AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಜೀವ ಉಳಿಸಿದ ಏರ್ ಇಂಡಿಯಾ ಸಿಬ್ಬಂದಿ ಮತ್ತು ಪ್ರಯಾಣಿಕರು

Air India : ವಿಮಾನ ಪ್ರಯಾಣದ ವೇಳೆ ಆಕಸ್ಮಿಕವಾಗಿ ಕುಸಿದುಬಿದ್ದ ಮಹಿಳೆಯ ಪ್ರಾಣವನ್ನು ಏರ್​ ಇಂಡಿಯಾ ಸಿಬ್ಬಂದಿ ಮತ್ತು ಸಹಪ್ರಯಾಣಿಕರು ಹೇಗೆ ಸಾವಧಾನದಲ್ಲಿ ಕಾಪಾಡಿದರು ಎಂದು ವಿವರಿಸಿದ ಲಿಂಕ್ಡ್​ಇನ್​ ಪೋಸ್ಟ್​ ಇದೀಗ ವೈರಲ್ ಆಗಿದೆ.

ಮಹಿಳೆಯ ಜೀವ ಉಳಿಸಿದ ಏರ್ ಇಂಡಿಯಾ ಸಿಬ್ಬಂದಿ ಮತ್ತು ಪ್ರಯಾಣಿಕರು
ಪ್ರಾತಿನಿಧಿಕ ಚಿತ್ರ
TV9 Web
| Edited By: ಶ್ರೀದೇವಿ ಕಳಸದ|

Updated on: Dec 27, 2022 | 11:36 AM

Share

Viral : ಏರ್​ ಇಂಡಿಯಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಅಕಸ್ಮಾತ್ ಆಗಿ ಕುಸಿದು ಬಿದ್ದಾಗ ಅವರನ್ನು ಪ್ರಾಣಾಪಾಯದಿಂದ ಉಳಿಸಲು ಏರ್​ ಇಂಡಿಯಾ ಸಿಬ್ಬಂದಿ ಮತ್ತು ಸಹಪ್ರಯಾಣಿಕರು ತುರ್ತಾಗಿ ಹೇಗೆ ತೊಡಗಿಕೊಂಡರು ಎಂಬುದನ್ನು ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಎರ್ಗೋ ಟೆಕ್ನಾಲಜಿ ಅಂಡ್​ ಸರ್ವೀಸಸ್​ನ ಉಪಾಧ್ಯಕ್ಷ ಧನಂಜಯ್ ದೇವಾಸ್ಪರ್ ಲಿಂಕ್ಡ್​ಇನ್​ ನಲ್ಲಿ ಪೋಸ್ಟ್ ಮಾಡಿದ್ದಾರೆ.

Air India crew and passengers saved a woman story gone viral

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಡಿಸೆಂಬರ್ 22ರಂದು ಏರ್ ಇಂಡಿಯಾ 911 ವಿಮಾನವು ದುಬೈಗೆ ಹೊರಡಲು ಟೇಕ್​ ಆಫ್​ ಆಗಿ ಒಂದು ಗಂಟೆಯ ನಂತರ ಆಕಸ್ಮಿಕವಾಗಿ ಮಹಿಳೆಯೊಬ್ಬರು ಕುಸಿದು ಸೀಟಿನಿಂದ ಕೆಳಕ್ಕೆ ಬಿದ್ದುಬಿಟ್ಟರು. ಆಗ ಏರ್​ ಇಂಡಿಯಾ ಸಿಬ್ಬಂದಿ ತೇಜಸ್ ಮತ್ತು ಅನಿತಾ ಡಿಕ್ರೂಝ್ ಮಹಿಳೆಯ ನಿಗಾ ವಹಿಸುವುದರಲ್ಲಿ ಪ್ರವೃತ್ತರಾದರು.  ಪ್ರಯಾಣಿಕರಲ್ಲಿ ಶಾಂತತೆಯನ್ನು ಕಾಪಾಡಿಕೊಳ್ಳಲು ಮನವಿ ಮಾಡಿಕೊಳ್ಳುತ್ತಾ ಪ್ರಯಾಣಿಕರಲ್ಲಿ ಯಾರಾದರೂ ವೈದ್ಯರಿದ್ದಾರೆಯೇ ಎಂದು ಘೋಷಿಸಲಾಯಿತು.

ಇದನ್ನೂ ಓದಿ : ಬೆದರಿದ ಹರಿಣಿಯರು; ಕುಖ್ಯಾತ ಸರಣಿ ಹಂತಕ ಚಾರ್ಲ್ಸ್​ ಶೋಭರಾಜ ವಿಮಾನ ಪ್ರಯಾಣದ ಫೋಟೋ ವೈರಲ್

ಕುಸಿದು ಬಿದ್ದ ಮಹಿಳೆಯು ಪ್ರಜ್ಞೆ ಕಳೆದುಕೊಳ್ಳದಂತೆ ಅನಿತಾ ಅವರನ್ನು ಮಾತನಾಡಿಸುತ್ತಿದ್ದರು. ತೇಜಸ್​ ಸಕ್ಕರೆ ಮತ್ತು ನೀರಿನೊಂದಿಗೆ ಅಲ್ಲಿಗೆ ಬಂದು ಪ್ರಥಮೋಪಚಾರ ನಡೆಸಿದರು. ಈ ವೇಳೆ ಸಹಪ್ರಯಾಣಿಕರು ಯಾವುದೇ ರೀತಿಯ ಗಾಬರಿಗೆ ಒಳಗಾಗದೆ ಶಾಂತವಾಗಿ ಇದೆಲ್ಲವನ್ನೂ ಗಮನಿಸುತ್ತಿದ್ದರು. ಮೂವರು ಪ್ರಯಾಣಿಕರು ತಮ್ಮ ಆಸನಗಳನ್ನು ಆ ಮಹಿಳೆಗೆ ಬಿಟ್ಟುಕೊಟ್ಟರು. ಆ ಆಸನಗಳ ಮೇಲೆ ಮಲಗಿದ ಮಹಿಳೆ ಕ್ರಮೇಣ ಸುಧಾರಿಸಿಕೊಂಡರು. ವಿಮಾನದಿಂದ ಇಳಿದ ತಕ್ಷಣ ವೈದ್ಯರು ನಿಮ್ಮನ್ನು ಪರಿಶೀಲಿಸುತ್ತಾರೆ ಎಂದು ಅನಿತಾ ಆ ಮಹಿಳೆಗೆ ತಿಳಿಸಿದರು.

ಇಂಥ ತುರ್ತು ಸಂದರ್ಭವನ್ನು ಸಿಬ್ಬಂದಿ ಮತ್ತು ಪ್ರಯಾಣಿಕರು ಸಮಾಧಾನದಿಂದ ನಿರ್ವಹಿಸಿದ ರೀತಿ ನಿಜಕ್ಕೂ ಶ್ಲಾಘನೀಯ ಎಂದು ಈ ಪೋಸ್ಟ್ ಬರೆದಿದ್ದಾರೆ ಧನಂಜಯ್ ದೇವಾಸ್ಪರ್.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು