AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಿಮಾಚಲ ಪ್ರದೇಶ: ಅಪರೂಪದ ಬಿಳಿ ಹಾವು ಪತ್ತೆ, ವಿಡಿಯೋ ವೈರಲ್

Albino : ಸುರಿಯುತ್ತಿರುವ ಮಳೆಯ ನಡುವೆಯೇ ಈ ಹಾವು ಪೊದೆಯಲ್ಲಿ ಕಾಣಿಸಿಕೊಂಡಿದೆ. ಬಹಳ ಅಪರೂಪಕ್ಕೆ ಕಾಣಿಸಿಕೊಳ್ಳುವ ಈ ಹಾವಿನ ಬಗ್ಗೆ ಸ್ಥಳೀಯರಲ್ಲಿ ಭಯ ಮತ್ತು ಕುತೂಹಲ ಉಂಟಾಗಿದೆ.

Viral Video: ಹಿಮಾಚಲ ಪ್ರದೇಶ: ಅಪರೂಪದ ಬಿಳಿ ಹಾವು ಪತ್ತೆ, ವಿಡಿಯೋ ವೈರಲ್
ಅಲ್ಬಿನೋ ಹಾವು, ಸೌಜನ್ಯ : ಅಂತರ್ಜಾಲ
ಶ್ರೀದೇವಿ ಕಳಸದ
|

Updated on: Jul 31, 2023 | 3:25 PM

Share

Himachal Pradesh : ಹಿಮಾಚಲ ಪ್ರದೇಶದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ (Rains) ಭಾರೀ ಅವಾಂತರಗಳು ಸೃಷ್ಟಿಯಾಗುತ್ತಲೇ ಇವೆ. ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿರುವ ವಿಡಿಯೋಗಳನ್ನು ನೋಡುತ್ತಿದ್ದರಂತೂ ಆತಂಕ ಉಂಟಾಗುತ್ತದೆ. ಈ ಎಲ್ಲದರ ಮಧ್ಯೆಯೇ ಬಿಳೀ ಹಾವೊಂದು (Albino Snake) ಆ ಪ್ರದೇಶದಲ್ಲಿ ಪತ್ತೆಯಾಗಿದ್ದು ಅದರ ವಿಡಿಯೋ ವೈರಲ್ ಆಗಿದೆ. ಚಂಬಾ ಜಿಲ್ಲೆಯ ಪೊದೆಗಳ ಬಳಿ ಈ ಹಾವು ಸಾಗುತ್ತಿದ್ದಾಗ ಕ್ಯಾಮೆರಾ ಕಣ್ಣಿಗೆ ಬಿದ್ದಿದೆ. ಕಳೆದ ವರ್ಷ ಪುಣೆಯಲ್ಲಿ ಅಲ್ಬಿನೋ ಹಾವು ಪತ್ತೆಯಾಗಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಈ ಹಾವಿನ ಕಣ್ಣುಗಳು ಸಾಮಾನ್ಯವಾಗಿ ಕೆಂಪು ಅಥವಾ ಗುಲಾಬಿ ಬಣ್ಣದಿಂದ ಕೂಡಿರುತ್ತವೆ. ಕೆಂಪು, ಕಪ್ಪು ಮತ್ತು ಕಂದುಬಣ್ಣಗಳ ಹಾವುಗಳ ಆನುವಂಶಿಕ ರೂಪಾಂತರದಿಂದಾಗಿ ಬಿಳಿ ಹಾವಾಗಿ ಜನಿಸುತ್ತವೆ. ಮೆಲಾನಿನ್ ಪಿಗ್ಮೆಂಟೇಷನ್​ನಿಂದಾಗಿ ಇವು ಬಿಳೀಬಣ್ಣವನ್ನು ಹೊಂದುತ್ತವೆ. ಮನುಷ್ಯರು ಹೇಗೆ Albinism (ಬಿಳುಚು) ಗೆ ತುತ್ತಾಗುತ್ತಾರೋ ಹಾಗೆಯೇ ಹಾವುಗಳೂ. ಈತನಕ ಈ ವಿಡಿಯೋ ಅನ್ನು ಸುಮಾರು 120 ಜನರು ನೋಡಿದ್ದಾರೆ.

ಇದನ್ನೂ ಓದಿ : Viral Video: ತೊರೆದು ಜೀವಿಸಬಹುದೇ ನಿಮ್ಮ ಸಿರಿಕಂಠವ; 5 ಮಿಲಿಯನ್ ಕೇಳುಗರನ್ನು ತಲುಪಿದ ಈ ದಾಸರಪದ 

ಅಲ್ಬಿನೋ ಹಾವುಗಳ ದೃಷ್ಟಿ ಕೂಡ ದುರ್ಬಲವಾಗಿರುತ್ತದೆ. ಎಷ್ಟೋ ಸಲ ಶಾಶ್ವತವಾಗಿ ಕುರುಡುತನಕ್ಕೆ ಜಾರುವ ಸಾಧ್ಯತೆ ಇರುತ್ತದೆ. ಏಕೆಂದರೆ ಅಲ್ಬಿನಿಸಂ ರೋಗವು ಇವುಗಳ ಕಣ್ಣಿನಲ್ಲಿರುವ ಮೆಲನಿನ್ ಮೇಲೆಯೂ ಪರಿಣಾಮ ಬೀರಿರುತ್ತದೆ. ಹಾಗಾಗಿ ಮನುಷ್ಯರಷ್ಟೇ ಅಲ್ಲ, ಪ್ರಾಣಿಗಳೂ ಕೂಡ ಈ ರೋಗದಿಂದ ಕುರುಡುತನಕ್ಕೆ ಈಡಾಗುವುದು ಸಹಜ.

ಇದನ್ನೂ ಓದಿ : Viral Video: ಮೊದಲ ಸಲ ಉದ್ಯಾನಕ್ಕೆ ಬಂದ ಟೋಕೋ; ನಾಯಿಯಾಗಲು ರೂ 12 ಲಕ್ಷ ವ್ಯಯಿಸಿದ ಜಪಾನಿಗ

ಇದಕ್ಕೊಂದು ಗುಡಿ ಕಟ್ಟಿ ಪೂಜೆ ಪುನಸ್ಕಾರ ಮಾಡಿ ಮತ್ತಷ್ಟು ವೈರಲ್​ ಮಾಡಲು ಸದ್ಯ ಅಲ್ಲಿಯ ಜನರಿಗೆ ಪುರಸೊತ್ತಿಲ್ಲ. ಹಾಗಾಗಿ ಈ ಹಾವು ಸದ್ಯಕ್ಕೆ ಬಚಾವ್​!

ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು