AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನನ್ನ ಹೆಂಡ್ತಿ ದಿನಾ ಕುಡಿಯುತ್ತಾಳೆ, ನನಗೂ ಕುಡಿಯಲು ಒತ್ತಾಯಿಸುತ್ತಾಳೆ, ವಿಚ್ಛೇದಕ್ಕೆ ಮುಂದಾದ ಪತಿ

ಗಂಡ ಕುಡಿದು ಬಂದು ಹೆಂಡತಿಗೆ ಕಾಟ ಕೊಡುವಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಅದಕ್ಕೆ ತದ್ವಿರುದ್ಧವಾದ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು ತಾನು ಪ್ರತಿನಿತ್ಯ ಮದ್ಯ ಸೇವಿಸುವುದು ಮಾತ್ರವಲ್ಲದೆ ಆಕೆಯ ಪತಿಗೂ ಕುಡಿಯಲು ಬಲವಂತ ಮಾಡಿದ್ದಾಳೆ. ಈಕೆಯ ದಿನನಿತ್ಯದ ಈ ದಬ್ಬಾಳಿಕೆಯಿಂದ ಬೇಸತ್ತು ಪತಿರಾಯ ಆಕೆಯನ್ನು ತವರು ಮನೆಗೆ ಬಿಟ್ಟು ಬಂದಿದ್ದಾನೆ.

Viral: ನನ್ನ ಹೆಂಡ್ತಿ ದಿನಾ ಕುಡಿಯುತ್ತಾಳೆ, ನನಗೂ ಕುಡಿಯಲು ಒತ್ತಾಯಿಸುತ್ತಾಳೆ, ವಿಚ್ಛೇದಕ್ಕೆ ಮುಂದಾದ ಪತಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Jul 11, 2024 | 2:37 PM

Share

ಕುಡಿತದ ಚಟಕ್ಕೆ ದಾಸನಾದ ಗಂಡ ತನ್ನ ಹೆಂಡತಿಗೆ ದಿನನಿತ್ಯ ಕಿರುಕುಳ ನೀಡುವ, ಕುಡುಕ ಪತಿಯ ಪ್ರತಿನಿತ್ಯದ ಕಾಟದಿಂದ ಬೇಸತ್ತು ಹೆಂಡತಿ ತವರು ಮನೆ ಸೇರುವಂತಹ ಅಥವಾ ಆತ್ಮಹತ್ಯೆಗೆ ಪ್ರಯತ್ನಿಸುವಂತಹ ಸುದ್ದಿಗಳ ಬಗ್ಗೆ ನೀವು ಕೇಳಿರುತ್ತೀರಿ ಅಲ್ವಾ. ಆದ್ರೆ ಇಲ್ಲೊಂದು ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು, ಹೆಂಡತಿಯ ಕುಡಿತದ ಚಟದಿಂದ ಗಂಡನೊಬ್ಬ ಹೈರಾಣಾಗಿದ್ದಾನೆ. ಆಕೆ ಡ್ರಿಂಕ್ಸ್‌ ಮಾಡುವುದಲ್ಲದೆ ನನಗೂ ಕುಡಿಯುವಂತೆ ಒತ್ತಾಯಿಸುತ್ತಾಳೆ ಎಂದು ಗಂಭೀರ ಆರೋಪ ಮಾಡಿರುವ ಪತಿರಾಯ ಇದೀಗ ಪತ್ನಿಗೆ ಡಿವೋರ್ಸ್‌ ನೀಡಲು ಮುಂದಾಗಿದ್ದಾನೆ.

ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ಈ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು, ವ್ಯಕ್ತಿಯೊಬ್ಬ ತನ್ನ ಪತ್ನಿಯು ವಿಪರೀತವಾಗಿ ಕುಡಿಯುತ್ತಾಳೆ ಜೊತೆಗೆ ನನಗೂ ಡ್ರಿಂಕ್ಸ್‌ ಮಾಡುವಂತೆ ಒತ್ತಾಯಿಸುತ್ತಾಳೆ ಎಂದು ಆರೋಪಿಸಿದ್ದಾನೆ. ಹೌದು ಪತ್ನಿಯ ಈ ಕುಡಿತದ ಚಟದಿಂದ ಬೇಸತ್ತ ಪತಿರಾಯ ಆಕೆಯನ್ನು ತವರು ಮನೆಗೆ ಬಿಟ್ಟು ಬಂದಿದ್ದಾನೆ. ಇದೀಗ ಈ ಪರಿಸ್ಥಿತಿ ವಿಚ್ಛೇದನ ಹಂತಕ್ಕೆ ತಲುಪಿದೆ. ಇದರಿಂದ ಕುಪಿತಗೊಂಡ ಪತ್ನಿ ಪೊಲೀಸ್‌ ಠಾಣೆಗೆ ಆಗಮಿಸಿ ಪತಿಯ ವಿರುದ್ಧ ದೂರನ್ನು ನೀಡಿದ್ದಾಳೆ. ನಂತರ ಪೊಲೀಸರು ಜಗಳವನ್ನು ಬಗೆಹರಿಸಲು ಈ ಇಬ್ಬರನ್ನೂ ಕೌಟುಂಬಿಕ ಸಲಹಾ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಇದನ್ನೂ ಓದಿ: ಟಾಯ್ಲೆಟ್‌ ಹೆಡೆ ಎತ್ತಿ ಕುಳಿತ ಹಾವು; ವಿಡಿಯೋ ವೈರಲ್‌

ಸಲಹಾ ಕೇಂದ್ರದಲ್ಲಿಯೂ ಗಂಡ ಹೆಂಡತಿಯರ ನಡುವೆ ವಾಗ್ವಾದ ನಡೆದಿದ್ದು, ಆಕೆ ಪ್ರತಿನಿತ್ಯ ಮೂರರಿಂದ ನಾಲ್ಕು ಪೆಗ್‌ ಕುಡಿತಾಳೆ, ಜೊತೆಗೆ ಕುಡಿಯುವಂತೆ ನನಗೂ ಪೀಡಿಸುತ್ತಾಳೆ. ಇದರಿಂದ ಬೇಸತ್ತು ನಾನು ಆಕೆಯನ್ನು ತವರು ಮನೆಗೆ ಬಿಟ್ಟು ಬಂದೆ ಎಂದು ಪತಿ ಆರೋಪಿಸಿದ್ದಾನೆ. ಪತಿಯ ಎಲ್ಲಾ ಆರೋಪಗಳನ್ನು ಒಪ್ಪಿಕೊಂಡಿರುವ ಹೆಂಡತಿ, ಆತ ನನ್ನನ್ನು ಹೊಡೆದು ಮನೆಯಿಂದ ಹೊರ ದಬ್ಬಿದ್ದಾನೆ ಎಂದು ಹೇಳಿಕೊಂಡಿದ್ದಾಳೆ. ಸದ್ಯ ದಂಪತಿಗಳ ನಡುವೆ ರಾಜಿ ಸಂಧಾನ ನಡೆಸಲು ಪ್ರಯತ್ನ ನಡೆಯುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Thu, 11 July 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್