AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೆಲಸದಲ್ಲಿನ ಪರಿಪೂರ್ಣತೆ ಬದಿಗಿರಿಸಿ ಮಾನಸಿಕ ಶಾಂತಿ ಕಂಡುಕೊಂಡ ಅಮೆಜಾನ್ ಉದ್ಯೋಗಿ

ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಬಹುತೇಕ ಉದ್ಯೋಗಿಗಳಿಗೆ ಕೆಲಸದ ಒತ್ತಡದಿಂದ ಮಾನಸಿಕ ನೆಮ್ಮದಿ ಇರಲ್ಲ. ಅಮೆಜಾನ್ ಉದ್ಯೋಗಿಯೊಬ್ಬರು ಮಾನಸಿಕ ನೆಮ್ಮದಿ ಕಾಯ್ದುಕೊಳ್ಳಲು ಕೆಲಸದಲ್ಲಿ ಪರಿಪೂರ್ಣತೆ ಬಯಸುವುದನ್ನು ನಿಲ್ಲಿಸಿದ್ದಾರೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದ್ದು ಕೆಲಸದ ಸ್ಥಳದಲ್ಲಿನ ಒತ್ತಡ ಎಷ್ಟಿದೆ ಎಂದು ಎತ್ತಿ ತೋರಿಸಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕೆಲಸದಲ್ಲಿನ ಪರಿಪೂರ್ಣತೆ ಬದಿಗಿರಿಸಿ ಮಾನಸಿಕ ಶಾಂತಿ ಕಂಡುಕೊಂಡ ಅಮೆಜಾನ್ ಉದ್ಯೋಗಿ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:Jun 23, 2026 | 3:32 PM

Share

ವೇಗದ ಜೀವನದಲ್ಲಿ ಸ್ಪರ್ಧೆಗಳೇ ಹೆಚ್ಚು. ಹೀಗಾಗಿ ಕೆಲಸ (job) ಯಾವುದಾದರೂ ಅದರಲ್ಲಿ ಒತ್ತಡ ಇದ್ದೇ ಇರುತ್ತೆ. ಒತ್ತಡವನ್ನು ನಿಭಾಯಿಸಿಕೊಂಡು ಜೀವನ ನಡೆಸುವುದು, ಮಾನಸಿಕ ನೆಮ್ಮದಿ ಕಾಯುವುದು ಒಂದು ಕಲೆ. ಹೈದರಾಬಾದ್‌ನ ಅಮೆಜಾನ್‌ನಲ್ಲಿ ( Amazon) ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು, ಬಹುತೇಕ ಉದ್ಯೋಗಿಗಳು ಎಲ್ಲಾ ಸಮಯದಲ್ಲೂ ಲಭ್ಯವಿದ್ದು ತಮ್ಮ ಮೌಲ್ಯವನ್ನು ಸಾಬೀತುಪಡಿಸಲು ಅನುಭವಿಸುವ ಒತ್ತಡದ ಬಗ್ಗೆ ಮಾತನಾಡಿದ್ದಾರೆ. ಕೆಲಸದ ಸ್ಥಳದಲ್ಲಿ ತನ್ನ ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಲು ಕೆಲವು ಅಭ್ಯಾಸಗಳನ್ನು ನಿಲ್ಲಿಸಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು ಈ ಉದ್ಯೋಗಿ ಕಂಡುಕೊಂಡ ಮಾರ್ಗವನ್ನು ಮೆಚ್ಚಿಕೊಂಡಿದ್ದಾರೆ.

ದೀಪಿಕಾ (deepika.not.padukone) ತಮ್ಮ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ಕ್ಲಿಪಿಂಗ್‌ನಲ್ಲಿ ಕೆಲಸದಲ್ಲಿ ನನ್ನ ಮಾನಸಿಕ ಶಾಂತಿಯನ್ನು ಕಾಪಾಡಲು ನಾನು ಮಾಡುವುದನ್ನು ನಿಲ್ಲಿಸಿದ ಕೆಲಸಗಳು ಎಂದು ಬರೆದುಕೊಂಡಿದ್ದಾರೆ. ನನ್ನ ಶಾಂತಿಯನ್ನು ರಕ್ಷಿಸುವುದು, ನನ್ನ ಮೌಲ್ಯವನ್ನು ಸಾಬೀತುಪಡಿಸುವುದು ಎಂದು ಶೀರ್ಷಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಈವಿಡಿಯೋದಲ್ಲಿ ಕೆಲಸದಲ್ಲಿ ಪರಿಪೂರ್ಣವಾಗಿರುವುದು ಎಂದರೆ ಎಲ್ಲದಕ್ಕೂ ಹೌದು ಎಂದು ಹೇಳುವುದು. 24/7 ಲಭ್ಯವಿರುವುದು ಎಂದು ನಾನು ಭಾವಿಸುತ್ತಿದ್ದೆ. ಈಗ, ನನ್ನ ವೃತ್ತಿಜೀವನಕ್ಕೆ ನಾನು ಮಾಡಬಹುದಾದ ಅತ್ಯುತ್ತಮ ಕೆಲಸವೆಂದರೆ ವಾಸ್ತವವಾಗಿ ಅಂಟಿಕೊಳ್ಳುವ ಗಡಿಗಳನ್ನು ಹೊಂದಿಸುವುದು ಎಂದು ನಾನು ಅರಿತುಕೊಂಡಿದ್ದೇನೆ. ಇನ್ನು ಮುಂದೆ ಯಾವುದೇ ಸಂದೇಶಕ್ಕೆ ತ್ವರಿತ ಉತ್ತರಗಳಿಲ್ಲ. ಪ್ರತಿ ಸಂದೇಶ ಬಂದ ತಕ್ಷಣ ಪ್ರತಿಕ್ರಿಯಿಸುವ ಒತ್ತಡವನ್ನು ನಾನು ಅನುಭವಿಸುವುದಿಲ್ಲ ಎಂದಿದ್ದಾರೆ.

ಇನ್ನಷ್ಟು ಕೆಲಸ ಸ್ವೀಕರಿಸುವ ಮೊದಲು ತನ್ನದೇ ಆದ ಬ್ಯಾಂಡ್‌ವಿಡ್ತ್ ಅನ್ನು ಪರಿಶೀಲಿಸಲು ಪ್ರಾರಂಭಿಸಿದ್ದೇನೆ. ಕೈ ತುಂಬಾ ಕೆಲಸವಿರುವಾಗ ನಾನು ಕೆಲಸಗಳಿಗೆ “ಹೌದು” ಎಂದು ಹೇಳುವುದನ್ನು ನಿಲ್ಲಿಸಿದ್ದೇನೆ. ಸಣ್ಣ ವಿಷಯಗಳಿಗೆ ತನ್ನನ್ನು ತಾನು ವಿವರಿಸಿಕೊಳ್ಳುವುದನ್ನು ನಿಲ್ಲಿಸಿದ್ದೇನೆ. ಮೌನ ಕೆಲವೊಮ್ಮೆ ಸ್ವೀಕಾರಾರ್ಹ ಎಂದು ಕಲಿತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಕೆಲಸದ ದಿನ ಮುಗಿದ ನಂತರ, ದೈಹಿಕವಾಗಿ ಮತ್ತು ಮಾನಸಿಕವಾಗಿ ಲಾಗ್ ಔಟ್ ಆಗಲು ಪ್ರಜ್ಞಾಪೂರ್ವಕ ಪ್ರಯತ್ನ ಮಾಡುತ್ತೇನೆ. ತಮ್ಮ ವೃತ್ತಿಜೀವನದ ಪ್ರಯಾಣವನ್ನು ಇತರರೊಂದಿಗೆ ಹೋಲಿಸುವುದನ್ನು ನಿಲ್ಲಿಸಿದ್ದೇನೆ. ಸೂಚನೆಗಳನ್ನು ಊಹಿಸಿ ಅವುಗಳ ಮೇಲೆ ಒತ್ತಡ ಹೇರುವ ಬದಲು ಸ್ಪಷ್ಟತೆ ಕೇಳಲು ತಾನು ಇಷ್ಟಪಡುತ್ತೇನೆ. ನನ್ನ ವಿವೇಕವನ್ನು ಹಾಗೆಯೇ ಇಟ್ಟುಕೊಳ್ಳುವುದರ ಜೊತೆಗೆ ಉತ್ತಮವಾಗಿ ಇರಲು ಈ ಪ್ರಯತ್ನಗಳು ಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ನೀಡಿದ್ರೂ ಕಂಪನಿ ಕೆಲಸದ ಕೊನೆಯ ದಿನವನ್ನು ದೃಢಪಡಿಸಿಲ್ಲ; ನೆಟ್ಟಿಗರಲ್ಲಿ ಸಲಹೆ ಕೇಳಿದ ಉದ್ಯೋಗಿ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಾನು ನಿಮ್ಮ ಮಾತನ್ನು ಒಪ್ಪುತ್ತೇನೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇದು ತುಂಬಾ ಯೋಚನೆ ಮಾಡುವ ವಿಷಯವಾಗಿದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ಮಾನಸಿಕ ಶಾಂತಿ ಒಪ್ಪಲು ಈ ಬದಲಾವಣೆಗಳು ಅಗತ್ಯ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Tue, 23 June 26

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್