AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮದುವೆಯಾಗಿ ಮೂರು ವರ್ಷ ಕಳೆದರೂ ನಡೆಯದ ಫಸ್ಟ್​ ನೈಟ್​! ಅನುಮಾನಗೊಂಡು ವಿಚಾರಿಸಿದಾಗ ಬೆಚ್ಚಿಬಿದ್ದ ಪತ್ನಿ!!

ಆಕೆ ಮದುವೆಯಾಗಿ ಮೂರು ವರ್ಷಗಳಾಗಿವೆ. ಪಾಲಕರು ವರದಕ್ಷಿಣೆ ಕೊಟ್ಟು ಶಾಸ್ತ್ರೋಕ್ತವಾಗಿ, ಅದ್ದೂರಿ ಮದುವೆ ಮಾಡಿದ್ದರು. ಆದರೆ ಅದೆಷ್ಟೋ ಆಸೆ ಆಕಾಂಕ್ಷೆಗಳೊಂದಿಗೆ ಅತ್ತೆಯ ಮನೆಗೆ ತೆರಳಿದ್ದ ಆ ಯುವತಿಗೆ ಶಾಕ್ ನಿಡಿದ್ದು ಮಾತ್ರ ಗಂಡ!

Viral: ಮದುವೆಯಾಗಿ ಮೂರು ವರ್ಷ ಕಳೆದರೂ ನಡೆಯದ ಫಸ್ಟ್​ ನೈಟ್​! ಅನುಮಾನಗೊಂಡು ವಿಚಾರಿಸಿದಾಗ ಬೆಚ್ಚಿಬಿದ್ದ ಪತ್ನಿ!!
ಮದುವೆಯಾಗಿ ಮೂರು ವರ್ಷ ಕಳೆದರೂ ನಡೆಯದ ಮೊದಲ ರಾತ್ರಿ. ಅನುಮಾನಗೊಂಡು ವಿಚಾರಿಸಿದಾಗ ಬೆಚ್ಚಿಬಿದ್ದ ಪತ್ನಿ!
TV9 Web
| Updated By: ಸಾಧು ಶ್ರೀನಾಥ್​|

Updated on: Jul 18, 2022 | 8:42 PM

Share

ಆಕೆ ಮದುವೆಯಾಗಿ ಮೂರು ವರ್ಷಗಳಾಗಿವೆ. ಪಾಲಕರು ವರದಕ್ಷಿಣೆ ಕೊಟ್ಟು ಶಾಸ್ತ್ರೋಕ್ತವಾಗಿ, ಅದ್ದೂರಿ ಮದುವೆ ಮಾಡಿದ್ದರು. ಆದರೆ ಅದೆಷ್ಟೋ ಆಸೆ ಆಕಾಂಕ್ಷೆಗಳೊಂದಿಗೆ ಅತ್ತೆಯ ಮನೆಗೆ ತೆರಳಿದ್ದ ಆ ಯುವತಿಗೆ ಶಾಕ್ ನಿಡಿದ್ದು ಮಾತ್ರ ಗಂಡ! ಗಂಡನ ಮನೆ ಪ್ರವೇಶಿಸಿದ ಆಕೆ ಪ್ರತಿ ಬಾರಿಯೂ ಹಿನ್ನಡೆ ಅನುಭವಿಸುತ್ತಿದ್ದಳು! ಅವಳು ತನ್ನ ಗಂಡನಿಗೆ ಹತ್ತಿರವಾಗಲು ಬಯಸಿದಾಗ, ಅವನು ಅವಳನ್ನು ಯಾವಾಗಲೂ ದೂರವಿರಿಸುತ್ತಿದ್ದನು. ಮೂರು ವರ್ಷಗಳಲ್ಲಿ ಇಬ್ಬರೂ ಒಮ್ಮೆಯೂ ದೈಹಿಕವಾಗಿ ಹತ್ತಿರವಾಗಿರಲಿಲ್ಲ. ಗಂಡನ ಮೇಲೆ ಅನುಮಾನಗೊಂಡು ಚಿಕ್ಕಮ್ಮನನ್ನು ವಿಚಾರಿಸಿದಾಗ ಬೆಚ್ಚಿಬೀಳಿಸುವ ಸತ್ಯ ಹೊರಬಿದ್ದಿದೆ.

ವಿವರಗಳಿಗೆ ಹೋಗುವುದಾದರೆ… ಇಂದೋರ್‌ನ ಮಹಿಳೆಯೊಬ್ಬರು 2019 ರಲ್ಲಿ ಪ್ರಿತೇಶ್ ಎಂಬ ವ್ಯಕ್ತಿಯನ್ನು ವಿವಾಹವಾದರು. ಆಕೆಯ ಪೋಷಕರು ಸುಮಾರು 25 ಲಕ್ಷ ರೂ. ವರದಕ್ಷಿಣೆ ನೀಡಿ ಅತ್ಯಂತ ಅದ್ಧೂರಿಯಾಗಿ ಮದುವೆ ಮಾಡಿದರು. ಅದೆಷ್ಟೋ ಆಸೆ ಆಕಾಂಕ್ಷೆಗಳೊಂದಿಗೆ ಅತ್ತೆಯ ಮನೆಗೆ ಆ ಯುವತಿ ತೆರಳಿದ್ದಳು. ಆದರೆ ಯುವತಿ ಸರ್ವ ರೀತಿಯಲ್ಲೂ ಆಘಾತಕ್ಕೊಳಗಾಗಿದ್ದಳು. ಮೊದಲ ರಾತ್ರಿಯಿಂದಲೇ ಪತಿ ಪ್ರಿತೇಶ್‌ನ ಸಂಬಂಧ ಅನುಮಾನಾಸ್ಪದವಾಗಿತ್ತು. ಇವನು ಹತ್ತಿರ ಬರುವುದೇ ಇಲ್ಲ.. ಇವಳು ಹತ್ತಿರ ಹೋದಂತೆಲ್ಲಾ ಅವಳನ್ನು ಗದರಿಸಿ ಕಳುಹಿಸುತ್ತಿದ್ದ. ಈ ಮೂರು ವರ್ಷಗಳಲ್ಲಿ ಇಬ್ಬರೂ ಒಮ್ಮೆಯೂ ದೈಹಿಕವಾಗಿ ಭೇಟಿಯಾಗಿಲ್ಲ. ಮಹಿಳೆ ತನ್ನ ಗಂಡನ ವರ್ತನೆಯ ಬಗ್ಗೆ ತನ್ನ ಚಿಕ್ಕಮ್ಮ ಬಳಿ ಹೇಳಿಕೊಂಡಳು. ತನ್ನ ಮಗ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾನೆ. ಶೀಘ್ರದಲ್ಲೇ ಎಲ್ಲವನ್ನೂ ಸರಿಪಡಿಸಲಾಗುವುದು ಎಂದು ಆಕೆಯ ಚಿಕ್ಕಮ್ಮ ಅಭಯ ನೀಡದಳಂತೆ.

ಮತ್ತೊಂದೆಡೆ, ಪ್ರಿತೇಶ್ ತನ್ನ ತಪ್ಪನ್ನು ಎಲ್ಲಿ ಬಹಿರಂಗಪಡಿಸುತ್ತಾಳೋ ಎಂದು ಯೋಚಿಸುತ್ತಾ ವರದಕ್ಷಿಣೆಗಾಗಿ ತನ್ನ ಹೆಂಡತಿಗೆ ಕಿರುಕುಳ ನೀಡಲು ಪ್ರಾರಂಭಿಸುತ್ತಾನೆ. 20 ಲಕ್ಷ ರೂ. ವರದಕ್ಷಿಣೆ ತರುವಂತೆ ಹೇಳುತ್ತಾ, ತಂದ ಬಳಿಕವೇ ಮನೆಗೆ ಬರುವಂತೆ ಹೇಳಿ.. ಮಹಿಳೆಯನ್ನು ಹೊರಗಟ್ಟಿದ್ದಾನೆ. ಇದಾದ ಬಳಿಕ ಸಂತ್ರಸ್ತೆ ತಾಯಿಯ ಮನೆಗೆ ತೆರಳಿ ನಡೆದ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ. ಮುಂದೆ, ಮಗಳ ಅತ್ತೆಯ ವಿರುದ್ಧ ಪೋಷಕರು ಪೊಲೀಸ್ ದೂರು ದಾಖಲಿಸುತ್ತಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದಾರೆ.

To read in Telugu Click Here

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?