AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್-19 ಲಸಿಕೆ ಅಡ್ಡ ಪರಿಣಾಮದಿಂದ ನನ್ನ ಮಗಳು ಸಾವನ್ನಪಿದ್ದಾಳೆ ಎಂದು ಆರೋಪಿಸಿ; 1000 ಕೋಟಿ ರೂ. ಪರಿಹಾರ ಕೋರಿದ ವ್ಯಕ್ತಿ

ಅರ್ಜಿದಾರರಾದ ದಿಲೀಪ್ ಲುನಾವತ್ ಅವರು ನಾಸಿಕ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ ತಮ್ಮ ಮಗಳು ಸ್ನೇಹಲ್‌ಗೆ ಲಸಿಕೆಯ ಎರಡೂ ಡೋಸ್‌ಗಳನ್ನು ನೀಡಲಾಯಿತು.

ಕೋವಿಡ್-19 ಲಸಿಕೆ ಅಡ್ಡ ಪರಿಣಾಮದಿಂದ ನನ್ನ ಮಗಳು ಸಾವನ್ನಪಿದ್ದಾಳೆ ಎಂದು ಆರೋಪಿಸಿ; 1000 ಕೋಟಿ ರೂ. ಪರಿಹಾರ ಕೋರಿದ ವ್ಯಕ್ತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 04, 2022 | 8:16 AM

ಔರಂಗಾಬಾದ್ ನಿವಾಸಿಯೊಬ್ಬರು ಮಹಾರಾಷ್ಟ್ರ ಸರ್ಕಾರ, ಸೆಂಟರ್ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ 1000 ಕೋಟಿ ರೂಪಾಯಿ ಪರಿಹಾರವನ್ನು ಕೋರಿ ಬಾಂಬೆ ಹೈಕೋರ್ಟ್‌ಗೆ ಮೊರೆ ಹೋಗಿರುವಂತಹ ಘಟನೆ ನಡೆದಿದೆ. ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ನನ್ನ ಮಗಳು ಕಳೆದ ವರ್ಷ ಜನವರಿಯಲ್ಲಿ ನೀಡಿದ ಕೋವಿಶೀಲ್ಡ್ (Covishield vaccine) ಲಸಿಕೆಯ ಅಡ್ಡ ಪರಿಣಾಮದಿಂದ ಸಾವನ್ನಪ್ಪಿದ್ದಾಳೆ ಎಂದು ಔರಂಗಾಬಾದ್ ನಿವಾಸಿಯೊಬ್ಬರು ಹೇಳಿಕೊಂಡಿದ್ದಾರೆ. ಕಳೆದ ವಾರ ಹೈಕೋರ್ಟ್‌ನ ಪ್ರಧಾನ ಪೀಠದ ಮುಂದೆ ಅರ್ಜಿ ಸಲ್ಲಿಸಿರುವ ಅರ್ಜಿದಾರ ದಿಲೀಪ್ ಲುನಾವತ್, ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕುವ ರಾಜ್ಯ ಸರ್ಕಾರದ ಉಪಕ್ರಮದ ಭಾಗವಾಗಿ ನಾಸಿಕ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ ನನ್ನ ಮಗಳು ಸ್ನೇಹಲ್‌ಗೆ ಲಸಿಕೆಯ ಎರಡೂ ಡೋಸ್‌ಗಳನ್ನು ನೀಡಲಾಗಿತ್ತು.

ಕೋವಿಡ್ ಲಸಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಮತ್ತು ದೇಹಕ್ಕೆ ಯಾವುದೇ ಅಪಾಯ ಅಥವಾ ಅಡ್ಡ ಪರಿಣಾಮ ಉಂಟುಮಾಡುವುದಿಲ್ಲ ಎಂದು ಸ್ನೇಹಲ್ ಅವರಿಗೆ ಭರವಸೆ ನೀಡಲಾಗಿತ್ತು. ಆದ್ದರಿಂದ ಅವರು ಆರೋಗ್ಯ ಕಾರ್ಯಕರ್ತೆಯಾಗಿದ್ದರಿಂದ ಕಾಲೇಜಿನಲ್ಲಿ ಲಸಿಕೆ ತೆಗೆದುಕೊಳ್ಳಲು ಒತ್ತಾಯಿಸಲಾಯಿತು” ಎಂದು ಮನವಿಯಲ್ಲಿ ತಿಳಿಸಿದ್ದಾರೆ.  ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ), ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್), ಮಹಾರಾಷ್ಟ್ರ ಸರ್ಕಾರ ಮತ್ತು ಒಕ್ಕೂಟದ ನಿರ್ದೇಶಕರು ಸೃಷ್ಟಿಸಿದ ಸುಳ್ಳು ನಿರೂಪಣೆಗಳಿಂದಾಗಿ ತಮ್ಮ ಮಗಳಂತಹ ಆರೋಗ್ಯ ಕಾರ್ಯಕರ್ತರು ಲಸಿಕೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಲುನಾವತ್ ಮನವಿ ಮಾಡಿದ್ದಾರೆ. ಲಸಿಕೆ ಹಾಕಿಸಿಕೊಳ್ಳುವದು ಸುರಕ್ಷಿತ ಎಂದು ಸರ್ಕಾರ ಹೇಳಿದೆ. ಅವರ ಮಗಳು ಜನವರಿ 28, 2021 ರಂದು ಲಸಿಕೆಯನ್ನು ತೆಗೆದುಕೊಂಡಿದ್ದು, ಆ ಲಸಿಕೆಗಳ ಅಡ್ಡಪರಿಣಾಮಗಳಿಂದಾಗಿ ಕೆಲವು ವಾರಗಳ ನಂತರ ಅಂದರೇ ಮಾರ್ಚ್ 1 ರಂದು ನಿಧನರಾದರು ಎಂದು ಅವರು ಹೇಳಿದ್ದಾರೆ.

2021 ರ ಅಕ್ಟೋಬರ್ 2 ರಂದು ಕೇಂದ್ರ ಸರ್ಕಾರದ AEFI ಸಮಿತಿಯು ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳಿಂದ ನನ್ನ ಮಗಳ ಸಾವು ಸಂಭವಿಸಿದೆ ಎಂದು ಲುನಾವತ್ ಅವರು ಹೇಳಿಕೊಂಡಿದ್ದಾರೆ. ನನ್ನ ಮಗಳಿಗೆ ನ್ಯಾಯ ಒದಗಿಸಲು ಮತ್ತು ಪ್ರತಿವಾದಿ ಅಧಿಕಾರಿಗಳ ಇಂತಹ ಕಾನೂನುಬಾಹಿರ ಚಟುವಟಿಕೆಗಳಿಂದ ಕೊಲೆಯಾಗುವ ಸಾಧ್ಯತೆಯಿರುವ ಇನ್ನೂ ಹೆಚ್ಚಿನ ಜನರ ಜೀವವನ್ನು ಉಳಿಸುವ ಸಲುವಾಗಿ ಈ ಅರ್ಜಿಯನ್ನು ಸಲ್ಲಿಸುತ್ತಿದ್ದೇನೆ ಎಂದು ಮನವಿಯಲ್ಲಿ ಹೇಳಿದ್ದಾರೆ. ಮಹಾರಾಷ್ಟ್ರ ಮತ್ತು ಕೇಂದ್ರ ಸರ್ಕಾರಗಳು, ಲಸಿಕೆ ತಯಾರಕ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಬಿಲ್ ಗೇಟ್ಸ್ ಪ್ರತಿವಾದಿ ಪಕ್ಷಗಳನ್ನು ಮಾಡಿದ ಮನವಿಯ ವಿಚಾರಣೆಯ ದಿನಾಂಕವನ್ನು ಹೈಕೋರ್ಟ್ ಇನ್ನೂ ನಿಗದಿಪಡಿಸಿಲ್ಲ.

(ಈ ಮೇಲಿನ ಮಾಹಿತಿಗಳು ಟಿವಿ9 ಡಿಜಿಟಲ್​ನ ಅಭಿಪ್ರಾಯವಾಗಿರುವುದಿಲ್ಲ. ಡಿಎನ್​ಎ ವೆಬ್​ಸೈಟ್ ವರದಿಯನ್ನು ಆಧರಿಸಿ ಮಾಹಿತಿ ನೀಡಲಾಗಿರುತ್ತದೆ.)

ಇದನ್ನೂ ಓದಿ;

Viral News: ಕಪ್ಪು ಕಣ್ಣು, ಕೊಂಬು, ಅರ್ಧ ಕಿವಿ: ಇದು ರಾಕ್ಷಸನ ಅವತಾರವಂತೆ..!

ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ