AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದ ಮಾಜಿ ಸಚಿವ ಸಯ್ಯದ್ ಸಾದತ್​ ಈಗ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್

Syed Ahmed Sadat: ಸಾದತ್ ಅವರು ಇದೀಗ ಜರ್ಮನಿಯಲ್ಲಿ ಆಹಾರ ವಿತರಿಸುವ ಕೆಲಸಗಾರರಾಗಿ ಕೆಲಸ ನಿರ್ವಿಸುತ್ತಿದ್ದಾರೆ. ಜರ್ಮನಿಯ ಲೀಪ್​ಜಿಗ್​ ನಗರದಲ್ಲಿ ಕೆಲಸ ನಿರ್ವಹಿಸುತ್ತಿರುವ ಕೆಲವು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಫ್ಘಾನಿಸ್ತಾನದ ಮಾಜಿ ಸಚಿವ ಸಯ್ಯದ್ ಸಾದತ್​ ಈಗ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್
ಅಫ್ಘಾನಿಸ್ತಾನದ ಮಾಜಿ ಸಚಿವ ಸಯ್ಯದ್ ಸಾದತ್​ ಈಗ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್
TV9 Web
| Edited By: |

Updated on:Aug 25, 2021 | 3:44 PM

Share

ಕೇವಲ ಒಂದು ವರ್ಷದ ಹಿಂದೆ ಸಯ್ಯದ್ ಅಹ್ಮದ್ ಶಾ ಸಾದತ್ ಅಫ್ಘಾನಿಸ್ತಾನದಲ್ಲಿ ಗೌರವಾನ್ವಿತ ಸ್ಥಾನದಲ್ಲಿದ್ದರು. ಸಂವಹನ ಮತ್ತು ಐಟಿ ಸಚಿವರಾಗಿದ್ದರು. ಬಳಿಕ ಅಫ್ಘನ್​ ಅಧ್ಯಕ್ಷ ಅಶ್ರಫ್ ಘನಿ ಅವರ ನಡುವಿನ  ಭಿನ್ನಾಭಿಪ್ರಾಯದಿಂದಾಗಿ 2020ರಲ್ಲಿ ತಮ್ಮ ದೇಶವನ್ನು ತೊರೆದು ಜರ್ಮಿನಿಗೆ ಹೋಗಿ ನೆಲೆಸಿದರು. ವರದಿಗಳ ಪ್ರಕಾರ ಸಾದತ್ ಅವರು ಇದೀಗ ಜರ್ಮನಿಯಲ್ಲಿ ಆಹಾರ ವಿತರಿಸುವ ಕೆಲಸಗಾರರಾಗಿ ಕೆಲಸ ನಿರ್ವಿಸುತ್ತಿದ್ದಾರೆ. ಜರ್ಮನಿಯ ಲೀಪ್​ಜಿಗ್​ ನಗರದಲ್ಲಿ ಕೆಲಸ ನಿರ್ವಹಿಸುತ್ತಿರುವ ಕೆಲವು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಾದತ್ ಅವರು 2018ರಲ್ಲಿ ಅಫ್ಘಾನ್ ಸರ್ಕಾರದಲ್ಲಿ ಸಂವಹನ ಸಚಿವರಾಗಿದ್ದರು. ತಾಲಿಬಾನ್ ಸ್ವಾಧೀನಕ್ಕೂ ಮುಂಚೆಯೇ 2020ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅಶ್ರಫ್ ಘನಿಯವರೊಂದಿಗಿನ ಭಿನ್ನಾಭಿಪ್ರಾಯದಿಂದ ದೇಶವನ್ನು ತೊರೆದು ಜರ್ಮಿನಿಯಲ್ಲಿ ನೆಲೆಸಿದರು. ಬಳಿಕ ಹಣದ ಕೊರತೆಯಿಂದಾಗಿ ಜೀವನೋಪಾಯಕ್ಕಾಗಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡಬೇಕಾಯಿತು. ಅವರು ಈಗ ಸೈಕಲ್​ನಲ್ಲಿ ನಗರದಾದ್ಯಂತ ಓಡಾಡುತ್ತಾರೆ ಜತೆಗೆ ಆಹಾರವನ್ನು ಗ್ರಾಹಕರಿಗೆ ವಿತರಿಸುತ್ತಾರೆ.

ವರದಿಗಳ ಪ್ರಕಾರ ಮಾಜಿ ಅಪ್ಘನ್ ಸಚಿವರು ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದಿಂದ ಸಂವಹನ ಮತ್ತು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್​ನಲ್ಲಿ ಎರಡು ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ. ಈ ಹಿಂದೆ 13 ದೇಶಗಳ 20ಕ್ಕೂ ಹೆಚ್ಚು ಕಂಪನಿಗಳೊಂದಿಗೆ ಸಂವಹನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ.

ಪ್ರಸ್ತುತದಲ್ಲಿ ನಾನು ಸರಳವಾದ ಜೀವನವನ್ನು ನಡೆಸುತ್ತಿದ್ದೇನೆ. ನನ್ನ ಜೀವನ ಜರ್ಮನಿಯಲ್ಲಿ ಸುರಕ್ಷಿತವಾಗಿದೆ. ಲೀಪ್​ಜಿಗ್​ನಲ್ಲಿ ನನ್ನ ಕುಟುಂಬದೊಂದಿಗೆ ಇರುವುದು ನನಗೆ ಸಂತೋಷ ತಂದಿದೆ. ಜೀವನಕ್ಕಾಗಿ ಹಣವನ್ನು ಹೆಚ್ಚು ಉಳಿಸಲು ಮತ್ತು ಜರ್ಮನ್ ಕೋರ್ಸ್ ಮತ್ತು ಮುಂದೆ ಹೆಚ್ಚು ಅಧ್ಯಯನ ಮಾಡಲು ಬಯಸುತ್ತೇನೆ ಎಂದು ಸಾದತ್ ಹೇಳಿದ್ದಾರೆ.

ಇನ್ನೂ ಅನೇಕ ಉದ್ಯೋಗಗಳಿಗೆ ಅರ್ಜಿ ಹಾಕಿದ್ದೇನೆ. ಆದರೆ ಯಾವುದೇ ಪ್ರತಿಕ್ರಿಯೆ ಇಲ್ಲಿಯವರೆಗೆ ಬಂದಿಲ್ಲ. ಜರ್ಮನ್​ನ ಟೆಲಿಕಾಂ ಕಂಪನಿಯಲ್ಲಿ ಕೆಲಸ ಮಾಡುವುದು ನನ್ನ ಕನಸು ಎಂದು ಹೇಳಿದ್ದಾರೆ. ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಮಾತನಾಡಲು ಸಾದತ್ ನಿರಾಕರಿಸಿದ್ದಾರೆ. ಆದರೆ, ಅಶ್ರಫ್ ಘನಿ ಸರ್ಕಾರ ಇಷ್ಟು ಬೇಗ ಬೀಳುತ್ತದೆ ಎಂದು ನಾನು ನಿರೀಕ್ಷಿಸಿರಲಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:

ಅಫ್ಘಾನಿಸ್ತಾನಕ್ಕೆ ಹಣಕಾಸು ನೆರವು ನಿಲ್ಲಿಸಿದ ವಿಶ್ವಬ್ಯಾಂಕ್​; ತಾಲಿಬಾನಿಗಳಿಗೆ ಆರ್ಥಿಕ ದಿಗ್ಬಂಧನ

ಅಫ್ಘಾನಿಸ್ತಾನದಿಂದ ನಿನ್ನೆ ಬಂದ 16 ಜನರಿಗೆ ಕೊರೊನಾ ಸೋಂಕು; ಕೇಂದ್ರ ಸಚಿವ ಹರ್ದೀಪ್​ ಸಿಂಗ್​ ಪುರಿಗೂ ಆತಂಕ

Published On - 3:26 pm, Wed, 25 August 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ