AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಿಮಾಚಲ ಪ್ರದೇಶ: ಅಪರೂಪದ ಬಿಳಿ ಹಾವು ಪತ್ತೆ, ವಿಡಿಯೋ ವೈರಲ್

Albino : ಸುರಿಯುತ್ತಿರುವ ಮಳೆಯ ನಡುವೆಯೇ ಈ ಹಾವು ಪೊದೆಯಲ್ಲಿ ಕಾಣಿಸಿಕೊಂಡಿದೆ. ಬಹಳ ಅಪರೂಪಕ್ಕೆ ಕಾಣಿಸಿಕೊಳ್ಳುವ ಈ ಹಾವಿನ ಬಗ್ಗೆ ಸ್ಥಳೀಯರಲ್ಲಿ ಭಯ ಮತ್ತು ಕುತೂಹಲ ಉಂಟಾಗಿದೆ.

Viral Video: ಹಿಮಾಚಲ ಪ್ರದೇಶ: ಅಪರೂಪದ ಬಿಳಿ ಹಾವು ಪತ್ತೆ, ವಿಡಿಯೋ ವೈರಲ್
ಅಲ್ಬಿನೋ ಹಾವು, ಸೌಜನ್ಯ : ಅಂತರ್ಜಾಲ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on: Jul 31, 2023 | 3:25 PM

Share

Himachal Pradesh : ಹಿಮಾಚಲ ಪ್ರದೇಶದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ (Rains) ಭಾರೀ ಅವಾಂತರಗಳು ಸೃಷ್ಟಿಯಾಗುತ್ತಲೇ ಇವೆ. ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿರುವ ವಿಡಿಯೋಗಳನ್ನು ನೋಡುತ್ತಿದ್ದರಂತೂ ಆತಂಕ ಉಂಟಾಗುತ್ತದೆ. ಈ ಎಲ್ಲದರ ಮಧ್ಯೆಯೇ ಬಿಳೀ ಹಾವೊಂದು (Albino Snake) ಆ ಪ್ರದೇಶದಲ್ಲಿ ಪತ್ತೆಯಾಗಿದ್ದು ಅದರ ವಿಡಿಯೋ ವೈರಲ್ ಆಗಿದೆ. ಚಂಬಾ ಜಿಲ್ಲೆಯ ಪೊದೆಗಳ ಬಳಿ ಈ ಹಾವು ಸಾಗುತ್ತಿದ್ದಾಗ ಕ್ಯಾಮೆರಾ ಕಣ್ಣಿಗೆ ಬಿದ್ದಿದೆ. ಕಳೆದ ವರ್ಷ ಪುಣೆಯಲ್ಲಿ ಅಲ್ಬಿನೋ ಹಾವು ಪತ್ತೆಯಾಗಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಈ ಹಾವಿನ ಕಣ್ಣುಗಳು ಸಾಮಾನ್ಯವಾಗಿ ಕೆಂಪು ಅಥವಾ ಗುಲಾಬಿ ಬಣ್ಣದಿಂದ ಕೂಡಿರುತ್ತವೆ. ಕೆಂಪು, ಕಪ್ಪು ಮತ್ತು ಕಂದುಬಣ್ಣಗಳ ಹಾವುಗಳ ಆನುವಂಶಿಕ ರೂಪಾಂತರದಿಂದಾಗಿ ಬಿಳಿ ಹಾವಾಗಿ ಜನಿಸುತ್ತವೆ. ಮೆಲಾನಿನ್ ಪಿಗ್ಮೆಂಟೇಷನ್​ನಿಂದಾಗಿ ಇವು ಬಿಳೀಬಣ್ಣವನ್ನು ಹೊಂದುತ್ತವೆ. ಮನುಷ್ಯರು ಹೇಗೆ Albinism (ಬಿಳುಚು) ಗೆ ತುತ್ತಾಗುತ್ತಾರೋ ಹಾಗೆಯೇ ಹಾವುಗಳೂ. ಈತನಕ ಈ ವಿಡಿಯೋ ಅನ್ನು ಸುಮಾರು 120 ಜನರು ನೋಡಿದ್ದಾರೆ.

ಇದನ್ನೂ ಓದಿ : Viral Video: ತೊರೆದು ಜೀವಿಸಬಹುದೇ ನಿಮ್ಮ ಸಿರಿಕಂಠವ; 5 ಮಿಲಿಯನ್ ಕೇಳುಗರನ್ನು ತಲುಪಿದ ಈ ದಾಸರಪದ 

ಅಲ್ಬಿನೋ ಹಾವುಗಳ ದೃಷ್ಟಿ ಕೂಡ ದುರ್ಬಲವಾಗಿರುತ್ತದೆ. ಎಷ್ಟೋ ಸಲ ಶಾಶ್ವತವಾಗಿ ಕುರುಡುತನಕ್ಕೆ ಜಾರುವ ಸಾಧ್ಯತೆ ಇರುತ್ತದೆ. ಏಕೆಂದರೆ ಅಲ್ಬಿನಿಸಂ ರೋಗವು ಇವುಗಳ ಕಣ್ಣಿನಲ್ಲಿರುವ ಮೆಲನಿನ್ ಮೇಲೆಯೂ ಪರಿಣಾಮ ಬೀರಿರುತ್ತದೆ. ಹಾಗಾಗಿ ಮನುಷ್ಯರಷ್ಟೇ ಅಲ್ಲ, ಪ್ರಾಣಿಗಳೂ ಕೂಡ ಈ ರೋಗದಿಂದ ಕುರುಡುತನಕ್ಕೆ ಈಡಾಗುವುದು ಸಹಜ.

ಇದನ್ನೂ ಓದಿ : Viral Video: ಮೊದಲ ಸಲ ಉದ್ಯಾನಕ್ಕೆ ಬಂದ ಟೋಕೋ; ನಾಯಿಯಾಗಲು ರೂ 12 ಲಕ್ಷ ವ್ಯಯಿಸಿದ ಜಪಾನಿಗ

ಇದಕ್ಕೊಂದು ಗುಡಿ ಕಟ್ಟಿ ಪೂಜೆ ಪುನಸ್ಕಾರ ಮಾಡಿ ಮತ್ತಷ್ಟು ವೈರಲ್​ ಮಾಡಲು ಸದ್ಯ ಅಲ್ಲಿಯ ಜನರಿಗೆ ಪುರಸೊತ್ತಿಲ್ಲ. ಹಾಗಾಗಿ ಈ ಹಾವು ಸದ್ಯಕ್ಕೆ ಬಚಾವ್​!

ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!