AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಟಿಗಾಗಿ ‘ಮುಂಬೈ ಲೋಕಲ್​’ನಲ್ಲಿ ಮಹಿಳೆಯರ ಜಟಾಪಟಿ, ಮಹಿಳಾ ಪೊಲೀಸ್ ಗಾಯ

Mumbai Local : ಮುಂಬೈ ಲೋಕಲ್‌ನಲ್ಲಿ ಮಹಿಳೆಯರ ಮಧ್ಯೆ ನಡೆದ ಘರ್ಷಣೆಯಿಂದಾಗಿ ಮಹಿಳಾ ಪೊಲೀಸ್​ ಒಬ್ಬರು ಗಾಯಗೊಂಡ ವಿಡಿಯೋ ವೈರಲ್ ಆಗುತ್ತಿದೆ.

ಸೀಟಿಗಾಗಿ ‘ಮುಂಬೈ ಲೋಕಲ್​’ನಲ್ಲಿ ಮಹಿಳೆಯರ ಜಟಾಪಟಿ, ಮಹಿಳಾ ಪೊಲೀಸ್ ಗಾಯ
All Out Fight Between Women On Mumbai Local
TV9 Web
| Edited By: ಶ್ರೀದೇವಿ ಕಳಸದ|

Updated on:Oct 07, 2022 | 11:34 AM

Share

Viral Video :  ಮುಂಬೈನ ಥಾಣೆ-ಪನ್ವೆಲ್ ಲೋಕಲ್ ರೈಲಿನ ಮಹಿಳಾ​ ಕಂಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯರು ಪರಸ್ಪರ ಜಗಳಕ್ಕೆ ಇಳಿದಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಕರ್ತವ್ಯ ನಿರತರಾಗಿದ್ದ ಮಹಿಳಾ ಪೊಲೀಸರೊಬ್ಬರು ಗಾಯಗೊಂಡಿದ್ದಾರೆ. ವಾಶಿ ಸರ್ಕಾರಿ ರೈಲ್ವೇ ಪೊಲೀಸ್ ಇನ್ಸ್‌ಪೆಕ್ಟರ್ ಸಂಭಾಜಿ ಕಟಾರೆ ಪ್ರಕಾರ, ರೈಲಿನೊಳಗಿನ ಸೀಟುಗಳಿಗಾಗಿ ಮೂವರು ಮಹಿಳಾ ಪ್ರಯಾಣಿಕರ ಮಧ್ಯೆ ಜಗಳ ಶುರುವಾಗಿದೆ. ನಂತರ ಈ ಜಗಳದಲ್ಲಿ ಉಳಿದ ಮಹಿಳೆಯರೂ ತೊಡಗಿಕೊಂಡಾಗ ಅದು ತೀವ್ರ ಹೊಡೆದಾಟಕ್ಕೆ ತಿರುಗಿಕೊಂಡು ಇಡೀ ಕಂಪಾರ್ಟ್​ಮೆಂಟ್​ನಲ್ಲಿ ಭಯಾನಕ ದೃಶ್ಯ ನಿರ್ಮಾಣವಾಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ಜಗಳವನ್ನು ಬಗೆಹರಿಸಲು ಮಹಿಳಾ ಪೊಲೀಸ್​ ಪ್ರಯತ್ನಿಸಿದಾಗ ಕೆಲ ಮಹಿಳೆಯರಿಂದಲೇ ಪೊಲೀಸ್ ಹಲ್ಲೆಗೊಳಗಾದರು. ಮಹಿಳಾ ಪೊಲೀಸ್ ಸೇರಿದಂತೆ ಮೂರು ಮಹಿಳೆಯರು ಗಾಯಗೊಂಡಿದ್ದಾರೆ. ಪೊಲೀಸ್ ಮತ್ತು ಇನ್ನೊಬ್ಬ ಮಹಿಳೆಯ ಹಣೆಗೆ ಏಟು ಬಿದ್ದು ರಕ್ತಸ್ರಾವವಾಗಿದೆ. ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿರುವುದಾಗಿ ಕಟಾರೆ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ತುರ್ಭೆ ನಿಲ್ದಾಣದಲ್ಲಿ ಸೀಟು ಖಾಲಿಯಾದಾಗ ಮಹಿಳಾ ಪ್ರಯಾಣಿಕರೊಬ್ಬರು ಇನ್ನೊಬ್ಬ ಮಹಿಳೆಗೆ ಸೀಟಿನಲ್ಲಿ ಕುಳಿತುಕೊಳ್ಳಲು ಅವಕಾಶ ಮಾಡಿಕೊಡಲು ಪ್ರಯತ್ನಿಸಿದರು. ಆದರೆ ಮತ್ತೊಬ್ಬ ಮಹಿಳೆಯು ಅದೇ ಸೀಟಿನಲ್ಲಿ ಕುಳಿತುಕೊಳ್ಳಲು ಪ್ರಯತ್ನಿಸಿದರು. ಆಗ ವಾಗ್ವಾದ ಶುರುವಾಗಿ ಪರಸ್ಪರ ಹೊಡೆದಾಟಕ್ಕೆ ಇದು ತಿರುಗಿಕೊಂಡುಬಿಟ್ಟಿತು. ಪ್ರಯಾಣಿಕರೂ ಈ ಜಗಳದಲ್ಲಿ ತೊಡಗಿದ್ದರಿಂದ ಇಡೀ ಕಂಪಾರ್ಟ್​ಮೆಂಟ್​ ಅಲ್ಲೋಕಲ್ಲೋಲ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:33 am, Fri, 7 October 22

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು