AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 15 ವರ್ಷಗಳ ಬಳಿಕ ಯಹೂದಿ ಸಂಪ್ರದಾಯದ ವಿವಾಹಕ್ಕೆ ಸಾಕ್ಷಿಯಾದ ಕೇರಳ

ಬರೋಬ್ಬರಿ 15 ವರ್ಷಗಳ ಬಳಿಕ ಕೇರಳದಲ್ಲಿ ಯಹೂದಿ ಸಂಪ್ರದಾಯದ ವಿವಾಹ ಕಾರ್ಯಕ್ರಮವೊಂದು ಜರುಗಿದ್ದು, ಸುಮಾರು 300 ಅಥಿತಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮಾಲಾಶ್ರೀ ಅಂಚನ್​
| Edited By: |

Updated on:May 22, 2023 | 3:17 PM

Share

ಯಹೂದಿ ಸಂಪ್ರದಾಯಗಳ ಸಾರವನ್ನು ಸೆರೆಹಿಡಿಯುವ ಮೂಲಕ 15 ವರ್ಷಗಳ ಬಳಿಕ ಕೇರಳದಲ್ಲಿನ ಯಹೂದಿ ಕುಟುಂಬವೊಂದು, ಭಾನುವಾರ ತಮ್ಮ ಸಾಂಪ್ರದಾಯಿಕ ವಿವಾಹವನ್ನು ಆಚರಿಸಿತು. ಖಾಸಗಿ ರೆಸಾರ್ಟ್​​ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಕುಟುಂಬ, ಸ್ನೇಹಿತರು ಮತ್ತು ಸಮುದಾಯದ ಸದಸ್ಯರು ಭಾಗವಹಿಸಿದ್ದರು. ಮತ್ತು ಇಸ್ರೇಲ್​​​ನ ರಬ್ಬಿಯೊಬ್ಬರು ವಿವಾಹವನ್ನು ನೆರವೇರಿಸಿದರು. ಅಪರಾಧ ವಿಭಾಗದ ಮಾಜಿ ಎಸ್.ಪಿ ಬೆನೊಯ್ ಮಲಾಖೈ ಅವರ ಮಗಳು ಅಮೇರಿಕಾದಲ್ಲಿ ಡೇಟಾ ಸೈಂಟಿಸ್ಟ್ ಆಗಿರುವ ರಾಚೆಲ್ ಮಲಾಖೈ, ಅಮೇರಿಕಾದ ಪ್ರಜೆ ಮತ್ತು ನಾಸಾ ಎಂಜಿನಿಯರಿಂಗ್ ರಿಚರ್ಡ್ ಜಕಾರಿ ರೋವ್ ಅವರ ವಿವಾಹ ಕಾರ್ಯಕ್ರಮ ಇದಾಗಿತ್ತು.

ಇಸ್ರೇಲ್​​​ನ ರಬ್ಬಿ (ಯಹೂದಿಯರ ಗುರು) ಏರಿಯಲ್ ಟೈಸನ್ ವಿವಾಹವನ್ನು ನೆರವೇರಿಸಿದರು. ಮದುವೆಯ ಸಮಾರಂಭವು ಹುಪ್ಪಾ ಎಂಬ ಮೇಲಾವರಣದ ಅಡಿಯಲ್ಲಿ ನಡೆಯಿತು, ಕೇರಳದ ಸಿನಗಾಗ್ (ಯಹೂದಿಯರ ದೇವಾಲಯ) ನ ಹೊರಗೆ ನಡೆದ ಮೊದಲ ಮದುವೆ ಇದಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೇರಳದಲ್ಲಿ ಇಂತಹ ವಿವಾಹಗಳು ಅಪರೂಪವಾಗಿ ನಡೆಯುವುದರಿಂದ ಈ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ. ಕೇರಳದಲ್ಲಿ ಕೊನೆಯ ಯಹೂದಿ ವಿವಾಹವು 2008ರಲ್ಲಿ ನಡೆದಿತ್ತು. ಇದಾಗಿ ಬರೋಬ್ಬರಿ 15 ವರ್ಷಗಳ ನಂತರ ಯಹೂದಿ ವಿವಾಹವು ನಡೆದಿದೆ.

ಸಿನಗಾಗ್​​​​ನಲ್ಲಿ ನಡೆಯುವ ವಿವಾಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆ, ಕುಟುಂಬದ ಇತರ ಸದಸ್ಯರು ಹಾಗೂ ಸ್ನೇಹಿತರು ಆಚರಣೆಗಳಲ್ಲಿ ಭಾಗಿಯಾಗಲು ಅವಕಾಶ ನೀಡುವ ಸಲುವಾಗಿ ಖಾಸಗಿ ರೆಸಾರ್ಟ್​​​ನಲ್ಲಿ ವಿವಾಹ ಸಮಾರಂಭವನ್ನು ನೆರವೇರಿಸಲಾಯಿತು ಹಾಗೂ ಸುಮಾರು 300 ಅಥಿತಿಗಳು ಈ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:Viral Video : ಲತಾ ಮಂಗೇಶ್ಕರ್ ‘ಕ್ರಾಂತಿ’ ಹಾಡಿಗೆ ವೃದ್ಧದಂಪತಿ ಲಿಪ್​ ಸಿಂಕ್; 2 ಮಿಲಿಯನ್​ ವೀಕ್ಷಣೆ​

ಕೆಲವು ಇತಿಹಾಸಗಳ ಪ್ರಕಾರ, ಸುಮಾರು 2,000 ವರ್ಷಗಳ ಹಿಂದೆ ಅಂದರೆ ರಾಜ ಸೊಲೊಮೋನನ ಕಾಲದಲ್ಲಿ ಯಹೂದಿಗಳು ವ್ಯಾಪಾರಕ್ಕೆಂದು ಕೇರಳಕ್ಕೆ ಬಂದರು. ಇದೀಗ ಕೇವಲ ಕೆಲವು ಯಹೂದಿ ಕುಟುಂಬಗಳು ಕೇರಳದಲ್ಲಿವೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:21 pm, Mon, 22 May 23

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ