AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rare Walking Fish: 22 ವರ್ಷಗಳ ಬಳಿಕ ಅಪರೂಪದ ನಡೆದಾಡುವ ಮೀನು ಪತ್ತೆ: ಪಿಂಕ್​ ಹ್ಯಾಂಡ್​ ಫಿಶ್​ ಕಂಡು ಸಂತಸಗೊಂಡ ಸಂಶೋಧಕ

ಟಾಸ್ಮೇನಿಯನ್ ಕರಾವಳಿಯ ಬಳಿ 22 ವರ್ಷಗಳ ಬಳಿಕ ಅಪರೂಪದ ನಡೆದಾಡುವ ಮೀನು ಪತ್ತೆಯಾಗಿದೆ. ಆಸ್ಟ್ರೇಲಿಯಾದ ಕಾಮನ್​ವೆಲ್ತ್​ ಸೈಂಟಿಪಫಿಕ್​ ಆ್ಯಂಡ್​ ಇಂಡಸ್ಟ್ರಿಯಲ್​ ರಿಸರ್ಚ್​ ಆರ್ಗನೈಸೇಶನ್​​ನ ಸಂಶೋಧಕರ ತಂಡ ಈ ಮೀನನ್ನು ಪತ್ತೆ ಮಾಡಿದೆ.

Rare Walking Fish: 22 ವರ್ಷಗಳ ಬಳಿಕ ಅಪರೂಪದ ನಡೆದಾಡುವ ಮೀನು ಪತ್ತೆ: ಪಿಂಕ್​ ಹ್ಯಾಂಡ್​ ಫಿಶ್​ ಕಂಡು ಸಂತಸಗೊಂಡ ಸಂಶೋಧಕ
ಅಪರೂಪದ ನಡೆದಾಡುವ ಮೀನು
TV9 Web
| Edited By: |

Updated on:Dec 25, 2021 | 10:16 AM

Share

ಆಸ್ಟ್ರೇಲಿಯಾ: ಟಾಸ್ಮೇನಿಯನ್ ಕರಾವಳಿಯ ಬಳಿ 22 ವರ್ಷಗಳ ಬಳಿಕ ಅಪರೂಪದ ನಡೆದಾಡುವ ಮೀನು ಪತ್ತೆಯಾಗಿದೆ. ಆಸ್ಟ್ರೇಲಿಯಾದ ಕಾಮನ್​ವೆಲ್ತ್​ ಸೈಂಟಿಫಿಕ್​ ಆ್ಯಂಡ್​ ಇಂಡಸ್ಟ್ರಿಯಲ್​ ರಿಸರ್ಚ್​ ಆರ್ಗನೈಸೇಶನ್​​ನ ಸಂಶೋಧಕರ ತಂಡ ಈ ಮೀನನ್ನು ಪತ್ತೆ ಮಾಡಿದೆ. 1999ರಲ್ಲಿ ಈ ಗುಲಾಬಿ ಹ್ಯಾಂಡ್​ ಫಿಶ್​ ಕಂಡುಬಂದಿದ್ದು, ಅದರ ಬಳಿಕ ಇದೀಗ ಕಾಣಿಸಿಕೊಂಡಿದೆ. ಪುಟ್ಟ ಕೈಗಳ ಮೂಲಕ ಸಮುದ್ರದಲ್ಲಿ ನಡೆದಾಡುವ ಈ ಮೀನು ತಿಳಿ ಗುಲಾಬಿ ಬಣ್ಣದಲ್ಲಿ ಇರುತ್ತದೆ. ಆಂಗ್ಲರ್​ ಫಿಶ್​ ಎನ್ನುವ ಕುಟುಂಬಕ್ಕೆ ಈ ಗುಲಾಬಿ ಹ್ಯಾಂಡ್​ ಫಿಶ್​ ಸೇರಿದೆ. ಅಷ್ಟಾಗಿ ಕಣ್ಣಿಗೆ ಈ ಮೀನುಗಳು ಕಾಣಿಸಿಕೊಳ್ಳದ ಕಾರಣದ ಅಳಿವಿನಂಚಿನಲ್ಲಿರುವ ಜೀವಿ ಎಂದು ಸಂಶೋಧಕರು ಹೇಳಿದ್ದಾರೆ. 

ಫೆಬ್ರುವರಿಯಲ್ಲಿ ಸಂಶೋಧಕರ ತಂಡ ಟಾಸೈನ್​ ಸಮುದ್ರದ ಒಳಗೆ ಕ್ಯಾಮಾರಾವನ್ನು ಇಳಿಸಿದ್ದರು. 4 ಸಾವಿರ ಮೀಟರ್​ ಅಡಿಯವರೆಗೆ ಕ್ಯಾಮರಾವನ್ನು ಇಳಿಬಿಟ್ಟಿದ್ದರು . ಒಂದು ವರ್ಷದ ನಂತರ ಕ್ಯಾಮರಾವನ್ನು ಹೊರತೆಗೆದು ದೃಶ್ಯಗಳನ್ನು ಪರೀಕ್ಷಿಸಿದಾಗ ಗುಲಾಬಿ ಹ್ಯಾಂಡ್​ ಫಿಶ್​ ನೋಡಿ ಸಂತಸಗೊಂಡಿದ್ದಾರೆ.  ಈ ಮೊದಲು ಗುಲಾಬಿ ಹ್ಯಾಂಡ್​ ಫಿಶ್ ಸಮುದ್ರದ ಆಳದಲ್ಲಿ ಕಂಡುಬರುತ್ತದೆ ಎನ್ನಲಾಗಿತ್ತು. ಆದರೆ ಈ ಬಾರಿ ಕೇವಲ 150 ಅಡಿ ಆಳದಲ್ಲಿ ಕಂಡುಬಂದಿದೆ.

ಸಮುದ್ರದ ತಳದಲ್ಲಿ ನಡೆದಾಡಲು ಪುಟ್ಟ ಕೈಗಳನ್ನು ಹೊಂದಿರುವ ಈ ಮೀನು, ತಿಳಿ ಗುಲಾಬಿ ಬಣ್ಣದಲ್ಲಿದ್ದು ನೋಡಲೂ ಆಕರ್ಷಕವಾಗಿದೆ. ಸದ್ಯ ಸಂಶೋಧಕರ ತಂಡ ಗುಲಾಬಿ ಹ್ಯಾಂಡ್​ ಫಿಶ್ ಕಾಣಿಸಿಕೊಂಡ 35 ಸೆಕೆಂಡುಗಳ ವೀಡಿಯೋವನ್ನು ಅಧಿಕೃತ್ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Published On - 10:11 am, Sat, 25 December 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ