AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ನದಿಯಲ್ಲಿ ಈಜುತ್ತಿದ್ದ ವ್ಯಕ್ತಿಯ ಕೈ ಕಚ್ಚಿದ ಮೊಸಳೆ; ಆಘಾತಕಾರಿ ವಿಡಿಯೊ ವೈರಲ್

Viral Video: ನದಿಯಲ್ಲಿ ಈಜುತ್ತಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ ನಡೆಸಿದ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Shocking Video: ನದಿಯಲ್ಲಿ ಈಜುತ್ತಿದ್ದ ವ್ಯಕ್ತಿಯ ಕೈ ಕಚ್ಚಿದ ಮೊಸಳೆ; ಆಘಾತಕಾರಿ ವಿಡಿಯೊ ವೈರಲ್
ಮೊಸಳೆ ದಾಳಿ
TV9 Web
| Edited By: |

Updated on: Oct 27, 2021 | 9:34 AM

Share

ಮೊಸಳೆ, ನದಿಯಲ್ಲಿ ಈಜುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ನಡೆಸಿದ ದೃಶ್ಯದ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಈ ಘಟನೆ ಕಳೆದ ಶನಿವಾರ ಬ್ರೆಜಿಲ್​ನಲ್ಲಿ ನಡೆದಿದೆ ಎಂಬ ಮಾಹಿತಿ ತಿಳಿದು ಬಂದಿದೆ. ನದಿಯಲ್ಲಿ ಮೊಸಳೆ ವಾಸಿಸುತ್ತಿದೆ ಎಂಬ ಕಾರಣಕ್ಕೆ ಸ್ವಿಮ್ಮಿಂಗ್ಅನ್ನು ನಿಷೇಧಿಸಲಾಗಿದೆ. ಎಚ್ಚರಿಕೆಯ ಸೂಚನೆಗಳನ್ನು ನಿರ್ಲಕ್ಷ್ಯಿಸಿ ಈಜುಗಾರ ನೀರಿಗೆ ಧುಮುಕಿದ್ದಾರೆ. ಆ ಸಂದರ್ಭದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ.

ಸಂಜೆ ಸುಮಾರು 4:40 ರ ಸಮಯದಲ್ಲಿ ವ್ಯಕ್ತಿಯೊಬ್ಬ ನೀರಿಗೆ ಧುಮುಕುತ್ತಿರುವುದನ್ನು ವಿಲಿಯಮ್ ಕೆಟೊನಾ ನೋಡಿದರು. ಆ ವೇಳೆ ಮೊಸಳೆಯೊಂದು ಈಜುಗಾರನ ಮೇಲೆ ದಾಳಿ ನಡೆಸಿದೆ. ವೇಗವಾಗಿ ವ್ಯಕ್ತಿ ಇದ್ದಲ್ಲಿಗೆ ಬರಲಾರಂಭಿಸಿದೆ. ಇದನ್ನು ಗಮನಿಸಿದ ಈಜುಗಾರ ಸ್ವಿಮ್ ಮಾಡುತ್ತಾ ದಡ ಸೇರಲು ಪ್ರಯ್ನಿಸಿದ್ದಾರೆ. ಕೊನೆಯಲ್ಲಿ ಮೊಸಳೆ ಈಜುಗಾರನ ಕೈ ಕಚ್ಚಿದ ಹಿಡಿದೆ. ಹೇಗೋ ತಪ್ಪಿಸಿಕೊಂಡ ಈಜುಗಾರ ದಡ ಸೇರಿಸಿದ್ದಾನೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದ್ದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದ್ದಕ್ಕಿದ್ದಂತೆ ನನಗೆ ಆಶ್ವರ್ಯವಾಯಿತು. ಮೊಸಳೆ ವ್ಯಕ್ತಿಯನ್ನು ಬೆನ್ನಟ್ಟಿ ಬರುತ್ತಿದೆ. ಅದರಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯು ವೇಗವಾಗಿ ಈಜುತ್ತಾ ದಡ ಸೇರುತ್ತಿದ್ದಾನೆ. ಮೊಸಳೆಯಿಂದ ಹೇಗೋ ತಪ್ಪಿಸಿಕೊಂಡಿದ್ದಾನೆ. ಮೊಸಳೆ ಒಂದು ಕ್ಷಣದಲ್ಲಿ ಆತನ ಕೈಗೆ ಕಚ್ಚಿದ್ದರಿಂದ ಗಾಯಗಳಾಗಿವೆ ಎಂದು ಸ್ಥಳದಲ್ಲಿದ್ದ ಕೆಟೊನಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಸ್ಥಳೀಯ ವರದಿಗಳ ಪ್ರಕಾರ, ಘಟನೆ ನಡೆದಿದ್ದೇ ಸುತ್ತಲೂ ಜನರು ಸೇರಿದರು. ಈಜುಗಾರನಿಗೆ ಸಣ್ಣ ಪುಟ್ಟ ಗಾಯಗಳಾದ್ದರಿಂದ ಚಿಕಿತ್ಸೆ ನೀಡಲಾಯಿತು. ಗಂಭೀರವಾದ ಗಾಯಗಳಾಗಿದ್ದ ಎಂಬುದು ತಿಳಿದು ಬಂದಿದೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು 1,400 ಕ್ಕೂ ಹೆಚ್ಚು ರೀಟ್ವಿಟ್​ಗಳು, 7,000 ಕ್ಕೂ ಹೆಚ್ಚು ಲೈಕ್ಸ್​ಗಳು ಲಭ್ಯವಾಗಿದೆ. ಎಚ್ಚರಿಕೆಯ ಸೂಚನೆಗಳಿದ್ದರೂ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಹೀಗಾಗಿದೆ ಎಂದು ಓರ್ವರು ಹೇಳಿದ್ದಾರೆ. ಇನ್ನು ಕೆಲವರು, ಈ ದೃಶ್ಯ ಇತರರಿಗೆ ಎಚ್ಚರಿಕೆ ನೀಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:

Shocking Video: ಸುಂಟರಗಾಳಿ ರಭಸಕ್ಕೆ ಸಿಲುಕಿ ಪಲ್ಟಿ ಹೊಡೆದ ಟ್ರಕ್; ಶಾಕಿಂಗ್ ವಿಡಿಯೋ ಇಲ್ಲಿದೆ

Shocking Video: ಬಕೆಟ್​ನಲ್ಲಿ ನೀರು ಹಿಡಿದು ದೈತ್ಯ ನಾಗರ ಹಾವಿನ ತಲೆಯ ಮೇಲೆ ಸುರಿದ ಭೂಪ! ವಿಡಿಯೋ ನೋಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ