AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒರಿಯೋ ಬಿಸ್ಕೆಟ್​ನಿಂದ​ ಪಕೋಡಾ ತಯಾರಾಯ್ತು! ವಿಲಕ್ಷಣ ಆಹಾರ ಸಂಯೋಜನೆ ನೋಡಿ ಮೂಗು ಮುರಿದ ನೆಟ್ಟಿಗರು

Viral Video: ಇಲ್ಲಿಯವರೆಗೆ ಆಲೂಗಡ್ಡೆ, ಮೆಣಸು, ಈರುಳ್ಳಿಯಲ್ಲಿ ಪಕೋಡಾ ತಿಂದಿರಬಹುದು. ಆದರೆ ಎಂದಾದರೂ ಒರಿಯೊ ಬಿಸ್ಕೆಟ್​ನಿಂದ ತಯಾರಿಸಿದ ಪಕೋಡಾ ಸವಿದಿದ್ದೀರಾ? ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ಸುದ್ದಿಯಲ್ಲಿದೆ ಒರಿಯೋ ಪಕೋಡ.

ಒರಿಯೋ ಬಿಸ್ಕೆಟ್​ನಿಂದ​ ಪಕೋಡಾ ತಯಾರಾಯ್ತು! ವಿಲಕ್ಷಣ ಆಹಾರ ಸಂಯೋಜನೆ ನೋಡಿ ಮೂಗು ಮುರಿದ ನೆಟ್ಟಿಗರು
ಓರಿಯೊ ಬಿಸ್ಕೆಟ್ ಪಕೋಡ
TV9 Web
| Edited By: |

Updated on:Nov 08, 2021 | 9:30 AM

Share

ಕೆಲವರು ಹೊಸ ಹೊಸ ರೆಸಿಪಿಗಳ ರುಚಿ ಸವಿಯಲು ಕಾತುರಾಗಿರುತ್ತಾರೆ. ಕೆಲವೊಮ್ಮೆ ವಿಲಕ್ಷಣ ಆಹಾರ ಸಂಯೋಜನೆಗಳು ಹೆಚ್ಚು ಇಷ್ಟವಾಗುವುದಿಲ್ಲ. ಇದೀಗ ವೈರಲ್ ಆದ ವಿಡಿಯೊದಲ್ಲಿ ವ್ಯಾಪಾರಿಯು ಒರಿಯೊ ಬಿಸ್ಕೆಟ್​ನಿಂದ ಪಕೋಡಾ ತಯಾರಿಸಿ ಮಾರಾಟ ಮಾಡಿದ್ದಾನೆ. ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ. ಕೆಲವರು ಈ ವಿಲಕ್ಷಣ ಆಹಾರ ಸಂಯೋಜನೆ ನೋಡಿ ಮೂಗು ಮುರಿದಿದ್ದಾರೆ.

ಇಲ್ಲಿಯವರೆಗೆ ಆಲೂಗಡ್ಡೆ, ಮೆಣಸು, ಈರುಳ್ಳಿಯಲ್ಲಿ ಪಕೋಡಾ ತಿಂದಿರಬಹುದು. ಆದರೆ ಎಂದಾದರೂ ಒರಿಯೊ ಬಿಸ್ಕೆಟ್​ನಿಂದ ತಯಾರಿಸಿದ ಪಕೋಡಾ ಸವಿದಿದ್ದೀರಾ? ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ಸುದ್ದಿಯಲ್ಲಿದೆ ಒರಿಯೊ ಪಕೋಡ. ವಿಡಿಯೊದಲ್ಲಿ ಗಮನಿಸುವಂತೆ ವ್ಯಾಪಾರಿಯು ಒರಿಯೊ ಪ್ಯಾಕೇಟ್ ತೆಗೆದು ಬಿಸ್ಕೆಟ್​ಗಳನ್ನು ಕಡಲೆ ಹಿಟ್ಟಿನಲ್ಲಿ ಅದ್ದಿ ಬಂಡಿಗೆ ಬಿಟ್ಟಿದ್ದಾರೆ. ಕಾದ ಎಣ್ಣೆಯಲ್ಲಿ ಕರಿದ ನಂತರ ಬಂಡಿಯಿಂದ ಒರಿಯೋ ಪಕೋಡಾವನ್ನು ತೆಗೆದಿದ್ದಾರೆ.

ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಗುಜರಾತ್​ನ ಅಹಮದಾಬಾದ್​ನಿಂದ ಒರಿಯೋ ಬಿಸ್ಕೆಟ್ ರೆಸಿಪಿ ವೈರಲ್ ಆಗುತ್ತಿದೆ. ಈ ವಿಡಿಯೊ ಮೂರು ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಕೆಲವರು ತಮಾಷೆ ಮಾಡಿದ್ದರೆ ಇನ್ನು ಕೆಲವರು ವಿಲಕ್ಷಣ ಆಹಾರ ಸಂಯೋಜನೆ ಕಂಡು ಮೂಗು ಮುರಿದಿದ್ದಾರೆ.

ಈ ಕಣ್ಣಲ್ಲಿ ಏನೇನ್ ನೋಡ್ಬೇಕೋ ಏನೋ ಎಂದು ಓರ್ವರು ಪ್ರತಿಕ್ರಿಯೆ ನೀರಿದ್ದರೆ, ಇನ್ನು ಕೆಲವರು ಅಹಮದಾಬಾದ್​ನ ಯಾವ ಸ್ಥಳದಲ್ಲಿ ಮಾರಾಟ ಮಾಡಲಾಗುತ್ತದೆ? ಎಂದು ಪ್ರಶ್ನಿಸಿದ್ದಾರೆ. ಈ ವಿಲಕ್ಷಣ ರೆಸಿಪಿ ನೋಡಿ ನನಗೆ ವಾಕರಿಕೆ ಬರುತ್ತಿದೆ ಎಂದು ಕೆಲವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಮನಿಕೆ ಮಗೆ ಹಿತೆ ಹಾಡಲು ಪ್ರಯತ್ನಿಸಿದ ವ್ಯಕ್ತಿ! ವಿಡಿಯೊ ಮಜವಾಗಿದೆ ನೀವೇ ನೋಡಿ

Viral Video: ಲಿಫ್ಟ್​ನೊಳಗೆ ಸಿಲುಕಿಕೊಂಡು ನೇತಾಡುತ್ತಿದ್ದ ನಾಯಿ ಮರಿಯ ಜೀವ ಉಳಿಸಿದ ಡೆಲಿವರಿ ಬಾಯ್; ವಿಡಿಯೊ ನೋಡಿ

Published On - 9:27 am, Mon, 8 November 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್