Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆಸ್ನಾನದ ಈ ತಂತ್ರ ಹೇಗಿದೆ? ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ

Head Bath : ಬಡತನವನ್ನು ವಿಜೃಂಭಿಸುವುದನ್ನು ನಿಲ್ಲಿಸಿ ಸಾಕು ಎಂದು ಕೆಲವರು. ಅನಿವಾರ್ಯತೆ ಇದ್ದಲ್ಲಿಯೇ ಇಂಥ ತಂತ್ರಗಳು ಹುಟ್ಟಿಕೊಳ್ಳುವುದು ಅರೆ ವ್ಹಾ! ಎಂದು ಕೆಲವರು. ಈ ವಿಡಿಯೋ ನೋಡಿದ ನೀವು ಏನು ಹೇಳುತ್ತೀರಿ?

ತಲೆಸ್ನಾನದ ಈ ತಂತ್ರ ಹೇಗಿದೆ? ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ
ಹೇಗಿದೆ ಈ ತಂತ್ರ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Nov 29, 2022 | 3:26 PM

Viral Video : ಅನಿವಾರ್ಯತೆಯೇ ಸಂಶೋಧನೆಯ ತಾಯಿ. ಎಲ್ಲವೂ ಅನುಕೂಲಕರವಾಗಿರುವಲ್ಲಿ ಮನುಷ್ಯ ಪ್ರಯತ್ನಗಳಿಗೆ ಜಾಗವಿರುವುದಿಲ್ಲ. ಆದ್ದರಿಂದ ಎಲ್ಲಿ ಕೊರತೆ ಇದೆಯೋ ಅಲ್ಲಿಯೇ ಹೊಸ ಅನ್ವೇಷಣೆಗೆ ಅವಕಾಶವಿರುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಈ ಮನುಷ್ಯ ತಲೆಸ್ನಾನಕ್ಕೆ ಹೊಸ ವಿಧಾನವನ್ನು ಕಂಡುಕೊಂಡಿದ್ದಾನೆ. ನೆಟ್ಟಿಗರು ಈ ವಿಡಿಯೋ ನೋಡಿ ಅಚ್ಚರಿಗೆ ಒಳಗಾಗಿದ್ದಾರೆ. ಬಡತನದಲ್ಲಿಯೇ ಪ್ರತಿಭೆ, ಅನ್ವೇಷಣೆ ಅರಳುತ್ತದೆ ಎಂದಿದ್ದಾರೆ.

ರೋಮಾ ಬಲ್ವಾನಿ ಎಂಬುವವರು ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಈ ವ್ಯಕ್ತಿ ಡ್ರಮ್​ ಅನ್ನು ಬೆನ್ನಿಗೆ ಕಟ್ಟಿಕೊಂಡಿದ್ದಾನೆ. ತಲೆಗೆ ಸಾಬೂನು ಹಚ್ಚಿಕೊಂಡು ಉಜ್ಜಿಕೊಂಡ ನಂತರ ತಾನೇ ಬೆನ್ನು ಎತ್ತಿ ಡ್ರಮ್​ನೊಳಗಿನ ನೀರನ್ನು ಬಾಗಿಸಿಕೊಳ್ಳುತ್ತಾನೆ.

ಈ ವಿಡಿಯೋ ಅನ್ನೂ ಈಗಾಗಲೇ 15,700 ಜನರು ನೋಡಿದ್ದಾರೆ. ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ವಾಹ್ ಇದು ಅದ್ಭುತವಾಗಿದೆ ಎಂದಿದ್ದಾರೆ ಹಲವರು. ಇನ್ನೂ ಕೆಲವರು ಸಾಕು ನಿಲ್ಲಿಸಿ, ಬಡತನವನ್ನು ಇನ್ನೂ ಹೀಗೆ ವಿಜೃಂಭಿಸುವುದನ್ನು ಎಂದಿದ್ದಾರೆ. ತಲೆ ತೊಳೆದುಕೊಂಡ ನೀರನ್ನು ಬುಟ್ಟಿಯಲ್ಲಿ ಯಾಕೆ ಸಂಗ್ರಹಿಸುತ್ತಿದ್ದಾನೆ ಈತ? ಆ ಸಾಬೂನು ನೀರನ್ನು ಮುಂದೇನು ಮಾಡುತ್ತಾನೆ ಎಂದು ಕೇಳಿದ್ದಾರೆ ಕೆಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್