AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಂತಾರ ಸಿನಿಮಾ ಹಾಡನ್ನು ಕನ್ನಡದಲ್ಲಿ ಹಾಡಿದ ಹಿಂದಿ ಸೀರಿಯಲ್ ನಟಿ

ಕಾಂತರ ಚಲನಚಿತ್ರದ ಕರಮದ ಕಲ್ಲನು ಎಡವಿದ ಮನುಜನ ಬೆರಳಿನ ಗಾಯವು... ಮಾಯದು... ಹಾಡನ್ನು ನಟಿ ತೇಜಸ್ವಿ ಪ್ರಕಾಶ್ ಹಾಡಿದ್ದು, ಆ ವಿಡಿಯೊವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Viral Video: ಕಾಂತಾರ ಸಿನಿಮಾ ಹಾಡನ್ನು ಕನ್ನಡದಲ್ಲಿ ಹಾಡಿದ ಹಿಂದಿ ಸೀರಿಯಲ್ ನಟಿ
ತೇಜಸ್ವಿ ಪ್ರಕಾಶ್
ಅಕ್ಷಯ್​ ಪಲ್ಲಮಜಲು​​
|

Updated on:Mar 08, 2023 | 4:33 PM

Share

ಹಿಂದಿ ಸೀರಿಯಲ್ ನಟಿ ತೇಜಸ್ವಿ ಪ್ರಕಾಶ್ (Tejaswi Prakash) ಅವರು ಕಾಂತಾರ ಚಿತ್ರದ ಕರಮದ ಕಲ್ಲನು ಎಡವಿದ ಮನುಜನ ಬೆರಳಿನ ಗಾಯವು… ಮಾಯದು…ಹಾಡನ್ನು ಹಾಡಿರುವ ವಿಡಿಯೊ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿದೆ. ಕಾಂತಾರ ಚಿತ್ರ 2022ರ ಬ್ಲಾಕ್‌ಬಸ್ಟರ್ ಹಿಟ್ ಚಿತ್ರವಾಗಿದೆ. ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಸಿನಿ ರಸಿಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಭಾರತ ಚಿತ್ರರಂಗದ ಸಿನಿತಾರೆಯರು ಕೂಡಾ ಈ ಚಿತ್ರವನ್ನು ಮೆಚ್ಚಿ ಕೊಂಡಾಡಿದ್ದಾರೆ. ಈ ಚಿತ್ರದ ಕಥೆ, ಪಾತ್ರಗಳು ಎಷ್ಟೊಂದು ಅದ್ಭುತವಾಗಿದೆಯೋ ಹಾಗೇನೆ ಈ ಚಲನಚಿತ್ರದಲ್ಲಿನ ಪ್ರತಿಯೊಂದು ಹಾಡು ಕೂಡಾ ಸೂಪರ್ ಹಿಟ್ ಆಗಿದೆ. ಬಹಳ ಅರ್ಥಪೂರ್ಣವಾದ ಹಾಡುಗಳನ್ನು ಈ ಚಿತ್ರದಲ್ಲಿ ಕಾಣಬಹುದು. ಬಿಗ್‌ಬಾಸ್ ಸೀಸನ್ 15 ಹಿಂದಿ ಅವತರಣಿಕೆಯ ಸ್ಪರ್ಧಿ ಹಾಗೂ ‘ನಾಗಿನ್ 6’ ಧಾರಾವಹಿಯ ನಟಿ ತೇಜಸ್ವಿ ಪ್ರಕಾಶ್ ಅವರು ಇತ್ತೀಚಿಗೆ ಕಾಂತಾರ ಚಿತ್ರದ ಹಾಡನ್ನು ಹಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾಂತಾರ ಚಲನಚಿತ್ರದ ಕರಮದ ಕಲ್ಲನು ಎಡವಿದ ಮನುಜನ ಬೆರಳಿನ ಗಾಯವು… ಮಾಯದು… ಹಾಡನ್ನು ನಟಿ ತೇಜಸ್ವಿ ಪ್ರಕಾಶ್ ಹಾಡಿದ್ದು, ಆ ವಿಡಿಯೊವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕನ್ನಡ ಭಾಷೆ ಬರದಿದ್ದರೂ ಕೂಡಾ ನಟಿ ಈ ಹಾಡನ್ನು ಬಹಳ ಅದ್ಭುತವಾಗಿ ಹಾಡಿದ್ದು, ಇವರ ಈ ಪ್ರಯತ್ನಕ್ಕೆ ಎಲ್ಲೆಡೆಯಿಂದ ಪ್ರಶಂಸೆ ದೊರಕಿದೆ. ಹಾಗೂ ಇವರ ಸುಮಧುರ ಕಂಠಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video : ಮದುವೆಗೆ ಬಂದವರು ಆಧಾರ ಕಾರ್ಡ್​ ತೋರಿಸಿದರೆ ಮಾತ್ರ ಔತಣ

ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿರುವ ಈ ವಿಡಿಯೊ ಇಲ್ಲಿಯವರೆಗೆ 2.7 ಮಿಲಿಯನ್ ವೀಕ್ಷಣೆಯನ್ನು ಪಡೆದುಕೊಂಡಿದೆ. ಹಾಗೂ 365 ಸಾವಿರ ಲೈಕ್ಸ್ ಮತ್ತು 40.8 ಸಾವಿರ ಕಮೆಂಟ್ ಪಡೆದುಕೊಂಡಿದೆ. ಒಬ್ಬ ಬಳಕೆದಾರರು ನೀವು ಬಹಳ ಸುಂದರವಾಗಿ ಹಾಡುತ್ತಿರಾ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನೊಬ್ಬ ಬಳಕೆದಾರರು, ಇದು ನನ್ನ ಮೆಚ್ಚಿನ ಹಾಡುಗಳಲ್ಲಿ ಒಂದಾಗಿದೆ. ನಿಮ್ಮ ಧ್ವನಿ ಅದ್ಭುತವಾಗಿದೆ ಹಾಗೂ ಕನ್ನಡ ಹಾಡನ್ನು ಹಾಡುವ ನಿಮ್ಮ ಪ್ರಯತ್ನಕ್ಕೆ ನನ್ನದೊಂದು ಸಲಾಂ ಎಂದು ಕಮೆಂಟ್ ಮಾಡಿದ್ದಾರೆ. ನಟಿಯ ಗಾಯನ ಶೈಲಿಗೆ ಸಕರಾತ್ಮಕ ಕಮೆಂಟ್‌ಗಳು ಬಂದಿವೆ.

Published On - 4:26 pm, Wed, 8 March 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!