AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚ್ಚಾ ಬಾದಾಮ್​ ಬಳಿಕ ವೈರಲ್​ ಆಗುತ್ತಿದೆ ಪೇರಳೆ ಹಣ್ಣಿನ ವ್ಯಾಪಾರಿಯ ಹಾಡು: ಇಲ್ಲಿದೆ ವಿಡಿಯೋ

ಬುಬನ್​ ಬಡ್ಯಾಕರ್​ ಹಾಡಿದ್ದ ಕಚ್ಚಾ ಬಾದಾಮ್​ ಹಾಡು ವೈರಲ್​ ಆಗಿ ಸಿಕ್ಕಾಪಟ್ಟೆ ಸದ್ದು ಮಾಡಿದೆ. ಅದರ ಬೆನ್ನಲ್ಲೆ ಈಗ ಪೇರಳೆ ಹಣ್ಣಿನ ಮಾರಾಟಗಾರರೊಬ್ಬರ ಹಾಡು ಸಖತ್​ ವೈರಲ್​ ಆಗಿದೆ. 

ಕಚ್ಚಾ ಬಾದಾಮ್​ ಬಳಿಕ ವೈರಲ್​ ಆಗುತ್ತಿದೆ ಪೇರಳೆ ಹಣ್ಣಿನ ವ್ಯಾಪಾರಿಯ ಹಾಡು: ಇಲ್ಲಿದೆ ವಿಡಿಯೋ
ಪೇರಳೆ ಹಣ್ನು ಮಾರಾಟಗಾರ
TV9 Web
| Edited By: |

Updated on:Mar 04, 2022 | 10:30 AM

Share

ಸಾಮಾಜಿಕ ಜಾಲತಾಣದಲ್ಲಿ ಪಶ್ಚಿಮ ಬಂಗಾಳದ ಕಡಲೆಕಾಯಿ ಮಾರಾಟಗಾರ ಬುಬನ್​ ಬಡ್ಯಾಕರ್​ ಹಾಡಿದ್ದ ಕಚ್ಚಾ ಬಾದಾಮ್​ ಹಾಡು ವೈರಲ್​ ಆಗಿ ಸಿಕ್ಕಾಪಟ್ಟೆ ಸದ್ದು ಮಾಡಿದೆ. ಅದರ ಬೆನ್ನಲ್ಲೆ ಈಗ ಪೇರಳೆ ಹಣ್ಣಿನ ಮಾರಾಟಗಾರರೊಬ್ಬರ ಹಾಡು ಸಖತ್​ ವೈರಲ್​ ಆಗಿದೆ.  ಜಿಂಗಲ್​ ರೀತಿಯ ಹಾಡು ಇದೀಗ ವೈರಲ್​ ಆಗಿದ್ದು ಪೇರಳೆ ಹಣ್ಣು ಕೊಳ್ಳುವಂತೆ ಜನರನ್ನು ತಮ್ಮ ಹಾಡಿನ ಮೂಲಕ ಆಕರ್ಷಿಸಿದ್ದಾರೆ. ‘ಯೇ ಹರಿ ಹರಿ, ಕಚ್ಚಿ ಕಚ್ಚಿ, ಪೀಲಿ ಪೀಲಿ, ಪಾಕಿ ಪಾಕಿ, ಮೀಠಿ ಮೀಠಿ, ಗದ್ದರ್ ಗದ್ದರ್, ತಾಜಾ ತಾಜಾ, ನಮಕ್ ಲಗಾ ಕೆ ಖಾಜ್ ಖಾಜಾ’ ಎನ್ನುವ ಸಾಲನ್ನು ಹೇಳುವ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದಾರೆ.  ವೈರಲ್ ಆಗಿರುವ ಪೇರಳೆ ವ್ಯಾಪಾರಿಯ ಹಾಡು ಯುಟ್ಯೂಬ್​ನಲ್ಲಿ6 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

27 ಸೆಕೆಂಡಿನ ವಿಡಿಯೋದಲ್ಲಿ ಗಾಡಿಯ ಮೇಲೆ ರಾಶಿ ಪೇರಳೆ ಹಣ್ಣುಗಳನ್ನು ಹಾಕಿಕೊಂಡು ಕುಳಿತ ವೃದ್ಧ ಕುಳಿತಿರುತ್ತಾನೆ. ಪೇರಳೆ ಹಣ್ಣು ಕೊಳ್ಳುವಂತೆ ಹಾಡನ್ನು ಹೇಳಿದ್ದಾರೆ. ಸದ್ಯ ಈ ವಿಡಿಯೋ ಯುಟ್ಯೂಬ್​ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಈ ವಿಡಿಯೋ ಎಲ್ಲಿಯದ್ದು ಎಂದು ತಿಳಿದಿಲ್ಲ. ಆದರೆ ವೃದ್ಧನನ್ನು ಅಲ್ಲಿಯ ಜನ ದಾದಾಜಿ ಎಂದೇ ಕರೆಯುತ್ತಾರೆ. ವಿಡಿಯೋ ನೋಡಿದ ನೆಟ್ಟಿಗರು ಬೆಸ್ಟ್​ ಎಂದು ಕಾಮೆಂಟ್​ ಮಾಡಿದ್ದು, ಮುಂದಿನ ದಿನಗಳಲ್ಲಿ ಈ ಹಾಡಿಗೂ ನೆಟ್ಟಿಗರು ರೀಲ್ಸ್​ ಮಾಡುತ್ತಾರೆ ಎಂದು ಕಾಮೆಂಟ್​ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಬುಬನ್​ ಬಡ್ಯಾಕರ್​ ಹಾಡಿದ್ದ ಕಚ್ಚಾ ಬಾದಾಮ್​ ಹಾಡು ಭಾರತ ಮಾತ್ರವಲ್ಲದೆ ವಿದೇಶದಲ್ಲಿಯೂ ವೈರಲ್​ ಆಗಿತ್ತು. ಬುಬನ್​ ಬಡ್ಯಾಕರ್​ ತಮ್ಮ ಹಾಡಿನ ಮೂಲಕ 13 ಲಕ್ಷ ಆದಾಯವನ್ನೂ ಗಳಿಸಿದ್ದರು. ಕಳೆದ ವಾರ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:

ಕ್ಯಾನ್ಸರ್​ ಪೀಡಿತ 52 ವರ್ಷದ ತಾಯಿಗೆ ಮರು ಮದುವೆ ಮಾಡಿಸಿದ ಮಗ

Published On - 9:47 am, Fri, 4 March 22

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!