AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಾಯ್‌ಫ್ರೆಂಡ್‌ ಜತೆ ಜಗಳ, ಪ್ರಿಯಕರನ್ನು ಹೆದರಿಸಲು  ರೈಲ್ವೆ  ಟ್ರ್ಯಾಕ್‌ ಮೇಲೆ ಜಿಗಿದು ಪ್ರಾಣ ಕಳೆದುಕೊಂಡ ಮಹಿಳೆ

ಉತ್ತರ ಪ್ರದೇಶದ ಆಗ್ರಾದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಇಲ್ಲಿನ ರಾಜಾ ಕಿ ಮಂಡಿ ರೈಲ್ವೆ ನಿಲ್ದಾಣದಲ್ಲಿ ಪ್ರಿಯಕರನೊಂದಿಗೆ ಜಗಳವಾಡಿದ ಮಹಿಳೆಯೊಬ್ಬರು ಆತನನ್ನು ಹೆದರಿಸಲುವ ಸಲುವಾಗಿ ರೈಲ್ವೆ ಟ್ರ್ಯಾಕ್‌ ಮೇಲೆ ಜಿಗಿದು, ದುರಾದೃಷ್ಟವಶಾತ್‌ ರೈಲಿನಡಿ ಸಿಲುಕಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಈ ಆಘಾತಕಾರಿ ಘಟನೆಯ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

Video: ಬಾಯ್‌ಫ್ರೆಂಡ್‌ ಜತೆ ಜಗಳ, ಪ್ರಿಯಕರನ್ನು ಹೆದರಿಸಲು  ರೈಲ್ವೆ  ಟ್ರ್ಯಾಕ್‌ ಮೇಲೆ ಜಿಗಿದು ಪ್ರಾಣ ಕಳೆದುಕೊಂಡ ಮಹಿಳೆ
ಮಾಲಾಶ್ರೀ ಅಂಚನ್​
| Edited By: |

Updated on:May 29, 2024 | 11:59 AM

Share

ಪ್ರೇಮಿಗಳ ನಡುವೆ ಸಣ್ಣಪುಟ್ಟ ಜಗಳ ಇದ್ದಿದ್ದೆ. ಕೆಲವೊಬ್ಬರ ಜಗಳ, ಮನಸ್ಥಾಪಗಳು ತಾರಕಕ್ಕೇರಿ ಅದು ಸಾವಿನಲ್ಲಿ ಕೊನೆಯಾಗುವುದು ಕೂಡಾ ಉಂಟು. ಇದೀಗ ಅಂತಹದ್ದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಪ್ರಿಯಕರನೊಂದಿಗೆ ಜಗಳವಾಡಿದ ಮಹಿಳೆಯೊಬ್ಬರು, ನಾನು ರೈಲಿನಡಿ ಬಿದ್ದು ಸಾಯುತ್ತೇನೆ ಎಂದು ಪ್ರಿಯಕರನನ್ನು ಹೆದರಿಸಲು ಹೋಗಿ, ದುರಾದೃಷ್ಟವಶಾತ್‌ ರೈಲಿನಡಿ ಸಿಲುಕಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿನ ಆಗ್ರಾದ ರಾಜಾ ಕಿ ಮಂಡಿ ರೈಲು ನಿಲ್ದಾಣದಲ್ಲಿ ನಡೆದಿದ್ದು, ಪ್ರಿಯಕರನೊಂದಿಗೆ ಜಗಳವಾಡಿದ ಮಹಿಳೆಯೊಬ್ಬರು, ಸಿಟ್ಟಿನಿಂದ ರೈಲ್ವೆ ಹಳಿಗೆ ಹಾರಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಸಾವನ್ನಪ್ಪಿದ ಮಹಿಳೆಯನ್ನು  ಲೋಹಾ ಮಂಡಿಯ ಭಾರತಿ ಧರ್ಮೇಂದ್ರ ಎಂದು ಗುರುತಿಸಲಾಗಿದೆ. ಭಾರತಿ ಅವರಿಗೆ ಪೂನಂ ಮತ್ತು ಕೃಷ್ಣ ಎಂಬ ಇಬ್ಬರು ಮಕ್ಕಳಿದ್ದು, ಕೆಲ ವರ್ಷಗಳ ಹಿಂದೆ ಆಕೆಯ ಪತಿ ಧರ್ಮೇಂದ ಮೃತಪಟ್ಟಿದ್ದರು. ಕಳೆದ ಎರಡು ವರ್ಷಗಳಿಂದ ಭಾರತಿ ತನ್ನ ಪ್ರೇಮಿ ಕಿಶೋರ್‌ ಜೊತೆ ಲಿವ್‌ ಇನ್‌ ರಿಲೇಶನ್‌ಶಿಪ್‌ನಲ್ಲಿದ್ದರು. ಕುಡಿತದ ವಿಷಯದಲ್ಲಿ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಆಕೆ  ರೈಲ್ವೆ ನಿಲ್ದಾಣದ ಬಳಿ ಬಂದು ತಾನು ಸಾಯುವುದಾಗಿ ಪ್ರಿಯಕರನನ್ನು ಹೆದರಿಸುತ್ತಾರೆ. ನಂತರ ರೈಲ್ವೆ ಹಳಿಯ ಮೇಲೆ ಜಿಗಿದಿದ್ದಾರೆ. ಅಷ್ಟರಲ್ಲಿ ವೇಗವಾಗಿ ಬಂದ ಕೇರಳ ಎಕ್ಸ್‌ಪ್ರೆಸ್‌ ರೈಲು ಆಕೆಗೆ ಡಿಕ್ಕಿ ಹೊಡೆದಿದೆ, ಈ ಅಪಘಾತ ಸಂಭವಿಸುತ್ತಿದ್ದಂತೆ ಪ್ರಿಯಕರ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ದೃಶ್ಯಾವಳಿ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ರೈಲಿನಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಭಾರತಿ ಅವರನ್ನು ಕೂಡಲೇ ಸರೋಜಿನಿ ನಾಯ್ಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮಗುವಿನ ಮೇಲೆ ಅಟ್ಯಾಕ್‌ ಮಾಡಲು ಬಂದ ದೈತ್ಯ ಹದ್ದು, ಸ್ವಲ್ಪದರಲ್ಲಿ ಪಾರಾದ ಕಂದಮ್ಮ

ಈ ಕುರಿತ ವಿಡಿಯೋವನ್ನು ಹರಿಕಾಂತ್‌ ಶರ್ಮಾ (@harikanthsharmaG) ಎಂಬವರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಭೀಕರ ಅಪಘಾತದ ದೃಶ್ಯವನ್ನು ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:03 am, Wed, 29 May 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ