AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 15 ವರ್ಷಗಳ ಬಳಿಕ ಯಹೂದಿ ಸಂಪ್ರದಾಯದ ವಿವಾಹಕ್ಕೆ ಸಾಕ್ಷಿಯಾದ ಕೇರಳ

ಬರೋಬ್ಬರಿ 15 ವರ್ಷಗಳ ಬಳಿಕ ಕೇರಳದಲ್ಲಿ ಯಹೂದಿ ಸಂಪ್ರದಾಯದ ವಿವಾಹ ಕಾರ್ಯಕ್ರಮವೊಂದು ಜರುಗಿದ್ದು, ಸುಮಾರು 300 ಅಥಿತಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:May 22, 2023 | 3:17 PM

ಯಹೂದಿ ಸಂಪ್ರದಾಯಗಳ ಸಾರವನ್ನು ಸೆರೆಹಿಡಿಯುವ ಮೂಲಕ 15 ವರ್ಷಗಳ ಬಳಿಕ ಕೇರಳದಲ್ಲಿನ ಯಹೂದಿ ಕುಟುಂಬವೊಂದು, ಭಾನುವಾರ ತಮ್ಮ ಸಾಂಪ್ರದಾಯಿಕ ವಿವಾಹವನ್ನು ಆಚರಿಸಿತು. ಖಾಸಗಿ ರೆಸಾರ್ಟ್​​ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಕುಟುಂಬ, ಸ್ನೇಹಿತರು ಮತ್ತು ಸಮುದಾಯದ ಸದಸ್ಯರು ಭಾಗವಹಿಸಿದ್ದರು. ಮತ್ತು ಇಸ್ರೇಲ್​​​ನ ರಬ್ಬಿಯೊಬ್ಬರು ವಿವಾಹವನ್ನು ನೆರವೇರಿಸಿದರು. ಅಪರಾಧ ವಿಭಾಗದ ಮಾಜಿ ಎಸ್.ಪಿ ಬೆನೊಯ್ ಮಲಾಖೈ ಅವರ ಮಗಳು ಅಮೇರಿಕಾದಲ್ಲಿ ಡೇಟಾ ಸೈಂಟಿಸ್ಟ್ ಆಗಿರುವ ರಾಚೆಲ್ ಮಲಾಖೈ, ಅಮೇರಿಕಾದ ಪ್ರಜೆ ಮತ್ತು ನಾಸಾ ಎಂಜಿನಿಯರಿಂಗ್ ರಿಚರ್ಡ್ ಜಕಾರಿ ರೋವ್ ಅವರ ವಿವಾಹ ಕಾರ್ಯಕ್ರಮ ಇದಾಗಿತ್ತು.

ಇಸ್ರೇಲ್​​​ನ ರಬ್ಬಿ (ಯಹೂದಿಯರ ಗುರು) ಏರಿಯಲ್ ಟೈಸನ್ ವಿವಾಹವನ್ನು ನೆರವೇರಿಸಿದರು. ಮದುವೆಯ ಸಮಾರಂಭವು ಹುಪ್ಪಾ ಎಂಬ ಮೇಲಾವರಣದ ಅಡಿಯಲ್ಲಿ ನಡೆಯಿತು, ಕೇರಳದ ಸಿನಗಾಗ್ (ಯಹೂದಿಯರ ದೇವಾಲಯ) ನ ಹೊರಗೆ ನಡೆದ ಮೊದಲ ಮದುವೆ ಇದಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೇರಳದಲ್ಲಿ ಇಂತಹ ವಿವಾಹಗಳು ಅಪರೂಪವಾಗಿ ನಡೆಯುವುದರಿಂದ ಈ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ. ಕೇರಳದಲ್ಲಿ ಕೊನೆಯ ಯಹೂದಿ ವಿವಾಹವು 2008ರಲ್ಲಿ ನಡೆದಿತ್ತು. ಇದಾಗಿ ಬರೋಬ್ಬರಿ 15 ವರ್ಷಗಳ ನಂತರ ಯಹೂದಿ ವಿವಾಹವು ನಡೆದಿದೆ.

ಸಿನಗಾಗ್​​​​ನಲ್ಲಿ ನಡೆಯುವ ವಿವಾಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆ, ಕುಟುಂಬದ ಇತರ ಸದಸ್ಯರು ಹಾಗೂ ಸ್ನೇಹಿತರು ಆಚರಣೆಗಳಲ್ಲಿ ಭಾಗಿಯಾಗಲು ಅವಕಾಶ ನೀಡುವ ಸಲುವಾಗಿ ಖಾಸಗಿ ರೆಸಾರ್ಟ್​​​ನಲ್ಲಿ ವಿವಾಹ ಸಮಾರಂಭವನ್ನು ನೆರವೇರಿಸಲಾಯಿತು ಹಾಗೂ ಸುಮಾರು 300 ಅಥಿತಿಗಳು ಈ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:Viral Video : ಲತಾ ಮಂಗೇಶ್ಕರ್ ‘ಕ್ರಾಂತಿ’ ಹಾಡಿಗೆ ವೃದ್ಧದಂಪತಿ ಲಿಪ್​ ಸಿಂಕ್; 2 ಮಿಲಿಯನ್​ ವೀಕ್ಷಣೆ​

ಕೆಲವು ಇತಿಹಾಸಗಳ ಪ್ರಕಾರ, ಸುಮಾರು 2,000 ವರ್ಷಗಳ ಹಿಂದೆ ಅಂದರೆ ರಾಜ ಸೊಲೊಮೋನನ ಕಾಲದಲ್ಲಿ ಯಹೂದಿಗಳು ವ್ಯಾಪಾರಕ್ಕೆಂದು ಕೇರಳಕ್ಕೆ ಬಂದರು. ಇದೀಗ ಕೇವಲ ಕೆಲವು ಯಹೂದಿ ಕುಟುಂಬಗಳು ಕೇರಳದಲ್ಲಿವೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:21 pm, Mon, 22 May 23

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ