AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಅಮೆರಿಕದಲ್ಲೂ ಮಂಗಳೂರಿನ ಯಕ್ಷಗಾನದ ರಂಗು, ವೈರಲ್‌ ಆಯ್ತು ವಿಡಿಯೋ

ಯಕ್ಷಗಾನ ಕರಾವಳಿಯ ಗಂಡು ಕಲೆ. ಈ ಕಲೆಯ ಕಂಪು ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲೂ ಪಸರಿಸಿದೆ. ಹೌದು ವಿವಿಧ ಮೇಳಗಳು ದುಬೈ, ಕತಾರ್‌ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಯಕ್ಷಗಾನದ ಕಲೆಯನ್ನು ಪ್ರದರ್ಶಿಸಿವೆ. ಇದೀಗ ಈ ಕಲೆಯ ರಂಗು ದೂರದ ಅಮೇರಿಕಾದಲ್ಲೂ ಪಸರಿಸಿದ್ದು, ಈ ಕುರಿತ ಸುಂದರ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

Viral: ಅಮೆರಿಕದಲ್ಲೂ ಮಂಗಳೂರಿನ ಯಕ್ಷಗಾನದ ರಂಗು, ವೈರಲ್‌ ಆಯ್ತು ವಿಡಿಯೋ
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 26, 2024 | 5:15 PM

ಯಕ್ಷಗಾನದ ಜನಪ್ರಿಯತೆ ಬಗ್ಗೆ ನಿಮಗೆಲ್ಲಾ ಗೊತ್ತೇ ಇದೆ. ಕರಾವಳಿಯ ಗಂಡು ಕಲೆ ಎಂದೇ ಪ್ರಸಿದ್ಧವಾಗಿರುವ ಯಕ್ಷಗಾನ ದೇಶ ಮಾತ್ರವಲ್ಲದೇ ವಿದೇಶದಲ್ಲೂ ಖ್ಯಾತಿ ಪಡೆದಿದೆ. ದಕ್ಷಿಣ ಕನ್ನಡ, ಉಡುಪಿ ಮಲೆನಾಡಿನ ಕಡೆ ಯಕ್ಷಗಾನ ಬಯಲಾಟಗಳು ನಡೆಯುತ್ತಲೇ ಇರುತ್ತವೆ. ಇದೀಗ ದೂರದ ಅಮೆರಿಕದಲ್ಲೂ ಯಕ್ಷಗಾನದ ಕಂಪು ಪಸರಿಸಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಕೆಲ ದಿನಗಳ ಹಿಂದೆ ಅಮೆರಿಕದಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಸರಕಾರಿ ಕಾರ್ಯಕ್ರಮದ ಪರೇಡ್‌ನಲ್ಲಿ ಯಕ್ಷಗಾನ ಕಲೆಯನ್ನು ಪ್ರದರ್ಶಿಸಲಾಯಿತು. ಪರೇಡ್‌ನಲ್ಲಿ ಯಕ್ಷಗಾನ ಕಲಾವಿದರು ಪಟ್ಲ ಸತೀಶ್‌ ಶೆಟ್ಟಿ ಕಂಠದಲ್ಲಿ ಮೂಡಿಬಂದ ಅದ್ಭುತ ಭಾಗವತಿಕೆಗೆ ಹೆಜ್ಜೆ ಹಾಕಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ

ಈ ಕುರಿತ ವಿಡಿಯೋವನ್ನು ಯಕ್ಷಧ್ರುವ ಪಟ್ಲ ಸತೀಶ್‌ ಶೆಟ್ಟಿಯವರ ಅಭಿಮಾನಿ ಹೆಸರಿನ ಫೇಸ್‌ಬುಕ್‌ ಪೇಜ್‌ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, ಅಮೆರಿಕದ ಬೀದಿ ಬೀದಿಯೂ ಯಕ್ಷಗಾನಮಯ, ಪಟ್ಲಮಯ; ಸ್ವಾತಂತ್ರ್ಯೋತ್ಸವದ ಸರ್ಕಾರಿ ಕಾರ್ಯಕ್ರಮದ ಪರೇಡ್‌ನಲ್ಲಿ ವಿಜೃಂಭಿಸಿದ ನಮ್ಮ ಹೆಮ್ಮೆಯ ಕಲೆ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಪರೇಡ್‌ನಲ್ಲಿ ಭಾಗವಸಿದ್ದ ಯಕ್ಷಗಾನ ಕಲಾವಿದರು ಪಟ್ಲ ಸತೀಶ್‌ ಶೆಟ್ಟಿ ಕಂಠದಲ್ಲಿ ಮೂಡಿಬಂದ ಅದ್ಭುತ ಭಾಗವತಿಕೆಗೆ ಹೆಜ್ಜೆ ಹಾಕುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಭಾಂಗ್‌ ಲಸ್ಸಿ ತಂದ ಎಡವಟ್ಟು, ಭಾಂಗ್‌ ಸೇವಿಸಿ ಆಸ್ಪತ್ರೆ ಸೇರಿದ ಬ್ರಿಟಿಷ್‌ ಇನ್‌ಫ್ಲುಯೆನ್ಸರ್‌

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆಹಾ… ಎಂತಹ ಅದ್ಭುತ ಕಂಠಸಿರಿʼ ಎಂದು ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼತುಂಬಾನೇ ಚೆಂದವಾಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ