AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 15 ವರ್ಷಗಳ ಬಳಿಕ ಯಹೂದಿ ಸಂಪ್ರದಾಯದ ವಿವಾಹಕ್ಕೆ ಸಾಕ್ಷಿಯಾದ ಕೇರಳ

ಬರೋಬ್ಬರಿ 15 ವರ್ಷಗಳ ಬಳಿಕ ಕೇರಳದಲ್ಲಿ ಯಹೂದಿ ಸಂಪ್ರದಾಯದ ವಿವಾಹ ಕಾರ್ಯಕ್ರಮವೊಂದು ಜರುಗಿದ್ದು, ಸುಮಾರು 300 ಅಥಿತಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮಾಲಾಶ್ರೀ ಅಂಚನ್​
| Edited By: |

Updated on:May 22, 2023 | 3:17 PM

Share

ಯಹೂದಿ ಸಂಪ್ರದಾಯಗಳ ಸಾರವನ್ನು ಸೆರೆಹಿಡಿಯುವ ಮೂಲಕ 15 ವರ್ಷಗಳ ಬಳಿಕ ಕೇರಳದಲ್ಲಿನ ಯಹೂದಿ ಕುಟುಂಬವೊಂದು, ಭಾನುವಾರ ತಮ್ಮ ಸಾಂಪ್ರದಾಯಿಕ ವಿವಾಹವನ್ನು ಆಚರಿಸಿತು. ಖಾಸಗಿ ರೆಸಾರ್ಟ್​​ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಕುಟುಂಬ, ಸ್ನೇಹಿತರು ಮತ್ತು ಸಮುದಾಯದ ಸದಸ್ಯರು ಭಾಗವಹಿಸಿದ್ದರು. ಮತ್ತು ಇಸ್ರೇಲ್​​​ನ ರಬ್ಬಿಯೊಬ್ಬರು ವಿವಾಹವನ್ನು ನೆರವೇರಿಸಿದರು. ಅಪರಾಧ ವಿಭಾಗದ ಮಾಜಿ ಎಸ್.ಪಿ ಬೆನೊಯ್ ಮಲಾಖೈ ಅವರ ಮಗಳು ಅಮೇರಿಕಾದಲ್ಲಿ ಡೇಟಾ ಸೈಂಟಿಸ್ಟ್ ಆಗಿರುವ ರಾಚೆಲ್ ಮಲಾಖೈ, ಅಮೇರಿಕಾದ ಪ್ರಜೆ ಮತ್ತು ನಾಸಾ ಎಂಜಿನಿಯರಿಂಗ್ ರಿಚರ್ಡ್ ಜಕಾರಿ ರೋವ್ ಅವರ ವಿವಾಹ ಕಾರ್ಯಕ್ರಮ ಇದಾಗಿತ್ತು.

ಇಸ್ರೇಲ್​​​ನ ರಬ್ಬಿ (ಯಹೂದಿಯರ ಗುರು) ಏರಿಯಲ್ ಟೈಸನ್ ವಿವಾಹವನ್ನು ನೆರವೇರಿಸಿದರು. ಮದುವೆಯ ಸಮಾರಂಭವು ಹುಪ್ಪಾ ಎಂಬ ಮೇಲಾವರಣದ ಅಡಿಯಲ್ಲಿ ನಡೆಯಿತು, ಕೇರಳದ ಸಿನಗಾಗ್ (ಯಹೂದಿಯರ ದೇವಾಲಯ) ನ ಹೊರಗೆ ನಡೆದ ಮೊದಲ ಮದುವೆ ಇದಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೇರಳದಲ್ಲಿ ಇಂತಹ ವಿವಾಹಗಳು ಅಪರೂಪವಾಗಿ ನಡೆಯುವುದರಿಂದ ಈ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ. ಕೇರಳದಲ್ಲಿ ಕೊನೆಯ ಯಹೂದಿ ವಿವಾಹವು 2008ರಲ್ಲಿ ನಡೆದಿತ್ತು. ಇದಾಗಿ ಬರೋಬ್ಬರಿ 15 ವರ್ಷಗಳ ನಂತರ ಯಹೂದಿ ವಿವಾಹವು ನಡೆದಿದೆ.

ಸಿನಗಾಗ್​​​​ನಲ್ಲಿ ನಡೆಯುವ ವಿವಾಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆ, ಕುಟುಂಬದ ಇತರ ಸದಸ್ಯರು ಹಾಗೂ ಸ್ನೇಹಿತರು ಆಚರಣೆಗಳಲ್ಲಿ ಭಾಗಿಯಾಗಲು ಅವಕಾಶ ನೀಡುವ ಸಲುವಾಗಿ ಖಾಸಗಿ ರೆಸಾರ್ಟ್​​​ನಲ್ಲಿ ವಿವಾಹ ಸಮಾರಂಭವನ್ನು ನೆರವೇರಿಸಲಾಯಿತು ಹಾಗೂ ಸುಮಾರು 300 ಅಥಿತಿಗಳು ಈ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:Viral Video : ಲತಾ ಮಂಗೇಶ್ಕರ್ ‘ಕ್ರಾಂತಿ’ ಹಾಡಿಗೆ ವೃದ್ಧದಂಪತಿ ಲಿಪ್​ ಸಿಂಕ್; 2 ಮಿಲಿಯನ್​ ವೀಕ್ಷಣೆ​

ಕೆಲವು ಇತಿಹಾಸಗಳ ಪ್ರಕಾರ, ಸುಮಾರು 2,000 ವರ್ಷಗಳ ಹಿಂದೆ ಅಂದರೆ ರಾಜ ಸೊಲೊಮೋನನ ಕಾಲದಲ್ಲಿ ಯಹೂದಿಗಳು ವ್ಯಾಪಾರಕ್ಕೆಂದು ಕೇರಳಕ್ಕೆ ಬಂದರು. ಇದೀಗ ಕೇವಲ ಕೆಲವು ಯಹೂದಿ ಕುಟುಂಬಗಳು ಕೇರಳದಲ್ಲಿವೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:21 pm, Mon, 22 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ