AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಜೀವ ಉಳಿಸಿದ ಏರ್ ಇಂಡಿಯಾ ಸಿಬ್ಬಂದಿ ಮತ್ತು ಪ್ರಯಾಣಿಕರು

Air India : ವಿಮಾನ ಪ್ರಯಾಣದ ವೇಳೆ ಆಕಸ್ಮಿಕವಾಗಿ ಕುಸಿದುಬಿದ್ದ ಮಹಿಳೆಯ ಪ್ರಾಣವನ್ನು ಏರ್​ ಇಂಡಿಯಾ ಸಿಬ್ಬಂದಿ ಮತ್ತು ಸಹಪ್ರಯಾಣಿಕರು ಹೇಗೆ ಸಾವಧಾನದಲ್ಲಿ ಕಾಪಾಡಿದರು ಎಂದು ವಿವರಿಸಿದ ಲಿಂಕ್ಡ್​ಇನ್​ ಪೋಸ್ಟ್​ ಇದೀಗ ವೈರಲ್ ಆಗಿದೆ.

ಮಹಿಳೆಯ ಜೀವ ಉಳಿಸಿದ ಏರ್ ಇಂಡಿಯಾ ಸಿಬ್ಬಂದಿ ಮತ್ತು ಪ್ರಯಾಣಿಕರು
ಪ್ರಾತಿನಿಧಿಕ ಚಿತ್ರ
TV9 Web
| Edited By: ಶ್ರೀದೇವಿ ಕಳಸದ|

Updated on: Dec 27, 2022 | 11:36 AM

Share

Viral : ಏರ್​ ಇಂಡಿಯಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಅಕಸ್ಮಾತ್ ಆಗಿ ಕುಸಿದು ಬಿದ್ದಾಗ ಅವರನ್ನು ಪ್ರಾಣಾಪಾಯದಿಂದ ಉಳಿಸಲು ಏರ್​ ಇಂಡಿಯಾ ಸಿಬ್ಬಂದಿ ಮತ್ತು ಸಹಪ್ರಯಾಣಿಕರು ತುರ್ತಾಗಿ ಹೇಗೆ ತೊಡಗಿಕೊಂಡರು ಎಂಬುದನ್ನು ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಎರ್ಗೋ ಟೆಕ್ನಾಲಜಿ ಅಂಡ್​ ಸರ್ವೀಸಸ್​ನ ಉಪಾಧ್ಯಕ್ಷ ಧನಂಜಯ್ ದೇವಾಸ್ಪರ್ ಲಿಂಕ್ಡ್​ಇನ್​ ನಲ್ಲಿ ಪೋಸ್ಟ್ ಮಾಡಿದ್ದಾರೆ.

Air India crew and passengers saved a woman story gone viral

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಡಿಸೆಂಬರ್ 22ರಂದು ಏರ್ ಇಂಡಿಯಾ 911 ವಿಮಾನವು ದುಬೈಗೆ ಹೊರಡಲು ಟೇಕ್​ ಆಫ್​ ಆಗಿ ಒಂದು ಗಂಟೆಯ ನಂತರ ಆಕಸ್ಮಿಕವಾಗಿ ಮಹಿಳೆಯೊಬ್ಬರು ಕುಸಿದು ಸೀಟಿನಿಂದ ಕೆಳಕ್ಕೆ ಬಿದ್ದುಬಿಟ್ಟರು. ಆಗ ಏರ್​ ಇಂಡಿಯಾ ಸಿಬ್ಬಂದಿ ತೇಜಸ್ ಮತ್ತು ಅನಿತಾ ಡಿಕ್ರೂಝ್ ಮಹಿಳೆಯ ನಿಗಾ ವಹಿಸುವುದರಲ್ಲಿ ಪ್ರವೃತ್ತರಾದರು.  ಪ್ರಯಾಣಿಕರಲ್ಲಿ ಶಾಂತತೆಯನ್ನು ಕಾಪಾಡಿಕೊಳ್ಳಲು ಮನವಿ ಮಾಡಿಕೊಳ್ಳುತ್ತಾ ಪ್ರಯಾಣಿಕರಲ್ಲಿ ಯಾರಾದರೂ ವೈದ್ಯರಿದ್ದಾರೆಯೇ ಎಂದು ಘೋಷಿಸಲಾಯಿತು.

ಇದನ್ನೂ ಓದಿ : ಬೆದರಿದ ಹರಿಣಿಯರು; ಕುಖ್ಯಾತ ಸರಣಿ ಹಂತಕ ಚಾರ್ಲ್ಸ್​ ಶೋಭರಾಜ ವಿಮಾನ ಪ್ರಯಾಣದ ಫೋಟೋ ವೈರಲ್

ಕುಸಿದು ಬಿದ್ದ ಮಹಿಳೆಯು ಪ್ರಜ್ಞೆ ಕಳೆದುಕೊಳ್ಳದಂತೆ ಅನಿತಾ ಅವರನ್ನು ಮಾತನಾಡಿಸುತ್ತಿದ್ದರು. ತೇಜಸ್​ ಸಕ್ಕರೆ ಮತ್ತು ನೀರಿನೊಂದಿಗೆ ಅಲ್ಲಿಗೆ ಬಂದು ಪ್ರಥಮೋಪಚಾರ ನಡೆಸಿದರು. ಈ ವೇಳೆ ಸಹಪ್ರಯಾಣಿಕರು ಯಾವುದೇ ರೀತಿಯ ಗಾಬರಿಗೆ ಒಳಗಾಗದೆ ಶಾಂತವಾಗಿ ಇದೆಲ್ಲವನ್ನೂ ಗಮನಿಸುತ್ತಿದ್ದರು. ಮೂವರು ಪ್ರಯಾಣಿಕರು ತಮ್ಮ ಆಸನಗಳನ್ನು ಆ ಮಹಿಳೆಗೆ ಬಿಟ್ಟುಕೊಟ್ಟರು. ಆ ಆಸನಗಳ ಮೇಲೆ ಮಲಗಿದ ಮಹಿಳೆ ಕ್ರಮೇಣ ಸುಧಾರಿಸಿಕೊಂಡರು. ವಿಮಾನದಿಂದ ಇಳಿದ ತಕ್ಷಣ ವೈದ್ಯರು ನಿಮ್ಮನ್ನು ಪರಿಶೀಲಿಸುತ್ತಾರೆ ಎಂದು ಅನಿತಾ ಆ ಮಹಿಳೆಗೆ ತಿಳಿಸಿದರು.

ಇಂಥ ತುರ್ತು ಸಂದರ್ಭವನ್ನು ಸಿಬ್ಬಂದಿ ಮತ್ತು ಪ್ರಯಾಣಿಕರು ಸಮಾಧಾನದಿಂದ ನಿರ್ವಹಿಸಿದ ರೀತಿ ನಿಜಕ್ಕೂ ಶ್ಲಾಘನೀಯ ಎಂದು ಈ ಪೋಸ್ಟ್ ಬರೆದಿದ್ದಾರೆ ಧನಂಜಯ್ ದೇವಾಸ್ಪರ್.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ