AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮುಂಬೈ ಮಳೆಗೆಂದು ಎಐ ಕಲಾವಿದರು ಸೃಷ್ಟಿಸಿದ ವಾಹನಗಳು ವೈರಲ್

Mumbai Rains : ಮಳೆಗಾಲಕ್ಕೆ ಹೇಳಿ ಮಾಡಿಸಿದಂತಿವೆ, ಹೊಸ ಮಾದರಿಯ ಈ ಗಾಡಿಗಳನ್ನು ಈಗಲೇ ಬುಕ್ ಮಾಡಿಬಿಡಬೇಕು ಎನ್ನಿಸುತ್ತಿದೆಯೇ? ಅತ್ತ ನೆಟ್ಟಿಗರೂ ಇಂಥ ವಾಹನಗಳು ಮುಂಬೈನಂಥ ರಣಮಳೆಗೆ ಅತ್ಯವಶ್ಯ ಎನ್ನುತ್ತಿದ್ದಾರೆ.

Viral: ಮುಂಬೈ ಮಳೆಗೆಂದು ಎಐ ಕಲಾವಿದರು ಸೃಷ್ಟಿಸಿದ ವಾಹನಗಳು ವೈರಲ್
ಕಲಾವಿದ ಮನೋಜ್​ ಓಮ್ರೇ ಕೈಚಳಕ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 01, 2023 | 4:40 PM

Share

Artificial Intelligence : ಪ್ರತೀ ವರ್ಷದ ಮಳೆಗೆ ಮುಂಬೈ (Mumbai Rains) ಅಮಾಯಕ ಬಾಲಕನಂತೆ ಗಡಗಡ ನಡುಗಿ ತತ್ತರಿಸುತ್ತದೆ. ಏನೆಲ್ಲ ಕಳೆದುಕೊಂಡರೂ ಮತ್ತೆ ಮೆಲ್ಲಗೆ ಮೈ ಝಾಡಿಸಿಕೊಂಡು ಎದ್ದು ನಿಲ್ಲುತ್ತದೆ. ಪ್ರೀತಿಯಿಂದ ಪ್ರವಾಸಿಗರನ್ನು ಕರೆಯುತ್ತದೆ. ಸ್ಥಳೀಯರನ್ನು ಮಮತೆಯಿಂದ ಪೊರೆಯುತ್ತದೆ. ಆದರೆ ವರುಣನ ಆರ್ಭಟದಿಂದ ತಪ್ಪಿಸಿಕೊಳ್ಳುವಲ್ಲಿ ಮಾತ್ರ ಇದು ಅಸಹಾಯಕವಾಗುತ್ತಿದೆ. ಮುಂಬೈನ ಈ ಸಮಸ್ಯೆಗೆ AI (ಕೃತಕ ಬುದ್ಧಿಮತ್ತೆ) ಕಲಾವಿದರು ಅಲ್ಲಿಯ ಜನರಿಗೇ ಹೊಸ ಪರಿಹಾರವನ್ನು ಕಂಡುಕೊಳ್ಳಲು ಸೂಚಿಸಿದ್ಧಾರೆ. ಗಾಜಿನಿಂದ ಆವೃತವಾದ ದ್ವಿಚಕ್ರವಾಹನ, ಬಸ್​, ಬೋಟ್​​, ಟೆಂಪೋ, ರಕ್ಷಣಾ ಪಡೆಗಳ ವಾಹನಗಳನ್ನು ತಯಾರಿಸಿದ್ಧಾರೆ. ಇದೀಗ ಶರವೇಗದಲ್ಲಿ ಈ ಕಲಾಕೃತಿಗಳು ವೈರಲ್ ಆಗುತ್ತಿವೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Manoj Omre (@manojomre)

ಮನೋಜ್ ಓಮ್ರೆ (Manoj Omre) MidJourney ಎಂಬ ಎಐ ಪ್ರೋಗ್ರ್ಯಾಂ ಮೂಲಕ ಈ ಚಿತ್ರಗಳನ್ನು ಸೃಷ್ಟಿಸಿದ್ದಾರೆ. ನಾಲ್ಕು ದಿನಗಳ ಹಿಂದೆ ಮಾಡಿದ ಈ ಪೋಸ್ಟ್​ ಅನ್ನು ಈತನಕ ಸುಮಾರು 8,000 ಜನರು ಇಷ್ಟಪಟ್ಟಿದ್ದಾರೆ. ಇದು ತುಂಬಾ ಸುಂದರ ಮತ್ತು ಅರ್ಥಪೂರ್ಣ ಆಲೋಚನೆ ಎಂದಿದ್ದಾರೆ ನೆಟ್ಟಿಗರು. ಇಂಥ ಆಲೋಚನೆಗಳು ನಿಮಗೊಬ್ಬರಿಗೇ ಹೊಳೆದಿರಲು ಸಾಕು, ಭೇಷ್​ ಎಂದಿದ್ದಾರೆ ಕೆಲವರು. ಈ ಹಿಂದೆ, ತಾಜ್ ಮಹಲ್ ಎಯ ಚಿತ್ರಗಳನ್ನು ಕಲಾವಿದರೊಬ್ಬರು ಮಿಡ್​ಜರ್ನಿ ಮೂಲಕವೇ ರಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ : Viral Video: ”ಸಿಗರೇಟು ಭಾಗ್ಯದ ನಾರಿಯರು”; ಇದೇನು ನಿಜವೋ ನಾಟಕವೋ ರಾಜಕೀಯದಾಟವೋ?

ಇತ್ತೀಚೆಗೆ ಟ್ರೆಂಡ್​ ಆಧಾರಿತ ಚಿತ್ರಗಳನ್ನು ರಚಿಸುವತ್ತ ಎಐ ಕಲಾವಿದರು ಹೆಚ್ಚು ಆಸ್ಥೆ ವಹಿಸುತ್ತಿದ್ದಾರೆ ಮತ್ತು ಜನಮೆಚ್ಚುಗೆಯನ್ನೂ ಗಳಿಸುತ್ತಿದ್ದಾರೇನೋ ನಿಜ. ಆದರೆ ಇತರೇ ಕ್ಷೇತ್ರಗಳಲ್ಲಿ ಎಐ ಮುಂದೆ ಏನೆಲ್ಲ ತಿರುಮಂತ್ರವನ್ನು ನೀಡುವುದೋ ಎಂದು ಸಾಫ್ಟ್​​ವೇರ್​ ದೈತ್ಯರು ಚಿಂತಾಕ್ರಾಂತರಾಗುತ್ತಿರುವುದು ದಿನೇ ದಿನೇ ಹೆಚ್ಚುತ್ತಿದೆ. ಏನೇ ಆಗಲಿ ಹರಿವ ಹೊಳೆಯಲ್ಲಿ ಎಲ್ಲವೂ ತೇಲಿ ಹೋಗುತ್ತಿರುತ್ತದೆ. ಮತ್ತೆ ಹೊಸತು ಹುಟ್ಟುತ್ತಲೇ ಇರುತ್ತದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:39 pm, Sat, 1 July 23

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!