AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನನ್ನ ಹೆಂಡ್ತಿ ದಿನಾ ಕುಡಿಯುತ್ತಾಳೆ, ನನಗೂ ಕುಡಿಯಲು ಒತ್ತಾಯಿಸುತ್ತಾಳೆ, ವಿಚ್ಛೇದಕ್ಕೆ ಮುಂದಾದ ಪತಿ

ಗಂಡ ಕುಡಿದು ಬಂದು ಹೆಂಡತಿಗೆ ಕಾಟ ಕೊಡುವಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಅದಕ್ಕೆ ತದ್ವಿರುದ್ಧವಾದ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು ತಾನು ಪ್ರತಿನಿತ್ಯ ಮದ್ಯ ಸೇವಿಸುವುದು ಮಾತ್ರವಲ್ಲದೆ ಆಕೆಯ ಪತಿಗೂ ಕುಡಿಯಲು ಬಲವಂತ ಮಾಡಿದ್ದಾಳೆ. ಈಕೆಯ ದಿನನಿತ್ಯದ ಈ ದಬ್ಬಾಳಿಕೆಯಿಂದ ಬೇಸತ್ತು ಪತಿರಾಯ ಆಕೆಯನ್ನು ತವರು ಮನೆಗೆ ಬಿಟ್ಟು ಬಂದಿದ್ದಾನೆ.

Viral: ನನ್ನ ಹೆಂಡ್ತಿ ದಿನಾ ಕುಡಿಯುತ್ತಾಳೆ, ನನಗೂ ಕುಡಿಯಲು ಒತ್ತಾಯಿಸುತ್ತಾಳೆ, ವಿಚ್ಛೇದಕ್ಕೆ ಮುಂದಾದ ಪತಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Jul 11, 2024 | 2:37 PM

Share

ಕುಡಿತದ ಚಟಕ್ಕೆ ದಾಸನಾದ ಗಂಡ ತನ್ನ ಹೆಂಡತಿಗೆ ದಿನನಿತ್ಯ ಕಿರುಕುಳ ನೀಡುವ, ಕುಡುಕ ಪತಿಯ ಪ್ರತಿನಿತ್ಯದ ಕಾಟದಿಂದ ಬೇಸತ್ತು ಹೆಂಡತಿ ತವರು ಮನೆ ಸೇರುವಂತಹ ಅಥವಾ ಆತ್ಮಹತ್ಯೆಗೆ ಪ್ರಯತ್ನಿಸುವಂತಹ ಸುದ್ದಿಗಳ ಬಗ್ಗೆ ನೀವು ಕೇಳಿರುತ್ತೀರಿ ಅಲ್ವಾ. ಆದ್ರೆ ಇಲ್ಲೊಂದು ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು, ಹೆಂಡತಿಯ ಕುಡಿತದ ಚಟದಿಂದ ಗಂಡನೊಬ್ಬ ಹೈರಾಣಾಗಿದ್ದಾನೆ. ಆಕೆ ಡ್ರಿಂಕ್ಸ್‌ ಮಾಡುವುದಲ್ಲದೆ ನನಗೂ ಕುಡಿಯುವಂತೆ ಒತ್ತಾಯಿಸುತ್ತಾಳೆ ಎಂದು ಗಂಭೀರ ಆರೋಪ ಮಾಡಿರುವ ಪತಿರಾಯ ಇದೀಗ ಪತ್ನಿಗೆ ಡಿವೋರ್ಸ್‌ ನೀಡಲು ಮುಂದಾಗಿದ್ದಾನೆ.

ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ಈ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು, ವ್ಯಕ್ತಿಯೊಬ್ಬ ತನ್ನ ಪತ್ನಿಯು ವಿಪರೀತವಾಗಿ ಕುಡಿಯುತ್ತಾಳೆ ಜೊತೆಗೆ ನನಗೂ ಡ್ರಿಂಕ್ಸ್‌ ಮಾಡುವಂತೆ ಒತ್ತಾಯಿಸುತ್ತಾಳೆ ಎಂದು ಆರೋಪಿಸಿದ್ದಾನೆ. ಹೌದು ಪತ್ನಿಯ ಈ ಕುಡಿತದ ಚಟದಿಂದ ಬೇಸತ್ತ ಪತಿರಾಯ ಆಕೆಯನ್ನು ತವರು ಮನೆಗೆ ಬಿಟ್ಟು ಬಂದಿದ್ದಾನೆ. ಇದೀಗ ಈ ಪರಿಸ್ಥಿತಿ ವಿಚ್ಛೇದನ ಹಂತಕ್ಕೆ ತಲುಪಿದೆ. ಇದರಿಂದ ಕುಪಿತಗೊಂಡ ಪತ್ನಿ ಪೊಲೀಸ್‌ ಠಾಣೆಗೆ ಆಗಮಿಸಿ ಪತಿಯ ವಿರುದ್ಧ ದೂರನ್ನು ನೀಡಿದ್ದಾಳೆ. ನಂತರ ಪೊಲೀಸರು ಜಗಳವನ್ನು ಬಗೆಹರಿಸಲು ಈ ಇಬ್ಬರನ್ನೂ ಕೌಟುಂಬಿಕ ಸಲಹಾ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಇದನ್ನೂ ಓದಿ: ಟಾಯ್ಲೆಟ್‌ ಹೆಡೆ ಎತ್ತಿ ಕುಳಿತ ಹಾವು; ವಿಡಿಯೋ ವೈರಲ್‌

ಸಲಹಾ ಕೇಂದ್ರದಲ್ಲಿಯೂ ಗಂಡ ಹೆಂಡತಿಯರ ನಡುವೆ ವಾಗ್ವಾದ ನಡೆದಿದ್ದು, ಆಕೆ ಪ್ರತಿನಿತ್ಯ ಮೂರರಿಂದ ನಾಲ್ಕು ಪೆಗ್‌ ಕುಡಿತಾಳೆ, ಜೊತೆಗೆ ಕುಡಿಯುವಂತೆ ನನಗೂ ಪೀಡಿಸುತ್ತಾಳೆ. ಇದರಿಂದ ಬೇಸತ್ತು ನಾನು ಆಕೆಯನ್ನು ತವರು ಮನೆಗೆ ಬಿಟ್ಟು ಬಂದೆ ಎಂದು ಪತಿ ಆರೋಪಿಸಿದ್ದಾನೆ. ಪತಿಯ ಎಲ್ಲಾ ಆರೋಪಗಳನ್ನು ಒಪ್ಪಿಕೊಂಡಿರುವ ಹೆಂಡತಿ, ಆತ ನನ್ನನ್ನು ಹೊಡೆದು ಮನೆಯಿಂದ ಹೊರ ದಬ್ಬಿದ್ದಾನೆ ಎಂದು ಹೇಳಿಕೊಂಡಿದ್ದಾಳೆ. ಸದ್ಯ ದಂಪತಿಗಳ ನಡುವೆ ರಾಜಿ ಸಂಧಾನ ನಡೆಸಲು ಪ್ರಯತ್ನ ನಡೆಯುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Thu, 11 July 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​