AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒರಿಯೋ ಬಿಸ್ಕೆಟ್​ನಿಂದ​ ಪಕೋಡಾ ತಯಾರಾಯ್ತು! ವಿಲಕ್ಷಣ ಆಹಾರ ಸಂಯೋಜನೆ ನೋಡಿ ಮೂಗು ಮುರಿದ ನೆಟ್ಟಿಗರು

Viral Video: ಇಲ್ಲಿಯವರೆಗೆ ಆಲೂಗಡ್ಡೆ, ಮೆಣಸು, ಈರುಳ್ಳಿಯಲ್ಲಿ ಪಕೋಡಾ ತಿಂದಿರಬಹುದು. ಆದರೆ ಎಂದಾದರೂ ಒರಿಯೊ ಬಿಸ್ಕೆಟ್​ನಿಂದ ತಯಾರಿಸಿದ ಪಕೋಡಾ ಸವಿದಿದ್ದೀರಾ? ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ಸುದ್ದಿಯಲ್ಲಿದೆ ಒರಿಯೋ ಪಕೋಡ.

ಒರಿಯೋ ಬಿಸ್ಕೆಟ್​ನಿಂದ​ ಪಕೋಡಾ ತಯಾರಾಯ್ತು! ವಿಲಕ್ಷಣ ಆಹಾರ ಸಂಯೋಜನೆ ನೋಡಿ ಮೂಗು ಮುರಿದ ನೆಟ್ಟಿಗರು
ಓರಿಯೊ ಬಿಸ್ಕೆಟ್ ಪಕೋಡ
TV9 Web
| Updated By: shruti hegde|

Updated on:Nov 08, 2021 | 9:30 AM

Share

ಕೆಲವರು ಹೊಸ ಹೊಸ ರೆಸಿಪಿಗಳ ರುಚಿ ಸವಿಯಲು ಕಾತುರಾಗಿರುತ್ತಾರೆ. ಕೆಲವೊಮ್ಮೆ ವಿಲಕ್ಷಣ ಆಹಾರ ಸಂಯೋಜನೆಗಳು ಹೆಚ್ಚು ಇಷ್ಟವಾಗುವುದಿಲ್ಲ. ಇದೀಗ ವೈರಲ್ ಆದ ವಿಡಿಯೊದಲ್ಲಿ ವ್ಯಾಪಾರಿಯು ಒರಿಯೊ ಬಿಸ್ಕೆಟ್​ನಿಂದ ಪಕೋಡಾ ತಯಾರಿಸಿ ಮಾರಾಟ ಮಾಡಿದ್ದಾನೆ. ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ. ಕೆಲವರು ಈ ವಿಲಕ್ಷಣ ಆಹಾರ ಸಂಯೋಜನೆ ನೋಡಿ ಮೂಗು ಮುರಿದಿದ್ದಾರೆ.

ಇಲ್ಲಿಯವರೆಗೆ ಆಲೂಗಡ್ಡೆ, ಮೆಣಸು, ಈರುಳ್ಳಿಯಲ್ಲಿ ಪಕೋಡಾ ತಿಂದಿರಬಹುದು. ಆದರೆ ಎಂದಾದರೂ ಒರಿಯೊ ಬಿಸ್ಕೆಟ್​ನಿಂದ ತಯಾರಿಸಿದ ಪಕೋಡಾ ಸವಿದಿದ್ದೀರಾ? ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ಸುದ್ದಿಯಲ್ಲಿದೆ ಒರಿಯೊ ಪಕೋಡ. ವಿಡಿಯೊದಲ್ಲಿ ಗಮನಿಸುವಂತೆ ವ್ಯಾಪಾರಿಯು ಒರಿಯೊ ಪ್ಯಾಕೇಟ್ ತೆಗೆದು ಬಿಸ್ಕೆಟ್​ಗಳನ್ನು ಕಡಲೆ ಹಿಟ್ಟಿನಲ್ಲಿ ಅದ್ದಿ ಬಂಡಿಗೆ ಬಿಟ್ಟಿದ್ದಾರೆ. ಕಾದ ಎಣ್ಣೆಯಲ್ಲಿ ಕರಿದ ನಂತರ ಬಂಡಿಯಿಂದ ಒರಿಯೋ ಪಕೋಡಾವನ್ನು ತೆಗೆದಿದ್ದಾರೆ.

ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಗುಜರಾತ್​ನ ಅಹಮದಾಬಾದ್​ನಿಂದ ಒರಿಯೋ ಬಿಸ್ಕೆಟ್ ರೆಸಿಪಿ ವೈರಲ್ ಆಗುತ್ತಿದೆ. ಈ ವಿಡಿಯೊ ಮೂರು ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಕೆಲವರು ತಮಾಷೆ ಮಾಡಿದ್ದರೆ ಇನ್ನು ಕೆಲವರು ವಿಲಕ್ಷಣ ಆಹಾರ ಸಂಯೋಜನೆ ಕಂಡು ಮೂಗು ಮುರಿದಿದ್ದಾರೆ.

ಈ ಕಣ್ಣಲ್ಲಿ ಏನೇನ್ ನೋಡ್ಬೇಕೋ ಏನೋ ಎಂದು ಓರ್ವರು ಪ್ರತಿಕ್ರಿಯೆ ನೀರಿದ್ದರೆ, ಇನ್ನು ಕೆಲವರು ಅಹಮದಾಬಾದ್​ನ ಯಾವ ಸ್ಥಳದಲ್ಲಿ ಮಾರಾಟ ಮಾಡಲಾಗುತ್ತದೆ? ಎಂದು ಪ್ರಶ್ನಿಸಿದ್ದಾರೆ. ಈ ವಿಲಕ್ಷಣ ರೆಸಿಪಿ ನೋಡಿ ನನಗೆ ವಾಕರಿಕೆ ಬರುತ್ತಿದೆ ಎಂದು ಕೆಲವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಮನಿಕೆ ಮಗೆ ಹಿತೆ ಹಾಡಲು ಪ್ರಯತ್ನಿಸಿದ ವ್ಯಕ್ತಿ! ವಿಡಿಯೊ ಮಜವಾಗಿದೆ ನೀವೇ ನೋಡಿ

Viral Video: ಲಿಫ್ಟ್​ನೊಳಗೆ ಸಿಲುಕಿಕೊಂಡು ನೇತಾಡುತ್ತಿದ್ದ ನಾಯಿ ಮರಿಯ ಜೀವ ಉಳಿಸಿದ ಡೆಲಿವರಿ ಬಾಯ್; ವಿಡಿಯೊ ನೋಡಿ

Published On - 9:27 am, Mon, 8 November 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ