AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒರಿಯೋ ಬಿಸ್ಕೆಟ್​ನಿಂದ​ ಪಕೋಡಾ ತಯಾರಾಯ್ತು! ವಿಲಕ್ಷಣ ಆಹಾರ ಸಂಯೋಜನೆ ನೋಡಿ ಮೂಗು ಮುರಿದ ನೆಟ್ಟಿಗರು

Viral Video: ಇಲ್ಲಿಯವರೆಗೆ ಆಲೂಗಡ್ಡೆ, ಮೆಣಸು, ಈರುಳ್ಳಿಯಲ್ಲಿ ಪಕೋಡಾ ತಿಂದಿರಬಹುದು. ಆದರೆ ಎಂದಾದರೂ ಒರಿಯೊ ಬಿಸ್ಕೆಟ್​ನಿಂದ ತಯಾರಿಸಿದ ಪಕೋಡಾ ಸವಿದಿದ್ದೀರಾ? ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ಸುದ್ದಿಯಲ್ಲಿದೆ ಒರಿಯೋ ಪಕೋಡ.

ಒರಿಯೋ ಬಿಸ್ಕೆಟ್​ನಿಂದ​ ಪಕೋಡಾ ತಯಾರಾಯ್ತು! ವಿಲಕ್ಷಣ ಆಹಾರ ಸಂಯೋಜನೆ ನೋಡಿ ಮೂಗು ಮುರಿದ ನೆಟ್ಟಿಗರು
ಓರಿಯೊ ಬಿಸ್ಕೆಟ್ ಪಕೋಡ
TV9 Web
| Edited By: |

Updated on:Nov 08, 2021 | 9:30 AM

Share

ಕೆಲವರು ಹೊಸ ಹೊಸ ರೆಸಿಪಿಗಳ ರುಚಿ ಸವಿಯಲು ಕಾತುರಾಗಿರುತ್ತಾರೆ. ಕೆಲವೊಮ್ಮೆ ವಿಲಕ್ಷಣ ಆಹಾರ ಸಂಯೋಜನೆಗಳು ಹೆಚ್ಚು ಇಷ್ಟವಾಗುವುದಿಲ್ಲ. ಇದೀಗ ವೈರಲ್ ಆದ ವಿಡಿಯೊದಲ್ಲಿ ವ್ಯಾಪಾರಿಯು ಒರಿಯೊ ಬಿಸ್ಕೆಟ್​ನಿಂದ ಪಕೋಡಾ ತಯಾರಿಸಿ ಮಾರಾಟ ಮಾಡಿದ್ದಾನೆ. ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ. ಕೆಲವರು ಈ ವಿಲಕ್ಷಣ ಆಹಾರ ಸಂಯೋಜನೆ ನೋಡಿ ಮೂಗು ಮುರಿದಿದ್ದಾರೆ.

ಇಲ್ಲಿಯವರೆಗೆ ಆಲೂಗಡ್ಡೆ, ಮೆಣಸು, ಈರುಳ್ಳಿಯಲ್ಲಿ ಪಕೋಡಾ ತಿಂದಿರಬಹುದು. ಆದರೆ ಎಂದಾದರೂ ಒರಿಯೊ ಬಿಸ್ಕೆಟ್​ನಿಂದ ತಯಾರಿಸಿದ ಪಕೋಡಾ ಸವಿದಿದ್ದೀರಾ? ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ಸುದ್ದಿಯಲ್ಲಿದೆ ಒರಿಯೊ ಪಕೋಡ. ವಿಡಿಯೊದಲ್ಲಿ ಗಮನಿಸುವಂತೆ ವ್ಯಾಪಾರಿಯು ಒರಿಯೊ ಪ್ಯಾಕೇಟ್ ತೆಗೆದು ಬಿಸ್ಕೆಟ್​ಗಳನ್ನು ಕಡಲೆ ಹಿಟ್ಟಿನಲ್ಲಿ ಅದ್ದಿ ಬಂಡಿಗೆ ಬಿಟ್ಟಿದ್ದಾರೆ. ಕಾದ ಎಣ್ಣೆಯಲ್ಲಿ ಕರಿದ ನಂತರ ಬಂಡಿಯಿಂದ ಒರಿಯೋ ಪಕೋಡಾವನ್ನು ತೆಗೆದಿದ್ದಾರೆ.

ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಗುಜರಾತ್​ನ ಅಹಮದಾಬಾದ್​ನಿಂದ ಒರಿಯೋ ಬಿಸ್ಕೆಟ್ ರೆಸಿಪಿ ವೈರಲ್ ಆಗುತ್ತಿದೆ. ಈ ವಿಡಿಯೊ ಮೂರು ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಕೆಲವರು ತಮಾಷೆ ಮಾಡಿದ್ದರೆ ಇನ್ನು ಕೆಲವರು ವಿಲಕ್ಷಣ ಆಹಾರ ಸಂಯೋಜನೆ ಕಂಡು ಮೂಗು ಮುರಿದಿದ್ದಾರೆ.

ಈ ಕಣ್ಣಲ್ಲಿ ಏನೇನ್ ನೋಡ್ಬೇಕೋ ಏನೋ ಎಂದು ಓರ್ವರು ಪ್ರತಿಕ್ರಿಯೆ ನೀರಿದ್ದರೆ, ಇನ್ನು ಕೆಲವರು ಅಹಮದಾಬಾದ್​ನ ಯಾವ ಸ್ಥಳದಲ್ಲಿ ಮಾರಾಟ ಮಾಡಲಾಗುತ್ತದೆ? ಎಂದು ಪ್ರಶ್ನಿಸಿದ್ದಾರೆ. ಈ ವಿಲಕ್ಷಣ ರೆಸಿಪಿ ನೋಡಿ ನನಗೆ ವಾಕರಿಕೆ ಬರುತ್ತಿದೆ ಎಂದು ಕೆಲವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಮನಿಕೆ ಮಗೆ ಹಿತೆ ಹಾಡಲು ಪ್ರಯತ್ನಿಸಿದ ವ್ಯಕ್ತಿ! ವಿಡಿಯೊ ಮಜವಾಗಿದೆ ನೀವೇ ನೋಡಿ

Viral Video: ಲಿಫ್ಟ್​ನೊಳಗೆ ಸಿಲುಕಿಕೊಂಡು ನೇತಾಡುತ್ತಿದ್ದ ನಾಯಿ ಮರಿಯ ಜೀವ ಉಳಿಸಿದ ಡೆಲಿವರಿ ಬಾಯ್; ವಿಡಿಯೊ ನೋಡಿ

Published On - 9:27 am, Mon, 8 November 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ