AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಂತಾರ ಸಿನಿಮಾ ಹಾಡನ್ನು ಕನ್ನಡದಲ್ಲಿ ಹಾಡಿದ ಹಿಂದಿ ಸೀರಿಯಲ್ ನಟಿ

ಕಾಂತರ ಚಲನಚಿತ್ರದ ಕರಮದ ಕಲ್ಲನು ಎಡವಿದ ಮನುಜನ ಬೆರಳಿನ ಗಾಯವು... ಮಾಯದು... ಹಾಡನ್ನು ನಟಿ ತೇಜಸ್ವಿ ಪ್ರಕಾಶ್ ಹಾಡಿದ್ದು, ಆ ವಿಡಿಯೊವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Viral Video: ಕಾಂತಾರ ಸಿನಿಮಾ ಹಾಡನ್ನು ಕನ್ನಡದಲ್ಲಿ ಹಾಡಿದ ಹಿಂದಿ ಸೀರಿಯಲ್ ನಟಿ
ತೇಜಸ್ವಿ ಪ್ರಕಾಶ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 08, 2023 | 4:33 PM

ಹಿಂದಿ ಸೀರಿಯಲ್ ನಟಿ ತೇಜಸ್ವಿ ಪ್ರಕಾಶ್ (Tejaswi Prakash) ಅವರು ಕಾಂತಾರ ಚಿತ್ರದ ಕರಮದ ಕಲ್ಲನು ಎಡವಿದ ಮನುಜನ ಬೆರಳಿನ ಗಾಯವು… ಮಾಯದು…ಹಾಡನ್ನು ಹಾಡಿರುವ ವಿಡಿಯೊ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿದೆ. ಕಾಂತಾರ ಚಿತ್ರ 2022ರ ಬ್ಲಾಕ್‌ಬಸ್ಟರ್ ಹಿಟ್ ಚಿತ್ರವಾಗಿದೆ. ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಸಿನಿ ರಸಿಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಭಾರತ ಚಿತ್ರರಂಗದ ಸಿನಿತಾರೆಯರು ಕೂಡಾ ಈ ಚಿತ್ರವನ್ನು ಮೆಚ್ಚಿ ಕೊಂಡಾಡಿದ್ದಾರೆ. ಈ ಚಿತ್ರದ ಕಥೆ, ಪಾತ್ರಗಳು ಎಷ್ಟೊಂದು ಅದ್ಭುತವಾಗಿದೆಯೋ ಹಾಗೇನೆ ಈ ಚಲನಚಿತ್ರದಲ್ಲಿನ ಪ್ರತಿಯೊಂದು ಹಾಡು ಕೂಡಾ ಸೂಪರ್ ಹಿಟ್ ಆಗಿದೆ. ಬಹಳ ಅರ್ಥಪೂರ್ಣವಾದ ಹಾಡುಗಳನ್ನು ಈ ಚಿತ್ರದಲ್ಲಿ ಕಾಣಬಹುದು. ಬಿಗ್‌ಬಾಸ್ ಸೀಸನ್ 15 ಹಿಂದಿ ಅವತರಣಿಕೆಯ ಸ್ಪರ್ಧಿ ಹಾಗೂ ‘ನಾಗಿನ್ 6’ ಧಾರಾವಹಿಯ ನಟಿ ತೇಜಸ್ವಿ ಪ್ರಕಾಶ್ ಅವರು ಇತ್ತೀಚಿಗೆ ಕಾಂತಾರ ಚಿತ್ರದ ಹಾಡನ್ನು ಹಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾಂತಾರ ಚಲನಚಿತ್ರದ ಕರಮದ ಕಲ್ಲನು ಎಡವಿದ ಮನುಜನ ಬೆರಳಿನ ಗಾಯವು… ಮಾಯದು… ಹಾಡನ್ನು ನಟಿ ತೇಜಸ್ವಿ ಪ್ರಕಾಶ್ ಹಾಡಿದ್ದು, ಆ ವಿಡಿಯೊವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕನ್ನಡ ಭಾಷೆ ಬರದಿದ್ದರೂ ಕೂಡಾ ನಟಿ ಈ ಹಾಡನ್ನು ಬಹಳ ಅದ್ಭುತವಾಗಿ ಹಾಡಿದ್ದು, ಇವರ ಈ ಪ್ರಯತ್ನಕ್ಕೆ ಎಲ್ಲೆಡೆಯಿಂದ ಪ್ರಶಂಸೆ ದೊರಕಿದೆ. ಹಾಗೂ ಇವರ ಸುಮಧುರ ಕಂಠಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video : ಮದುವೆಗೆ ಬಂದವರು ಆಧಾರ ಕಾರ್ಡ್​ ತೋರಿಸಿದರೆ ಮಾತ್ರ ಔತಣ

ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿರುವ ಈ ವಿಡಿಯೊ ಇಲ್ಲಿಯವರೆಗೆ 2.7 ಮಿಲಿಯನ್ ವೀಕ್ಷಣೆಯನ್ನು ಪಡೆದುಕೊಂಡಿದೆ. ಹಾಗೂ 365 ಸಾವಿರ ಲೈಕ್ಸ್ ಮತ್ತು 40.8 ಸಾವಿರ ಕಮೆಂಟ್ ಪಡೆದುಕೊಂಡಿದೆ. ಒಬ್ಬ ಬಳಕೆದಾರರು ನೀವು ಬಹಳ ಸುಂದರವಾಗಿ ಹಾಡುತ್ತಿರಾ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನೊಬ್ಬ ಬಳಕೆದಾರರು, ಇದು ನನ್ನ ಮೆಚ್ಚಿನ ಹಾಡುಗಳಲ್ಲಿ ಒಂದಾಗಿದೆ. ನಿಮ್ಮ ಧ್ವನಿ ಅದ್ಭುತವಾಗಿದೆ ಹಾಗೂ ಕನ್ನಡ ಹಾಡನ್ನು ಹಾಡುವ ನಿಮ್ಮ ಪ್ರಯತ್ನಕ್ಕೆ ನನ್ನದೊಂದು ಸಲಾಂ ಎಂದು ಕಮೆಂಟ್ ಮಾಡಿದ್ದಾರೆ. ನಟಿಯ ಗಾಯನ ಶೈಲಿಗೆ ಸಕರಾತ್ಮಕ ಕಮೆಂಟ್‌ಗಳು ಬಂದಿವೆ.

Published On - 4:26 pm, Wed, 8 March 23

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!