AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News : ಇಂಡೋನ್ಯೇಷ್ಯಾದಲ್ಲಿ ನಡೆಯುತ್ತೆ ಪ್ರವಾಸಿಗರ ಜೊತೆ ತಾತ್ಕಾಲಿಕ ಮದುವೆ, ಏನಿದು ವಿಚಿತ್ರ ಮದುವೆ ಪದ್ಧತಿ?

ನಮ್ಮ ಹಿರಿಯರ ಕಾಲದಲ್ಲಿ ಮದುವೆ ಎಂದರೆ ಅದೊಂದು ಪವಿತ್ರ ಬಂಧನ ಎನ್ನುವ ಭಾವವಿತ್ತು. ಈಗಿನ ಕಾಲದಲ್ಲಿ ಮದುವೆಯು ಅರ್ಥ ಕಳೆದುಕೊಂಡಿದೆ. ಇದಕ್ಕೆ ಉದಾಹರಣೆ ಎಂಬಂತ ಇಂಡೋನೇಷ್ಯಾದ ಕೆಲ ಭಾಗಗಳಲ್ಲಿ ತಾತ್ಕಾಲಿಕ ಮದುವೆಗಳ ಟ್ರೆಂಡ್‌ ಹುಟ್ಟಿಕೊಂಡಿದೆ. ಪ್ರವಾಸಕ್ಕೆಂದು ಬರುವವರನ್ನು ಆಕರ್ಷಿಸಿ ಅವರೊಂದಿಗೆ ಇಲ್ಲಿನ ಯುವತಿಯರು ತಾತ್ಕಾಲಿಕ ಮದುವೆಯಾಗುತ್ತಿದ್ದಾರೆ. ಆದರೆ ಈ ಪ್ರವಾಸಿಗರು ವಾಪಸ್ಸು ತನ್ನ ದೇಶಕ್ಕೆ ಮರಳಿದರೆ ಯುವತಿಯ ಜೊತೆಗಿನ ಮದುವೆಯು ರದ್ದಾಗುತ್ತದೆಯಂತೆ.

Viral News : ಇಂಡೋನ್ಯೇಷ್ಯಾದಲ್ಲಿ ನಡೆಯುತ್ತೆ ಪ್ರವಾಸಿಗರ ಜೊತೆ ತಾತ್ಕಾಲಿಕ ಮದುವೆ, ಏನಿದು ವಿಚಿತ್ರ ಮದುವೆ ಪದ್ಧತಿ?
ಸಾಯಿನಂದಾ
| Edited By: |

Updated on: Oct 13, 2024 | 2:08 PM

Share

ಮಾನವನು ಎಷ್ಟು ಅಭಿವೃದ್ಧಿ ಹೊಂದಿದ್ದಾನೆ ಎಂದರೆ ಸಂಬಂಧವನ್ನು ಕೂಡ ಹಣಕ್ಕಾಗಿ ಬಳಸಿಕೊಳ್ಳುತ್ತಿದ್ದಾನೆ. ಗಂಡ ಹೆಂಡತಿ ಪವಿತ್ರ ಸಂಬಂಧವೆಂದು ಹೇಳಲಾಗುತ್ತದೆ. ಆದರೆ ಇದೀಗ ಈಗ ಮದುವೆಯೇ ಆಗದೇ ಸಂಸಾರ ನಡೆಸುವವರು ಹೆಚ್ಚಾಗುತ್ತಿದ್ದಾರೆ. ಅದಲ್ಲದೇ ಇಂಡೋನೇಷ್ಯಾದ ಕೆಲ ಭಾಗಗಳಲ್ಲಿ ತಾತ್ಕಾಲಿಕ ಮದುವೆಗಳ ಟ್ರೆಂಡ್‌ ವೊಂದು ಹುಟ್ಟಿಕೊಂಡಿದ್ದು ಈ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

ಹಣಕ್ಕಾಗಿ ಪ್ರವಾಸಿಗರೊಂದಿಗೆ ತಾತ್ಕಾಲಿಕ ವಿವಾಹ ಬಂಧನಕ್ಕೆ ಒಳಗಾಗುವ ಉದ್ಯಮವೊಂದು ಇಂಡೋನೇಷ್ಯಾದ ಪನ್ಕಾಕ್ ಪ್ರದೇಶದಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದೆ. ಇದನ್ನು “ಸಂತೋಷದ ಮದುವೆಗಳು” ಎಂದು ಕರೆಯಲಾಗುತ್ತಿದೆ. ಹೌದು, ದಕ್ಷಿಣ ಚೀನಾ ಮಾರ್ನಿಂಗ್ ಪೋಸ್ಟ್ ಮಾಡಿದ ವರದಿಯ ಪ್ರಕಾರ ಈ ದೇಶದಲ್ಲಿ ಅತ್ಯಂತ ಕಡು ಬಡತನದ ಹಿನ್ನೆಲೆಯಿಂದ ಬಂದ ಯುವತಿಯರು ತಾತ್ಕಾಲಿಕ ಮದುವೆಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

ಹೇಳಿ ಕೇಳಿ ಈ ಇಂಡೋನೇಷಿಯಾ ಆತ್ಯಕರ್ಷಕ ಪ್ರವಾಸಿ ತಾಣವಾಗಿದ್ದು ಇಲ್ಲಿಗೆ ಲಕ್ಷಾಂತರ ಪ್ರವಾಸಿಗರು ಪ್ರೇಕ್ಷಣೀಯ ತಾಣಗಳನ್ನು ನೋಡಲೆಂದೇ ಬರುತ್ತಾರೆ. ಆದರೆ ಇಲ್ಲಿ ಬಡ ಯುವತಿಯರು ಪ್ರವಾಸಿಗರನ್ನು ಹಣಕ್ಕಾಗಿ ವಾರದ ಮಟ್ಟಿಗೆ ಮದುವೆಯಾಗುತ್ತಾರಂತೆ. ಇದನ್ನೇ ತಾತ್ಕಾಲಿಕ ಮದುವೆ ಎಂದು ಕರೆಯಲಾಗುತ್ತದೆ. ಇಂಡೋನೇಷ್ಯಾದ ಪುಂಕಾಕ್‌ ಎಂಬ ಹಳ್ಳಿಯಲ್ಲಿ ಇಂತಹದ್ದೊಂದು ಪದ್ಧತಿ ಇದೆ. ಅದಲ್ಲದೇ, ಸ್ಥಳೀಯ ಹೆಣ್ಣು ಮಕ್ಕಳೇ ದುಡ್ಡಿಗಾಗಿ ಯುವತಿಯರನ್ನು ಮದುವೆ ಮಾಡಿಕೊಳ್ಳುವ ಎಜೆನ್ಸಿಗಳನ್ನು ಪ್ರಾರಂಭಿಸಿದ್ದಾರೆ.

ಈ ಎಜೆನ್ಸಿಗಳು ಯುವತಿ ಹಾಗೂ ಇಲ್ಲಿಗೆ ಬಂದ ಪ್ರವಾಸಿಗರು ಒಪ್ಪಿಕೊಂಡರೆ ಮದುವೆ ಮಾಡಿ ಮುಗಿಸುತ್ತಾರೆ. ಇಲ್ಲಿಗೆ ಬಂದ ಪ್ರವಾಸಿಗರು ಮದುವೆಗಾಗಿ ವಧುದಕ್ಷಿಣೆ ಎಂದು ಲಕ್ಷಾಂತರ ರೂಪಾಯಿ ಹಣವನ್ನು ನೀಡಬೇಕು. ಆದಾದ ಬಳಿಕ ತಮ್ಮ ತಮ್ಮ ದೇಶಕ್ಕೆ ಹೋರಾಟ ಪ್ರವಾಸಿಗರ ಜೊತೆಗಿನ ಈ ಮದುವೆಯು ರದ್ದಾಗುತ್ತದೆ. ಆ ಬಳಿಕ ಈ ಯುವತಿಯು ಬೇರೊಬ್ಬ ಪ್ರವಾಸಿಗನನ್ನು ಇದೇ ರೀತಿ ವರಿಸಿಕೊಳ್ಳುತ್ತಾಳೆ.

ಇದನ್ನೂ ಓದಿ: ಇದೇನಾ ಸಭ್ಯತೆ, ಇದೇನಾ ಸಂಸ್ಕೃತಿ? ತುಂಡುಡುಗೆ ತೊಟ್ಟು ದುರ್ಗಾ ಪೂಜೆಗೆ ಬಂದ ಮೂವರು ಯುವತಿಯರು

ಕಹಾಯಾ ಎನ್ನುವ ಯುವತಿಯು ಈ ತಾತ್ಕಾಲಿಕ ಮದುವೆಯ ಬಗ್ಗೆ ಹೇಳಿಕೊಂಡಿದ್ದು, ತಾನು 17 ವರ್ಷ ವಯಸ್ಸಿನಲ್ಲಿ ತಾತ್ಕಾಲಿಕ ಹೆಂಡತಿಯಾಗಿದ್ದೇನೆ. ಈವರೆಗೆ ತಾನು 15ಕ್ಕೂ ಹೆಚ್ಚು ಬಾರಿ ಮದುವೆಯಾಗಿದ್ದೇನೆ. ಎಲ್ಲವೂ ಮಧ್ಯಪ್ರಾಚ್ಯದ ಪ್ರವಾಸಿಗರು. ಮೊದಲ ತಾತ್ಕಾಲಿಕ ಪತಿ ಸೌದಿ ಅರೇಬಿಯಾದ 50ರ ಹರೆಯದ ವ್ಯಕ್ತಿ ಎಂದಿದ್ದಾಳೆ.

ಅದಲ್ಲದೇ, ಈಕೆಯು 850 ಡಾಲರ್ ಕೊಟ್ಟು ಮದುವೆಯಾಗಿದ್ದನಂತೆ. ಏಜೆಂಟ್ ಮತ್ತು ಅಧಿಕಾರಿಗಳು ತಮ್ಮ ಪಾಲು ಪಡೆದ ಬಳಿಕ ಅರ್ಧದಷ್ಟು ಮೊತ್ತ ಮಾತ್ರ ತಮ್ಮ ಕೈ ಸೇರಿತ್ತು. ಆದರೆ ಮದುವೆಯಾದ ಐದು ದಿನಗಳ ಬಳಿಕ ಪತಿ ತನ್ನ ದೇಶಕ್ಕೆ ವಾಪಾಸ್ಸಾಗಿದ್ದಾನೆ. ಆ ಬಳಿಕ ವಿಚ್ಛೇದನ ಪಡೆದಿದ್ದೇನೆ. ಇದರಿಂದಲೇ ತಮ್ಮ ಜೀವನ ಸಾಗುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವ ಅಜ್ಜಿಯನ್ನು ನೋಡಿಕೊಳ್ಳಲು ಈ ಮದುವೆಯಿಂದ ಸಾಧ್ಯವಾಗಿದೆ ಎಂದಿದ್ದಾರೆ. ಇಲ್ಲಿನ ಇನ್ನೊಬ್ಬ ಮಹಿಳೆಯು ಕೂಡ ತಾನು ಕನಿಷ್ಠ 20 ಬಾರಿ ಮದುವೆಯಾಗಿದ್ದೇನೆ. ಈಗ ಇಂಡೋನೇಷ್ಯಾದ ವ್ಯಕ್ತಿಯೊಬ್ಬನನ್ನು ಮದುವೆಯಾಗಿ ಇಬ್ಬರು ಮಕ್ಕಳನ್ನು ಪಡೆದಿದ್ದೇನೆ ಎಂದಿದ್ದಾಳೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು