Video: ಅಮ್ಮಾ… ಓ ಅಮ್ಮಾ… ತಾಯಿ ಸಮಾಧಿ ಮುಂದೆ ಕರುಳ ಕುಡಿಯ ನೋವಿನ ಆಕ್ರಂದನ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಕೆಲವೊಂದು ವಿಡಿಯೋಗಳು ನಿಜಕ್ಕೂ ನಮ್ಮ ಕಣ್ಣಂಚಲ್ಲಿ ನೀರು ತರಿಸುತ್ತವೆ. ಇದೀಗ ಅಂತಹದ್ದೇ ದೃಶ್ಯವೊಂದು ವೈರಲ್ ಆಗಿದ್ದು, ಹೆತ್ತಮ್ಮನ ಸಮಾಧಿ ಮುಂದೆ ಕುಳಿತು ಅಮ್ಮಾ..... ಓ ಅಮ್ಮಾ.... ಎಂದು ಪುಟ್ಟ ಕಂದಮ್ಮ ರೋಧಿಸುವ ದೃಶ್ಯ ಕರುಳು ಹಿಂಡುವಂತಿದೆ.

Video: ಅಮ್ಮಾ... ಓ ಅಮ್ಮಾ... ತಾಯಿ ಸಮಾಧಿ ಮುಂದೆ ಕರುಳ ಕುಡಿಯ ನೋವಿನ ಆಕ್ರಂದನ
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 23, 2024 | 12:15 PM

ಮಕ್ಕಳಿಗೆ ತಾಯಿನೇ ಎಲ್ಲಾ. ಈ ತಾಯಿ ನನ್ನೊಂದಿಗೆ ಇನ್ನು ಮುಂದೆ ಇರಲ್ಲ ಅನ್ನೋ ನೋವಿದೆಯಲ್ಲಾ, ಅದನ್ನು ಅರಗಿಸಿಕೊಳ್ಳಲು ಸಾಧ್ಯವಿಲ್ಲ. ತಾಯಿ ಇಲ್ಲದ ಕ್ಷಣವನ್ನು ಕಲ್ಪಿಸಿಕೊಳ್ಳಲು ಕೂಡಾ ಸಾಧ್ಯವಿಲ್ಲ. ತಾಯಿಯನ್ನು ಕಳೆದುಕೊಂಡ ಬಳಿಕ ಯಾರೇ ಬಂದರೂ, ಎಷ್ಟೇ ಕೊಟ್ಟರೂ, ಏನೇ ಮಾಡಿದರೂ ಈ ಅಮ್ಮನ ಸ್ಥಾನವನ್ನು ತುಂಬುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಇದೀಗ ಅದೇ ರೀತಿ ತಾಯಿಯನ್ನು ಕಳೆದುಕೊಂಡು ಅಮ್ಮಾ ಬಾರಮ್ಮ ಎಂದು ರೋಧಿಸುತ್ತಿರುವ ಪುಟ್ಟ ಕಂದಮ್ಮನ ವಿಡಿಯೋವೊಂದು ವೈರಲ್ ಆಗಿದ್ದು, ಹೆತ್ತಮ್ಮನ ಹೆತ್ತಮ್ಮನ ಸಮಾಧಿ ಮುಂದೆ ಕುಳಿತು ಅಮ್ಮಾ….. ಓ ಅಮ್ಮಾ…. ಎಂದು ಆ ಪುಟಾಣಿ ಆಕ್ರಂದಿಸುವ ದೃಶ್ಯ ಕರುಳು ಹಿಂಡುವಂತಿದೆ.

ಈ ಕುರಿತ ಪೋಸ್ಟ್ ಒಂದನ್ನು ಯಶೋಧಾ ಪೂಜಾರಿ (yashodha_poojary_journalist) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಪುಟ್ಟ ಕಂದಮ್ಮ ತನ್ನ ತಾಯಿಯ ಸಮಾಧಿ ಮುಂದೆ ಕುಳಿತು ರೋಧಿಸುತ್ತಿರುವ ದೃಶ್ಯವನ್ನು ಕಾಣಬಹುದು. ತನ್ನ ತಾಯಿಯ ಮರಣದ ನಂತರ, ಈ ಚಿಕ್ಕ ಹುಡುಗ ಅಮ್ಮನ ಸಮಾಧಿಯ ಬಳಿ ಹೋಗಿ, ಪಕ್ಕದಲ್ಲಿಯೇ ಕುಳಿತು ಅಮ್ಮಾ….. ಓ ಅಮ್ಮಾ….. ಎಂದು ನಿರಂತರವಾಗಿ ಕರೆಯುತ್ತಾ ಸಮಾಧಿಯಿಂದ ಎದ್ದು ಬರುವಂತೆ ರೋಧಿಸಿದ್ದಾನೆ. ಈ ದೃಶ್ಯ ಎಂತಹ ಕಲ್ಲು ಹೃದಯವನ್ನು ಕೂಡಾ ಕರಗಿಸುವಂತಿದೆ.

ಇದನ್ನೂ ಓದಿ: ಬೈಕ್ ಚೈನ್​​​ಗೆ ಸಿಲುಕಿದ ದುಪಟ್ಟಾ, ಯುವತಿಯ ರಕ್ಷಣೆಗೆ ಧಾವಿಸಿದ ವ್ಯಕ್ತಿ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ನಾಲ್ಕುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ 1 ಲಕ್ಷಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಈ ಮನಕಲಕುವ ದೃಶ್ಯವನ್ನು ಕಂಡು ನೋಡುಗರು ಮರುಕ ವ್ಯಕ್ತಪಡಿಸಿದ್ದಾರೆ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ