AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದ ಮಾಜಿ ಸಚಿವ ಸಯ್ಯದ್ ಸಾದತ್​ ಈಗ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್

Syed Ahmed Sadat: ಸಾದತ್ ಅವರು ಇದೀಗ ಜರ್ಮನಿಯಲ್ಲಿ ಆಹಾರ ವಿತರಿಸುವ ಕೆಲಸಗಾರರಾಗಿ ಕೆಲಸ ನಿರ್ವಿಸುತ್ತಿದ್ದಾರೆ. ಜರ್ಮನಿಯ ಲೀಪ್​ಜಿಗ್​ ನಗರದಲ್ಲಿ ಕೆಲಸ ನಿರ್ವಹಿಸುತ್ತಿರುವ ಕೆಲವು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಫ್ಘಾನಿಸ್ತಾನದ ಮಾಜಿ ಸಚಿವ ಸಯ್ಯದ್ ಸಾದತ್​ ಈಗ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್
ಅಫ್ಘಾನಿಸ್ತಾನದ ಮಾಜಿ ಸಚಿವ ಸಯ್ಯದ್ ಸಾದತ್​ ಈಗ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್
TV9 Web
| Edited By: |

Updated on:Aug 25, 2021 | 3:44 PM

Share

ಕೇವಲ ಒಂದು ವರ್ಷದ ಹಿಂದೆ ಸಯ್ಯದ್ ಅಹ್ಮದ್ ಶಾ ಸಾದತ್ ಅಫ್ಘಾನಿಸ್ತಾನದಲ್ಲಿ ಗೌರವಾನ್ವಿತ ಸ್ಥಾನದಲ್ಲಿದ್ದರು. ಸಂವಹನ ಮತ್ತು ಐಟಿ ಸಚಿವರಾಗಿದ್ದರು. ಬಳಿಕ ಅಫ್ಘನ್​ ಅಧ್ಯಕ್ಷ ಅಶ್ರಫ್ ಘನಿ ಅವರ ನಡುವಿನ  ಭಿನ್ನಾಭಿಪ್ರಾಯದಿಂದಾಗಿ 2020ರಲ್ಲಿ ತಮ್ಮ ದೇಶವನ್ನು ತೊರೆದು ಜರ್ಮಿನಿಗೆ ಹೋಗಿ ನೆಲೆಸಿದರು. ವರದಿಗಳ ಪ್ರಕಾರ ಸಾದತ್ ಅವರು ಇದೀಗ ಜರ್ಮನಿಯಲ್ಲಿ ಆಹಾರ ವಿತರಿಸುವ ಕೆಲಸಗಾರರಾಗಿ ಕೆಲಸ ನಿರ್ವಿಸುತ್ತಿದ್ದಾರೆ. ಜರ್ಮನಿಯ ಲೀಪ್​ಜಿಗ್​ ನಗರದಲ್ಲಿ ಕೆಲಸ ನಿರ್ವಹಿಸುತ್ತಿರುವ ಕೆಲವು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಾದತ್ ಅವರು 2018ರಲ್ಲಿ ಅಫ್ಘಾನ್ ಸರ್ಕಾರದಲ್ಲಿ ಸಂವಹನ ಸಚಿವರಾಗಿದ್ದರು. ತಾಲಿಬಾನ್ ಸ್ವಾಧೀನಕ್ಕೂ ಮುಂಚೆಯೇ 2020ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅಶ್ರಫ್ ಘನಿಯವರೊಂದಿಗಿನ ಭಿನ್ನಾಭಿಪ್ರಾಯದಿಂದ ದೇಶವನ್ನು ತೊರೆದು ಜರ್ಮಿನಿಯಲ್ಲಿ ನೆಲೆಸಿದರು. ಬಳಿಕ ಹಣದ ಕೊರತೆಯಿಂದಾಗಿ ಜೀವನೋಪಾಯಕ್ಕಾಗಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡಬೇಕಾಯಿತು. ಅವರು ಈಗ ಸೈಕಲ್​ನಲ್ಲಿ ನಗರದಾದ್ಯಂತ ಓಡಾಡುತ್ತಾರೆ ಜತೆಗೆ ಆಹಾರವನ್ನು ಗ್ರಾಹಕರಿಗೆ ವಿತರಿಸುತ್ತಾರೆ.

ವರದಿಗಳ ಪ್ರಕಾರ ಮಾಜಿ ಅಪ್ಘನ್ ಸಚಿವರು ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದಿಂದ ಸಂವಹನ ಮತ್ತು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್​ನಲ್ಲಿ ಎರಡು ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ. ಈ ಹಿಂದೆ 13 ದೇಶಗಳ 20ಕ್ಕೂ ಹೆಚ್ಚು ಕಂಪನಿಗಳೊಂದಿಗೆ ಸಂವಹನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ.

ಪ್ರಸ್ತುತದಲ್ಲಿ ನಾನು ಸರಳವಾದ ಜೀವನವನ್ನು ನಡೆಸುತ್ತಿದ್ದೇನೆ. ನನ್ನ ಜೀವನ ಜರ್ಮನಿಯಲ್ಲಿ ಸುರಕ್ಷಿತವಾಗಿದೆ. ಲೀಪ್​ಜಿಗ್​ನಲ್ಲಿ ನನ್ನ ಕುಟುಂಬದೊಂದಿಗೆ ಇರುವುದು ನನಗೆ ಸಂತೋಷ ತಂದಿದೆ. ಜೀವನಕ್ಕಾಗಿ ಹಣವನ್ನು ಹೆಚ್ಚು ಉಳಿಸಲು ಮತ್ತು ಜರ್ಮನ್ ಕೋರ್ಸ್ ಮತ್ತು ಮುಂದೆ ಹೆಚ್ಚು ಅಧ್ಯಯನ ಮಾಡಲು ಬಯಸುತ್ತೇನೆ ಎಂದು ಸಾದತ್ ಹೇಳಿದ್ದಾರೆ.

ಇನ್ನೂ ಅನೇಕ ಉದ್ಯೋಗಗಳಿಗೆ ಅರ್ಜಿ ಹಾಕಿದ್ದೇನೆ. ಆದರೆ ಯಾವುದೇ ಪ್ರತಿಕ್ರಿಯೆ ಇಲ್ಲಿಯವರೆಗೆ ಬಂದಿಲ್ಲ. ಜರ್ಮನ್​ನ ಟೆಲಿಕಾಂ ಕಂಪನಿಯಲ್ಲಿ ಕೆಲಸ ಮಾಡುವುದು ನನ್ನ ಕನಸು ಎಂದು ಹೇಳಿದ್ದಾರೆ. ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಮಾತನಾಡಲು ಸಾದತ್ ನಿರಾಕರಿಸಿದ್ದಾರೆ. ಆದರೆ, ಅಶ್ರಫ್ ಘನಿ ಸರ್ಕಾರ ಇಷ್ಟು ಬೇಗ ಬೀಳುತ್ತದೆ ಎಂದು ನಾನು ನಿರೀಕ್ಷಿಸಿರಲಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:

ಅಫ್ಘಾನಿಸ್ತಾನಕ್ಕೆ ಹಣಕಾಸು ನೆರವು ನಿಲ್ಲಿಸಿದ ವಿಶ್ವಬ್ಯಾಂಕ್​; ತಾಲಿಬಾನಿಗಳಿಗೆ ಆರ್ಥಿಕ ದಿಗ್ಬಂಧನ

ಅಫ್ಘಾನಿಸ್ತಾನದಿಂದ ನಿನ್ನೆ ಬಂದ 16 ಜನರಿಗೆ ಕೊರೊನಾ ಸೋಂಕು; ಕೇಂದ್ರ ಸಚಿವ ಹರ್ದೀಪ್​ ಸಿಂಗ್​ ಪುರಿಗೂ ಆತಂಕ

Published On - 3:26 pm, Wed, 25 August 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ