AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಂತಾರ ಸಿನಿಮಾ ಹಾಡನ್ನು ಕನ್ನಡದಲ್ಲಿ ಹಾಡಿದ ಹಿಂದಿ ಸೀರಿಯಲ್ ನಟಿ

ಕಾಂತರ ಚಲನಚಿತ್ರದ ಕರಮದ ಕಲ್ಲನು ಎಡವಿದ ಮನುಜನ ಬೆರಳಿನ ಗಾಯವು... ಮಾಯದು... ಹಾಡನ್ನು ನಟಿ ತೇಜಸ್ವಿ ಪ್ರಕಾಶ್ ಹಾಡಿದ್ದು, ಆ ವಿಡಿಯೊವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Viral Video: ಕಾಂತಾರ ಸಿನಿಮಾ ಹಾಡನ್ನು ಕನ್ನಡದಲ್ಲಿ ಹಾಡಿದ ಹಿಂದಿ ಸೀರಿಯಲ್ ನಟಿ
ತೇಜಸ್ವಿ ಪ್ರಕಾಶ್
ಅಕ್ಷಯ್​ ಪಲ್ಲಮಜಲು​​
|

Updated on:Mar 08, 2023 | 4:33 PM

Share

ಹಿಂದಿ ಸೀರಿಯಲ್ ನಟಿ ತೇಜಸ್ವಿ ಪ್ರಕಾಶ್ (Tejaswi Prakash) ಅವರು ಕಾಂತಾರ ಚಿತ್ರದ ಕರಮದ ಕಲ್ಲನು ಎಡವಿದ ಮನುಜನ ಬೆರಳಿನ ಗಾಯವು… ಮಾಯದು…ಹಾಡನ್ನು ಹಾಡಿರುವ ವಿಡಿಯೊ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿದೆ. ಕಾಂತಾರ ಚಿತ್ರ 2022ರ ಬ್ಲಾಕ್‌ಬಸ್ಟರ್ ಹಿಟ್ ಚಿತ್ರವಾಗಿದೆ. ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಸಿನಿ ರಸಿಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಭಾರತ ಚಿತ್ರರಂಗದ ಸಿನಿತಾರೆಯರು ಕೂಡಾ ಈ ಚಿತ್ರವನ್ನು ಮೆಚ್ಚಿ ಕೊಂಡಾಡಿದ್ದಾರೆ. ಈ ಚಿತ್ರದ ಕಥೆ, ಪಾತ್ರಗಳು ಎಷ್ಟೊಂದು ಅದ್ಭುತವಾಗಿದೆಯೋ ಹಾಗೇನೆ ಈ ಚಲನಚಿತ್ರದಲ್ಲಿನ ಪ್ರತಿಯೊಂದು ಹಾಡು ಕೂಡಾ ಸೂಪರ್ ಹಿಟ್ ಆಗಿದೆ. ಬಹಳ ಅರ್ಥಪೂರ್ಣವಾದ ಹಾಡುಗಳನ್ನು ಈ ಚಿತ್ರದಲ್ಲಿ ಕಾಣಬಹುದು. ಬಿಗ್‌ಬಾಸ್ ಸೀಸನ್ 15 ಹಿಂದಿ ಅವತರಣಿಕೆಯ ಸ್ಪರ್ಧಿ ಹಾಗೂ ‘ನಾಗಿನ್ 6’ ಧಾರಾವಹಿಯ ನಟಿ ತೇಜಸ್ವಿ ಪ್ರಕಾಶ್ ಅವರು ಇತ್ತೀಚಿಗೆ ಕಾಂತಾರ ಚಿತ್ರದ ಹಾಡನ್ನು ಹಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾಂತಾರ ಚಲನಚಿತ್ರದ ಕರಮದ ಕಲ್ಲನು ಎಡವಿದ ಮನುಜನ ಬೆರಳಿನ ಗಾಯವು… ಮಾಯದು… ಹಾಡನ್ನು ನಟಿ ತೇಜಸ್ವಿ ಪ್ರಕಾಶ್ ಹಾಡಿದ್ದು, ಆ ವಿಡಿಯೊವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕನ್ನಡ ಭಾಷೆ ಬರದಿದ್ದರೂ ಕೂಡಾ ನಟಿ ಈ ಹಾಡನ್ನು ಬಹಳ ಅದ್ಭುತವಾಗಿ ಹಾಡಿದ್ದು, ಇವರ ಈ ಪ್ರಯತ್ನಕ್ಕೆ ಎಲ್ಲೆಡೆಯಿಂದ ಪ್ರಶಂಸೆ ದೊರಕಿದೆ. ಹಾಗೂ ಇವರ ಸುಮಧುರ ಕಂಠಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video : ಮದುವೆಗೆ ಬಂದವರು ಆಧಾರ ಕಾರ್ಡ್​ ತೋರಿಸಿದರೆ ಮಾತ್ರ ಔತಣ

ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿರುವ ಈ ವಿಡಿಯೊ ಇಲ್ಲಿಯವರೆಗೆ 2.7 ಮಿಲಿಯನ್ ವೀಕ್ಷಣೆಯನ್ನು ಪಡೆದುಕೊಂಡಿದೆ. ಹಾಗೂ 365 ಸಾವಿರ ಲೈಕ್ಸ್ ಮತ್ತು 40.8 ಸಾವಿರ ಕಮೆಂಟ್ ಪಡೆದುಕೊಂಡಿದೆ. ಒಬ್ಬ ಬಳಕೆದಾರರು ನೀವು ಬಹಳ ಸುಂದರವಾಗಿ ಹಾಡುತ್ತಿರಾ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನೊಬ್ಬ ಬಳಕೆದಾರರು, ಇದು ನನ್ನ ಮೆಚ್ಚಿನ ಹಾಡುಗಳಲ್ಲಿ ಒಂದಾಗಿದೆ. ನಿಮ್ಮ ಧ್ವನಿ ಅದ್ಭುತವಾಗಿದೆ ಹಾಗೂ ಕನ್ನಡ ಹಾಡನ್ನು ಹಾಡುವ ನಿಮ್ಮ ಪ್ರಯತ್ನಕ್ಕೆ ನನ್ನದೊಂದು ಸಲಾಂ ಎಂದು ಕಮೆಂಟ್ ಮಾಡಿದ್ದಾರೆ. ನಟಿಯ ಗಾಯನ ಶೈಲಿಗೆ ಸಕರಾತ್ಮಕ ಕಮೆಂಟ್‌ಗಳು ಬಂದಿವೆ.

Published On - 4:26 pm, Wed, 8 March 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ