AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಿಮಾಚಲ ಪ್ರದೇಶ: ಅಪರೂಪದ ಬಿಳಿ ಹಾವು ಪತ್ತೆ, ವಿಡಿಯೋ ವೈರಲ್

Albino : ಸುರಿಯುತ್ತಿರುವ ಮಳೆಯ ನಡುವೆಯೇ ಈ ಹಾವು ಪೊದೆಯಲ್ಲಿ ಕಾಣಿಸಿಕೊಂಡಿದೆ. ಬಹಳ ಅಪರೂಪಕ್ಕೆ ಕಾಣಿಸಿಕೊಳ್ಳುವ ಈ ಹಾವಿನ ಬಗ್ಗೆ ಸ್ಥಳೀಯರಲ್ಲಿ ಭಯ ಮತ್ತು ಕುತೂಹಲ ಉಂಟಾಗಿದೆ.

Viral Video: ಹಿಮಾಚಲ ಪ್ರದೇಶ: ಅಪರೂಪದ ಬಿಳಿ ಹಾವು ಪತ್ತೆ, ವಿಡಿಯೋ ವೈರಲ್
ಅಲ್ಬಿನೋ ಹಾವು, ಸೌಜನ್ಯ : ಅಂತರ್ಜಾಲ
Follow us
ಶ್ರೀದೇವಿ ಕಳಸದ
|

Updated on: Jul 31, 2023 | 3:25 PM

Himachal Pradesh : ಹಿಮಾಚಲ ಪ್ರದೇಶದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ (Rains) ಭಾರೀ ಅವಾಂತರಗಳು ಸೃಷ್ಟಿಯಾಗುತ್ತಲೇ ಇವೆ. ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿರುವ ವಿಡಿಯೋಗಳನ್ನು ನೋಡುತ್ತಿದ್ದರಂತೂ ಆತಂಕ ಉಂಟಾಗುತ್ತದೆ. ಈ ಎಲ್ಲದರ ಮಧ್ಯೆಯೇ ಬಿಳೀ ಹಾವೊಂದು (Albino Snake) ಆ ಪ್ರದೇಶದಲ್ಲಿ ಪತ್ತೆಯಾಗಿದ್ದು ಅದರ ವಿಡಿಯೋ ವೈರಲ್ ಆಗಿದೆ. ಚಂಬಾ ಜಿಲ್ಲೆಯ ಪೊದೆಗಳ ಬಳಿ ಈ ಹಾವು ಸಾಗುತ್ತಿದ್ದಾಗ ಕ್ಯಾಮೆರಾ ಕಣ್ಣಿಗೆ ಬಿದ್ದಿದೆ. ಕಳೆದ ವರ್ಷ ಪುಣೆಯಲ್ಲಿ ಅಲ್ಬಿನೋ ಹಾವು ಪತ್ತೆಯಾಗಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಈ ಹಾವಿನ ಕಣ್ಣುಗಳು ಸಾಮಾನ್ಯವಾಗಿ ಕೆಂಪು ಅಥವಾ ಗುಲಾಬಿ ಬಣ್ಣದಿಂದ ಕೂಡಿರುತ್ತವೆ. ಕೆಂಪು, ಕಪ್ಪು ಮತ್ತು ಕಂದುಬಣ್ಣಗಳ ಹಾವುಗಳ ಆನುವಂಶಿಕ ರೂಪಾಂತರದಿಂದಾಗಿ ಬಿಳಿ ಹಾವಾಗಿ ಜನಿಸುತ್ತವೆ. ಮೆಲಾನಿನ್ ಪಿಗ್ಮೆಂಟೇಷನ್​ನಿಂದಾಗಿ ಇವು ಬಿಳೀಬಣ್ಣವನ್ನು ಹೊಂದುತ್ತವೆ. ಮನುಷ್ಯರು ಹೇಗೆ Albinism (ಬಿಳುಚು) ಗೆ ತುತ್ತಾಗುತ್ತಾರೋ ಹಾಗೆಯೇ ಹಾವುಗಳೂ. ಈತನಕ ಈ ವಿಡಿಯೋ ಅನ್ನು ಸುಮಾರು 120 ಜನರು ನೋಡಿದ್ದಾರೆ.

ಇದನ್ನೂ ಓದಿ : Viral Video: ತೊರೆದು ಜೀವಿಸಬಹುದೇ ನಿಮ್ಮ ಸಿರಿಕಂಠವ; 5 ಮಿಲಿಯನ್ ಕೇಳುಗರನ್ನು ತಲುಪಿದ ಈ ದಾಸರಪದ 

ಅಲ್ಬಿನೋ ಹಾವುಗಳ ದೃಷ್ಟಿ ಕೂಡ ದುರ್ಬಲವಾಗಿರುತ್ತದೆ. ಎಷ್ಟೋ ಸಲ ಶಾಶ್ವತವಾಗಿ ಕುರುಡುತನಕ್ಕೆ ಜಾರುವ ಸಾಧ್ಯತೆ ಇರುತ್ತದೆ. ಏಕೆಂದರೆ ಅಲ್ಬಿನಿಸಂ ರೋಗವು ಇವುಗಳ ಕಣ್ಣಿನಲ್ಲಿರುವ ಮೆಲನಿನ್ ಮೇಲೆಯೂ ಪರಿಣಾಮ ಬೀರಿರುತ್ತದೆ. ಹಾಗಾಗಿ ಮನುಷ್ಯರಷ್ಟೇ ಅಲ್ಲ, ಪ್ರಾಣಿಗಳೂ ಕೂಡ ಈ ರೋಗದಿಂದ ಕುರುಡುತನಕ್ಕೆ ಈಡಾಗುವುದು ಸಹಜ.

ಇದನ್ನೂ ಓದಿ : Viral Video: ಮೊದಲ ಸಲ ಉದ್ಯಾನಕ್ಕೆ ಬಂದ ಟೋಕೋ; ನಾಯಿಯಾಗಲು ರೂ 12 ಲಕ್ಷ ವ್ಯಯಿಸಿದ ಜಪಾನಿಗ

ಇದಕ್ಕೊಂದು ಗುಡಿ ಕಟ್ಟಿ ಪೂಜೆ ಪುನಸ್ಕಾರ ಮಾಡಿ ಮತ್ತಷ್ಟು ವೈರಲ್​ ಮಾಡಲು ಸದ್ಯ ಅಲ್ಲಿಯ ಜನರಿಗೆ ಪುರಸೊತ್ತಿಲ್ಲ. ಹಾಗಾಗಿ ಈ ಹಾವು ಸದ್ಯಕ್ಕೆ ಬಚಾವ್​!

ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?