AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video:  ತುಳು ಯಕ್ಷಗಾನ ಪ್ರಸಂಗದಲ್ಲೂ ʼದರ್ಶನ್‌-ಪವಿತ್ರʼ ಹವಾ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌, ಪವಿತ್ರ ಗೌಡ ಸೇರಿದಂತೆ ಇತರೆ 10 ಜನರನ್ನು ಬಂಧಿಸಲಾಗಿದೆ. ಈ ಕೊಲೆ ಪ್ರಕರಣ ದಿನ ಕಳೆದಂತೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಧ್ಯಮ ಸೋಷಿಯಲ್‌ ಮೀಡಿಯಾದಗಳಲ್ಲಿ ಈ ಪ್ರಕರಣದ್ದೇ ಸುದ್ದಿ. ಇದೀಗ ದರ್ಶನ್‌, ಪವಿತ್ರ ಮ್ಯಾಟರ್ ಯಕ್ಷಗಾನಕ್ಕೂ ಎಂಟ್ರಿ ಕೊಟ್ಟಿದ್ದು, ಈ ಕುರಿತ ವಿಡಿಯೋ ತುಣುಕೊಂದು ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ‌

Viral Video:  ತುಳು ಯಕ್ಷಗಾನ ಪ್ರಸಂಗದಲ್ಲೂ ʼದರ್ಶನ್‌-ಪವಿತ್ರʼ ಹವಾ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Jun 21, 2024 | 12:43 PM

Share

ನಟಿ ಪವಿತ್ರ ಗೌಡ ಅವರಿಗೆ ಅಶ್ಲೀಲ ಮೆಸೇಜ್‌ ಮಾಡಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರ ಗೌಡ ಸೇರಿದಂತೆ 10 ಜನರನ್ನು ಬಂಧಿಸಲಾಗಿದೆ. ಈ ಕೊಲೆ ಕೇಸ್‌ ಸದ್ಯ ಸಂಚಲನ ಸೃಷ್ಟಿಸಿದ್ದು, ಸುದ್ದಿ ಮಾಧ್ಯಮ, ಟ್ರೋಲ್‌ ಪೇಜ್‌,  ಸೋಷಿಯಲ್‌ ಮೀಡಿಯಾಗಳಲ್ಲಿ ಈ ಕೊಲೆ ಪ್ರಕರಣ ಸುದ್ದಿಯದ್ದೇ ಚರ್ಚೆ ನಡೆಯುತ್ತಿದೆ. ಇದೀಗ ನಟ ದರ್ಶನ್‌ ಮತ್ತು ಪವಿತ್ರಾ ಮ್ಯಾಟರ್ ಯಕ್ಷಗಾನ ಪ್ರಸಂಗಕ್ಕೂ ಎಂಟ್ರಿ ಕೊಟ್ಟಿದ್ದು, ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ. ‌

ಯಕ್ಷಗಾನ ಪ್ರಸಂಗದಲ್ಲಿ ಕೆಲಮೊಮ್ಮೆ ಪ್ರಸಕ್ತ ವಿದ್ಯಮಾನಗಳ ಕುರಿತ ಹಾಸ್ಯಮಯ ಸಂಭಾಷಣೆಗಳೂ ಕೂಡಾ ನಡೆಯುತ್ತವೆ. ಈ ಸನ್ನಿವೇಶಗಳು ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲುವಂತೆ ಮಾಡುತ್ತದೆ. ಇತ್ತೀಚಿಗಷ್ಟೇ ಯಕ್ಷಗಾನ ಪ್ರಸಂಗವೊಂದರಲ್ಲಿ ಪ್ರಜ್ವಲ್‌ ರೇವಣ್ಣ ಹೆಸರು ಕೂಡಾ ಪ್ರಸ್ತಾಪವಾಗಿತ್ತು. ಈ ವಿಡಿಯೋವಂತೂ ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಇದೀಗ ತುಳು ಯಕ್ಷಗಾನ ಬಯಲಾಟವೊಂದರಲ್ಲಿ ರಂಗಸ್ಥಳದಲ್ಲಿ ಹಾಸ್ಯಕಲಾವಿದರ ನಡುವೆ ನಡೆದ ಸಂಭಾಷಣೆಯಲ್ಲಿ  ದರ್ಶನ್‌ ಮತ್ತು ಪವಿತ್ರಾ ಹೆಸರು ಪ್ರಸ್ತಾಪವಾಗಿದೆ.  ಈ ವಿಡಿಯೋ ಕೂಡಾ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋವನ್ನು ಸ್ವಸ್ತಿಕ್‌ ಕನ್ಯಾಡಿ (@swasthik_kanyadi) ಎಂಬವರು ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಯಕ್ಷಗಾನದಲ್ಲಿ ದರ್ಶನ್-ಪವಿತ್ರ ಮ್ಯಾಟರ್‌” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಯಕ್ಷಗಾನ ಬಯಲಾಟದಲ್ಲಿ ಹಾಸ್ಯಕಲಾವಿದರು ದರ್ಶನ್‌ ಮತ್ತು ಪವಿತ್ರ ಹೆಸರನ್ನು ಪ್ರಸ್ತಾಪಿಸಿದ ದೃಶ್ಯವನ್ನು ಕಾಣಬಹುದು. ಅದರಲ್ಲಿ ಒಬ್ಬ ಕಲಾವಿದ ಶನಿವಾರ ದರ್ಶನ್‌ ಬೇಕೇ ಬೇಕು ಎಂದು ಹೇಳುತ್ತಾರೆ. ಆ ಸಂದರ್ಭದಲ್ಲಿ ದರ್ಶನ್‌ ಬೇಡ, ದರ್ಶನದ ವ್ಯವಸ್ಥೆ ಮಾಡಿದ್ರೆ ನಾವು ಕೂಡಾ ಒಳಗೆ ಇರ್ಬೇಕಾಗುತ್ತದೆ. ದರ್ಶನವೂ ಬೇಡ ಪವಿತ್ರವೂ ಬೇಡ ಎಂದು ಹೇಳುವ ಹಾಸ್ಯಮಯ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಪ್ರತಿನಿತ್ಯ ಪೂಜಾ ಸಮಯದಲ್ಲಿ ಆಂಜನೇಯ ದೇವಾಲಯಕ್ಕೆ ಭೇಟಿ ನೀಡುವ ಶ್ವಾನ; ಇಲ್ಲಿದೆ ನೋಡಿ ವಿಡಿಯೋ

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ  11 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಹಾಸ್ಯಮಯ ದೃಶ್ಯ ನೋಡುಗರನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:50 am, Thu, 20 June 24

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!