AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚ್ಚಾ ಬಾದಾಮ್​ ಬಳಿಕ ವೈರಲ್​ ಆಗುತ್ತಿದೆ ಪೇರಳೆ ಹಣ್ಣಿನ ವ್ಯಾಪಾರಿಯ ಹಾಡು: ಇಲ್ಲಿದೆ ವಿಡಿಯೋ

ಬುಬನ್​ ಬಡ್ಯಾಕರ್​ ಹಾಡಿದ್ದ ಕಚ್ಚಾ ಬಾದಾಮ್​ ಹಾಡು ವೈರಲ್​ ಆಗಿ ಸಿಕ್ಕಾಪಟ್ಟೆ ಸದ್ದು ಮಾಡಿದೆ. ಅದರ ಬೆನ್ನಲ್ಲೆ ಈಗ ಪೇರಳೆ ಹಣ್ಣಿನ ಮಾರಾಟಗಾರರೊಬ್ಬರ ಹಾಡು ಸಖತ್​ ವೈರಲ್​ ಆಗಿದೆ. 

ಕಚ್ಚಾ ಬಾದಾಮ್​ ಬಳಿಕ ವೈರಲ್​ ಆಗುತ್ತಿದೆ ಪೇರಳೆ ಹಣ್ಣಿನ ವ್ಯಾಪಾರಿಯ ಹಾಡು: ಇಲ್ಲಿದೆ ವಿಡಿಯೋ
ಪೇರಳೆ ಹಣ್ನು ಮಾರಾಟಗಾರ
Follow us
TV9 Web
| Updated By: Pavitra Bhat Jigalemane

Updated on:Mar 04, 2022 | 10:30 AM

ಸಾಮಾಜಿಕ ಜಾಲತಾಣದಲ್ಲಿ ಪಶ್ಚಿಮ ಬಂಗಾಳದ ಕಡಲೆಕಾಯಿ ಮಾರಾಟಗಾರ ಬುಬನ್​ ಬಡ್ಯಾಕರ್​ ಹಾಡಿದ್ದ ಕಚ್ಚಾ ಬಾದಾಮ್​ ಹಾಡು ವೈರಲ್​ ಆಗಿ ಸಿಕ್ಕಾಪಟ್ಟೆ ಸದ್ದು ಮಾಡಿದೆ. ಅದರ ಬೆನ್ನಲ್ಲೆ ಈಗ ಪೇರಳೆ ಹಣ್ಣಿನ ಮಾರಾಟಗಾರರೊಬ್ಬರ ಹಾಡು ಸಖತ್​ ವೈರಲ್​ ಆಗಿದೆ.  ಜಿಂಗಲ್​ ರೀತಿಯ ಹಾಡು ಇದೀಗ ವೈರಲ್​ ಆಗಿದ್ದು ಪೇರಳೆ ಹಣ್ಣು ಕೊಳ್ಳುವಂತೆ ಜನರನ್ನು ತಮ್ಮ ಹಾಡಿನ ಮೂಲಕ ಆಕರ್ಷಿಸಿದ್ದಾರೆ. ‘ಯೇ ಹರಿ ಹರಿ, ಕಚ್ಚಿ ಕಚ್ಚಿ, ಪೀಲಿ ಪೀಲಿ, ಪಾಕಿ ಪಾಕಿ, ಮೀಠಿ ಮೀಠಿ, ಗದ್ದರ್ ಗದ್ದರ್, ತಾಜಾ ತಾಜಾ, ನಮಕ್ ಲಗಾ ಕೆ ಖಾಜ್ ಖಾಜಾ’ ಎನ್ನುವ ಸಾಲನ್ನು ಹೇಳುವ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದಾರೆ.  ವೈರಲ್ ಆಗಿರುವ ಪೇರಳೆ ವ್ಯಾಪಾರಿಯ ಹಾಡು ಯುಟ್ಯೂಬ್​ನಲ್ಲಿ6 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

27 ಸೆಕೆಂಡಿನ ವಿಡಿಯೋದಲ್ಲಿ ಗಾಡಿಯ ಮೇಲೆ ರಾಶಿ ಪೇರಳೆ ಹಣ್ಣುಗಳನ್ನು ಹಾಕಿಕೊಂಡು ಕುಳಿತ ವೃದ್ಧ ಕುಳಿತಿರುತ್ತಾನೆ. ಪೇರಳೆ ಹಣ್ಣು ಕೊಳ್ಳುವಂತೆ ಹಾಡನ್ನು ಹೇಳಿದ್ದಾರೆ. ಸದ್ಯ ಈ ವಿಡಿಯೋ ಯುಟ್ಯೂಬ್​ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಈ ವಿಡಿಯೋ ಎಲ್ಲಿಯದ್ದು ಎಂದು ತಿಳಿದಿಲ್ಲ. ಆದರೆ ವೃದ್ಧನನ್ನು ಅಲ್ಲಿಯ ಜನ ದಾದಾಜಿ ಎಂದೇ ಕರೆಯುತ್ತಾರೆ. ವಿಡಿಯೋ ನೋಡಿದ ನೆಟ್ಟಿಗರು ಬೆಸ್ಟ್​ ಎಂದು ಕಾಮೆಂಟ್​ ಮಾಡಿದ್ದು, ಮುಂದಿನ ದಿನಗಳಲ್ಲಿ ಈ ಹಾಡಿಗೂ ನೆಟ್ಟಿಗರು ರೀಲ್ಸ್​ ಮಾಡುತ್ತಾರೆ ಎಂದು ಕಾಮೆಂಟ್​ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಬುಬನ್​ ಬಡ್ಯಾಕರ್​ ಹಾಡಿದ್ದ ಕಚ್ಚಾ ಬಾದಾಮ್​ ಹಾಡು ಭಾರತ ಮಾತ್ರವಲ್ಲದೆ ವಿದೇಶದಲ್ಲಿಯೂ ವೈರಲ್​ ಆಗಿತ್ತು. ಬುಬನ್​ ಬಡ್ಯಾಕರ್​ ತಮ್ಮ ಹಾಡಿನ ಮೂಲಕ 13 ಲಕ್ಷ ಆದಾಯವನ್ನೂ ಗಳಿಸಿದ್ದರು. ಕಳೆದ ವಾರ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:

ಕ್ಯಾನ್ಸರ್​ ಪೀಡಿತ 52 ವರ್ಷದ ತಾಯಿಗೆ ಮರು ಮದುವೆ ಮಾಡಿಸಿದ ಮಗ

Published On - 9:47 am, Fri, 4 March 22

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!