Sign In

By signing in or creating an account, you agree with Associated Broadcasting Company's Terms & Conditions and Privacy Policy.

Rare Walking Fish: 22 ವರ್ಷಗಳ ಬಳಿಕ ಅಪರೂಪದ ನಡೆದಾಡುವ ಮೀನು ಪತ್ತೆ: ಪಿಂಕ್​ ಹ್ಯಾಂಡ್​ ಫಿಶ್​ ಕಂಡು ಸಂತಸಗೊಂಡ ಸಂಶೋಧಕ

ಟಾಸ್ಮೇನಿಯನ್ ಕರಾವಳಿಯ ಬಳಿ 22 ವರ್ಷಗಳ ಬಳಿಕ ಅಪರೂಪದ ನಡೆದಾಡುವ ಮೀನು ಪತ್ತೆಯಾಗಿದೆ. ಆಸ್ಟ್ರೇಲಿಯಾದ ಕಾಮನ್​ವೆಲ್ತ್​ ಸೈಂಟಿಪಫಿಕ್​ ಆ್ಯಂಡ್​ ಇಂಡಸ್ಟ್ರಿಯಲ್​ ರಿಸರ್ಚ್​ ಆರ್ಗನೈಸೇಶನ್​​ನ ಸಂಶೋಧಕರ ತಂಡ ಈ ಮೀನನ್ನು ಪತ್ತೆ ಮಾಡಿದೆ.

Rare Walking Fish: 22 ವರ್ಷಗಳ ಬಳಿಕ ಅಪರೂಪದ ನಡೆದಾಡುವ ಮೀನು ಪತ್ತೆ: ಪಿಂಕ್​ ಹ್ಯಾಂಡ್​ ಫಿಶ್​ ಕಂಡು ಸಂತಸಗೊಂಡ ಸಂಶೋಧಕ
ಅಪರೂಪದ ನಡೆದಾಡುವ ಮೀನು
Follow us
TV9 Web
| Updated By: Pavitra Bhat Jigalemane

Updated on:Dec 25, 2021 | 10:16 AM

ಆಸ್ಟ್ರೇಲಿಯಾ: ಟಾಸ್ಮೇನಿಯನ್ ಕರಾವಳಿಯ ಬಳಿ 22 ವರ್ಷಗಳ ಬಳಿಕ ಅಪರೂಪದ ನಡೆದಾಡುವ ಮೀನು ಪತ್ತೆಯಾಗಿದೆ. ಆಸ್ಟ್ರೇಲಿಯಾದ ಕಾಮನ್​ವೆಲ್ತ್​ ಸೈಂಟಿಫಿಕ್​ ಆ್ಯಂಡ್​ ಇಂಡಸ್ಟ್ರಿಯಲ್​ ರಿಸರ್ಚ್​ ಆರ್ಗನೈಸೇಶನ್​​ನ ಸಂಶೋಧಕರ ತಂಡ ಈ ಮೀನನ್ನು ಪತ್ತೆ ಮಾಡಿದೆ. 1999ರಲ್ಲಿ ಈ ಗುಲಾಬಿ ಹ್ಯಾಂಡ್​ ಫಿಶ್​ ಕಂಡುಬಂದಿದ್ದು, ಅದರ ಬಳಿಕ ಇದೀಗ ಕಾಣಿಸಿಕೊಂಡಿದೆ. ಪುಟ್ಟ ಕೈಗಳ ಮೂಲಕ ಸಮುದ್ರದಲ್ಲಿ ನಡೆದಾಡುವ ಈ ಮೀನು ತಿಳಿ ಗುಲಾಬಿ ಬಣ್ಣದಲ್ಲಿ ಇರುತ್ತದೆ. ಆಂಗ್ಲರ್​ ಫಿಶ್​ ಎನ್ನುವ ಕುಟುಂಬಕ್ಕೆ ಈ ಗುಲಾಬಿ ಹ್ಯಾಂಡ್​ ಫಿಶ್​ ಸೇರಿದೆ. ಅಷ್ಟಾಗಿ ಕಣ್ಣಿಗೆ ಈ ಮೀನುಗಳು ಕಾಣಿಸಿಕೊಳ್ಳದ ಕಾರಣದ ಅಳಿವಿನಂಚಿನಲ್ಲಿರುವ ಜೀವಿ ಎಂದು ಸಂಶೋಧಕರು ಹೇಳಿದ್ದಾರೆ. 

ಫೆಬ್ರುವರಿಯಲ್ಲಿ ಸಂಶೋಧಕರ ತಂಡ ಟಾಸೈನ್​ ಸಮುದ್ರದ ಒಳಗೆ ಕ್ಯಾಮಾರಾವನ್ನು ಇಳಿಸಿದ್ದರು. 4 ಸಾವಿರ ಮೀಟರ್​ ಅಡಿಯವರೆಗೆ ಕ್ಯಾಮರಾವನ್ನು ಇಳಿಬಿಟ್ಟಿದ್ದರು . ಒಂದು ವರ್ಷದ ನಂತರ ಕ್ಯಾಮರಾವನ್ನು ಹೊರತೆಗೆದು ದೃಶ್ಯಗಳನ್ನು ಪರೀಕ್ಷಿಸಿದಾಗ ಗುಲಾಬಿ ಹ್ಯಾಂಡ್​ ಫಿಶ್​ ನೋಡಿ ಸಂತಸಗೊಂಡಿದ್ದಾರೆ.  ಈ ಮೊದಲು ಗುಲಾಬಿ ಹ್ಯಾಂಡ್​ ಫಿಶ್ ಸಮುದ್ರದ ಆಳದಲ್ಲಿ ಕಂಡುಬರುತ್ತದೆ ಎನ್ನಲಾಗಿತ್ತು. ಆದರೆ ಈ ಬಾರಿ ಕೇವಲ 150 ಅಡಿ ಆಳದಲ್ಲಿ ಕಂಡುಬಂದಿದೆ.

ಸಮುದ್ರದ ತಳದಲ್ಲಿ ನಡೆದಾಡಲು ಪುಟ್ಟ ಕೈಗಳನ್ನು ಹೊಂದಿರುವ ಈ ಮೀನು, ತಿಳಿ ಗುಲಾಬಿ ಬಣ್ಣದಲ್ಲಿದ್ದು ನೋಡಲೂ ಆಕರ್ಷಕವಾಗಿದೆ. ಸದ್ಯ ಸಂಶೋಧಕರ ತಂಡ ಗುಲಾಬಿ ಹ್ಯಾಂಡ್​ ಫಿಶ್ ಕಾಣಿಸಿಕೊಂಡ 35 ಸೆಕೆಂಡುಗಳ ವೀಡಿಯೋವನ್ನು ಅಧಿಕೃತ್ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Published On - 10:11 am, Sat, 25 December 21

ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು