AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಮ್ಮಾ… ಓ ಅಮ್ಮಾ… ತಾಯಿ ಸಮಾಧಿ ಮುಂದೆ ಕರುಳ ಕುಡಿಯ ನೋವಿನ ಆಕ್ರಂದನ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಕೆಲವೊಂದು ವಿಡಿಯೋಗಳು ನಿಜಕ್ಕೂ ನಮ್ಮ ಕಣ್ಣಂಚಲ್ಲಿ ನೀರು ತರಿಸುತ್ತವೆ. ಇದೀಗ ಅಂತಹದ್ದೇ ದೃಶ್ಯವೊಂದು ವೈರಲ್ ಆಗಿದ್ದು, ಹೆತ್ತಮ್ಮನ ಸಮಾಧಿ ಮುಂದೆ ಕುಳಿತು ಅಮ್ಮಾ..... ಓ ಅಮ್ಮಾ.... ಎಂದು ಪುಟ್ಟ ಕಂದಮ್ಮ ರೋಧಿಸುವ ದೃಶ್ಯ ಕರುಳು ಹಿಂಡುವಂತಿದೆ.

Video: ಅಮ್ಮಾ... ಓ ಅಮ್ಮಾ... ತಾಯಿ ಸಮಾಧಿ ಮುಂದೆ ಕರುಳ ಕುಡಿಯ ನೋವಿನ ಆಕ್ರಂದನ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Aug 23, 2024 | 12:15 PM

Share

ಮಕ್ಕಳಿಗೆ ತಾಯಿನೇ ಎಲ್ಲಾ. ಈ ತಾಯಿ ನನ್ನೊಂದಿಗೆ ಇನ್ನು ಮುಂದೆ ಇರಲ್ಲ ಅನ್ನೋ ನೋವಿದೆಯಲ್ಲಾ, ಅದನ್ನು ಅರಗಿಸಿಕೊಳ್ಳಲು ಸಾಧ್ಯವಿಲ್ಲ. ತಾಯಿ ಇಲ್ಲದ ಕ್ಷಣವನ್ನು ಕಲ್ಪಿಸಿಕೊಳ್ಳಲು ಕೂಡಾ ಸಾಧ್ಯವಿಲ್ಲ. ತಾಯಿಯನ್ನು ಕಳೆದುಕೊಂಡ ಬಳಿಕ ಯಾರೇ ಬಂದರೂ, ಎಷ್ಟೇ ಕೊಟ್ಟರೂ, ಏನೇ ಮಾಡಿದರೂ ಈ ಅಮ್ಮನ ಸ್ಥಾನವನ್ನು ತುಂಬುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಇದೀಗ ಅದೇ ರೀತಿ ತಾಯಿಯನ್ನು ಕಳೆದುಕೊಂಡು ಅಮ್ಮಾ ಬಾರಮ್ಮ ಎಂದು ರೋಧಿಸುತ್ತಿರುವ ಪುಟ್ಟ ಕಂದಮ್ಮನ ವಿಡಿಯೋವೊಂದು ವೈರಲ್ ಆಗಿದ್ದು, ಹೆತ್ತಮ್ಮನ ಹೆತ್ತಮ್ಮನ ಸಮಾಧಿ ಮುಂದೆ ಕುಳಿತು ಅಮ್ಮಾ….. ಓ ಅಮ್ಮಾ…. ಎಂದು ಆ ಪುಟಾಣಿ ಆಕ್ರಂದಿಸುವ ದೃಶ್ಯ ಕರುಳು ಹಿಂಡುವಂತಿದೆ.

ಈ ಕುರಿತ ಪೋಸ್ಟ್ ಒಂದನ್ನು ಯಶೋಧಾ ಪೂಜಾರಿ (yashodha_poojary_journalist) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಪುಟ್ಟ ಕಂದಮ್ಮ ತನ್ನ ತಾಯಿಯ ಸಮಾಧಿ ಮುಂದೆ ಕುಳಿತು ರೋಧಿಸುತ್ತಿರುವ ದೃಶ್ಯವನ್ನು ಕಾಣಬಹುದು. ತನ್ನ ತಾಯಿಯ ಮರಣದ ನಂತರ, ಈ ಚಿಕ್ಕ ಹುಡುಗ ಅಮ್ಮನ ಸಮಾಧಿಯ ಬಳಿ ಹೋಗಿ, ಪಕ್ಕದಲ್ಲಿಯೇ ಕುಳಿತು ಅಮ್ಮಾ….. ಓ ಅಮ್ಮಾ….. ಎಂದು ನಿರಂತರವಾಗಿ ಕರೆಯುತ್ತಾ ಸಮಾಧಿಯಿಂದ ಎದ್ದು ಬರುವಂತೆ ರೋಧಿಸಿದ್ದಾನೆ. ಈ ದೃಶ್ಯ ಎಂತಹ ಕಲ್ಲು ಹೃದಯವನ್ನು ಕೂಡಾ ಕರಗಿಸುವಂತಿದೆ.

ಇದನ್ನೂ ಓದಿ: ಬೈಕ್ ಚೈನ್​​​ಗೆ ಸಿಲುಕಿದ ದುಪಟ್ಟಾ, ಯುವತಿಯ ರಕ್ಷಣೆಗೆ ಧಾವಿಸಿದ ವ್ಯಕ್ತಿ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ನಾಲ್ಕುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ 1 ಲಕ್ಷಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಈ ಮನಕಲಕುವ ದೃಶ್ಯವನ್ನು ಕಂಡು ನೋಡುಗರು ಮರುಕ ವ್ಯಕ್ತಪಡಿಸಿದ್ದಾರೆ.

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್