆ 10 ಜನರನ್ನು ಬಂಧಿಸಲಾಗಿದೆ. ಈ ಕೊಲೆ ಕೇಸ್‌ ಸದ್ಯ ಸಂಚಲನ ಸೃಷ್ಟಿಸಿದ್ದು, ಸುದ್ದಿ ಮಾಧ್ಯಮ, ಟ್ರೋಲ್‌ ಪೇಜ್‌,  ಸೋಷಿಯಲ್‌ ಮೀಡಿಯಾಗಳಲ್ಲಿ ಈ ಕೊಲೆ ಪ್ರಕರಣ ಸುದ್ದಿಯದ್ದೇ ಚರ್ಚೆ ನಡೆಯುತ್ತಿದೆ. ಇದೀಗ ನಟ ದರ್ಶನ್‌ ಮತ್ತು ಪವಿತ್ರಾ ಮ್ಯಾಟರ್ ಯಕ್ಷಗಾನ ಪ್ರಸಂಗಕ್ಕೂ ಎಂಟ್ರಿ ಕೊಟ್ಟಿದ್ದು, ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ. ‌

ಯಕ್ಷಗಾನ ಪ್ರಸಂಗದಲ್ಲಿ ಕೆಲಮೊಮ್ಮೆ ಪ್ರಸಕ್ತ ವಿದ್ಯಮಾನಗಳ ಕುರಿತ ಹಾಸ್ಯಮಯ ಸಂಭಾಷಣೆಗಳೂ ಕೂಡಾ ನಡೆಯುತ್ತವೆ. ಈ ಸನ್ನಿವೇಶಗಳು ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲುವಂತೆ ಮಾಡುತ್ತದೆ. ಇತ್ತೀಚಿಗಷ್ಟೇ ಯಕ್ಷಗಾನ ಪ್ರಸಂಗವೊಂದರಲ್ಲಿ ಪ್ರಜ್ವಲ್‌ ರೇವಣ್ಣ ಹೆಸರು ಕೂಡಾ ಪ್ರಸ್ತಾಪವಾಗಿತ್ತು. ಈ ವಿಡಿಯೋವಂತೂ ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಇದೀಗ ತುಳು ಯಕ್ಷಗಾನ ಬಯಲಾಟವೊಂದರಲ್ಲಿ ರಂಗಸ್ಥಳದಲ್ಲಿ ಹಾಸ್ಯಕಲಾವಿದರ ನಡುವೆ ನಡೆದ ಸಂಭಾಷಣೆಯಲ್ಲಿ  ದರ್ಶನ್‌ ಮತ್ತು ಪವಿತ್ರಾ ಹೆಸರು ಪ್ರಸ್ತಾಪವಾಗಿದೆ.  ಈ ವಿಡಿಯೋ ಕೂಡಾ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋವನ್ನು ಸ್ವಸ್ತಿಕ್‌ ಕನ್ಯಾಡಿ (@swasthik_kanyadi) ಎಂಬವರು ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಯಕ್ಷಗಾನದಲ್ಲಿ ದರ್ಶನ್-ಪವಿತ್ರ ಮ್ಯಾಟರ್‌” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಯಕ್ಷಗಾನ ಬಯಲಾಟದಲ್ಲಿ ಹಾಸ್ಯಕಲಾವಿದರು ದರ್ಶನ್‌ ಮತ್ತು ಪವಿತ್ರ ಹೆಸರನ್ನು ಪ್ರಸ್ತಾಪಿಸಿದ ದೃಶ್ಯವನ್ನು ಕಾಣಬಹುದು. ಅದರಲ್ಲಿ ಒಬ್ಬ ಕಲಾವಿದ ಶನಿವಾರ ದರ್ಶನ್‌ ಬೇಕೇ ಬೇಕು ಎಂದು ಹೇಳುತ್ತಾರೆ. ಆ ಸಂದರ್ಭದಲ್ಲಿ ದರ್ಶನ್‌ ಬೇಡ, ದರ್ಶನದ ವ್ಯವಸ್ಥೆ ಮಾಡಿದ್ರೆ ನಾವು ಕೂಡಾ ಒಳಗೆ ಇರ್ಬೇಕಾಗುತ್ತದೆ. ದರ್ಶನವೂ ಬೇಡ ಪವಿತ್ರವೂ ಬೇಡ ಎಂದು ಹೇಳುವ ಹಾಸ್ಯಮಯ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಪ್ರತಿನಿತ್ಯ ಪೂಜಾ ಸಮಯದಲ್ಲಿ ಆಂಜನೇಯ ದೇವಾಲಯಕ್ಕೆ ಭೇಟಿ ನೀಡುವ ಶ್ವಾನ; ಇಲ್ಲಿದೆ ನೋಡಿ ವಿಡಿಯೋ

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ  11 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಹಾಸ್ಯಮಯ ದೃಶ್ಯ ನೋಡುಗರನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:50 am, Thu, 20 June 24

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?