AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಅಳುವ ಸೆಲ್ಫಿ ಹಾಕಿದ ಸಿಇಒ, ಮೊಸಳೆ ಕಣ್ಣೀರೆಂದು ಟೀಕಿಸಿದ ನೆಟ್ಟಿಗರು

Selfie : ತನ್ನ ಕಂಪೆನಿಯ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದ ನಂತರ ಲಿಂಕ್​ಡಿನ್​ನಲ್ಲಿ ಅಳುತ್ತಿರುವ ಸೆಲ್ಫಿ ಹಾಕಿರುವ ಸಿಇಒ

Trending : ಅಳುವ ಸೆಲ್ಫಿ ಹಾಕಿದ ಸಿಇಒ, ಮೊಸಳೆ ಕಣ್ಣೀರೆಂದು ಟೀಕಿಸಿದ ನೆಟ್ಟಿಗರು
ಹೈಪರ್​ಸ್ಪೇಸ್​ ಕಂಪೆನಿಯ ಸಿಇಒ ಬ್ರಾಡೆನ್ ವಾಲೆಕ್
TV9 Web
| Updated By: ಶ್ರೀದೇವಿ ಕಳಸದ|

Updated on: Aug 11, 2022 | 2:58 PM

Share

Trending News : ತನ್ನ ಕಂಪೆನಿಯ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದ ನಂತರ ಸಿಇಒ ಅಳುತ್ತಿರುವ ತಮ್ಮ ಸೆಲ್ಫಿ ಹಂಚಿಕೊಂಡಿರುವ ಪೋಸ್ಟ್​ ಈಗ ವೈರಲ್ ಆಗಿದೆ. ಅಮೆರಿಕದ ಓಹಿಯೋ ಮೂಲದ ಹೈಪರ್‌ಸ್ಪೇಸ್‌ನ ಕಂಪೆನಿಯ ಸಿಇಒ ಬ್ರಾಡೆನ್ ವಾಲೇಕ್​ ಅವರ ಈ ಪೋಸ್ಟ್​ ಕುರಿತು ನೆಟ್ಟಿಗರು ಸಾಕಷ್ಟು ಚರ್ಚೆ ಮಾಡಿದ್ದಾರೆ. ಅಳುತ್ತಿರುವ ಸೆಲ್ಫಿ ಹಾಕಿದ್ದಕ್ಕೆ ನಿಂದಿಸಿ, ಟೀಕಿಸಿದ್ಧಾರೆ. ಕಂಪೆನಿಗಳು ಇತ್ತೀಚೆಗೆ ಹುಟ್ಟುಹಾಕುತ್ತಿರುವ ಕೆಲಸದ ಸಂಸ್ಕೃತಿಯ ಬಗ್ಗೆ ಅನೇಕರು ಚರ್ಚಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ರಾಡೆನ್​ ಲಿಂಕ್​ಡಿನ್​ನಲ್ಲಿ ಹಂಚಿಕೊಂಡ ಈ ಪೋಸ್ಟ್​ 23, 000ಕ್ಕೂ ಹೆಚ್ಚು ಲೈಕ್ಸ್​ ಮತ್ತು 6,000ಕ್ಕೂ ಹೆಚ್ಚು ಪ್ರತಿಕ್ರಿಯೆಯನ್ನು ಹೊಂದಿದೆ.

ಬ್ರಾಡೆನ್​ ಅವರ ಪೋಸ್ಟಿಗೆ ಮೊಸಳೆ ಕಣ್ಣೀರು ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ. ‘ಜನರು ಇದನ್ನು ನೋಡಲೆಂದೇ ಲಿಂಕ್​ಡಿನ್​ನಲ್ಲಿ ಹಂಚಿಕೊಂಡಿದ್ದೇನೆ. ಇಲ್ಲಿರುವ ಸಾವಿರಾರು ಸಿಇಒಗಳೆಲ್ಲರೂ ನಿರ್ದಯಿಯಾಗಿರುವುದಿಲ್ಲ. ನನ್ನಂತೆ ಯೋಚಿಸುವವರೂ ಇಲ್ಲಿರುತ್ತಾರೆ. ಸಾಮಾನ್ಯವಾಗಿ ವಜಾಗೊಳಿಸುವುದಾದರೆ ಒಬ್ಬರು, ಇಬ್ಬರು ಬಹಳವೆಂದರೆ ಮೂರು ಜನರನ್ನು ವಜಾಗೊಳಿಸಲಾಗುತ್ತದೆ. ಎಂದೂ 50ರಿಂದ 500, 5000 ವರೆಗೆ ವಜಾಗೊಳಿಸಲಾಗದು. ನನ್ನ ಉದ್ಯೋಗಿಗಳೆಲ್ಲರಿಗೂ ಗೊತ್ತಿದೆ ನಾನು ಅವರನ್ನು ಎಷ್ಟು ಪ್ರೀತಿಸುತ್ತಿದ್ದೆ ಎನ್ನುವುದು’ ಎಂದು ಬ್ರಾಡೆನ್ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ಉದ್ಯೋಗದ ಬಗ್ಗೆ ಕಂಪೆನಿಗಳಲ್ಲಿ ಉಂಟಾಗುತ್ತಿರುವ ಅನಿಶ್ಚಿತೆ ಮತ್ತು ಕಂಪೆನಿಗಳ ಕಾರ್ಯನಿರ್ವಹಣೆಯ ಬಗೆಗಿನ ವೈಫಲ್ಯಗಳ ಬಗ್ಗೆ ಅನೇಕರು ತಮ್ಮ ಅಭಿಪ್ರಾಯ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಕೆಲವರಂತೂ  ವಾಲೆಕ್​ರನ್ನು​ ನಾರ್ಸಿಸಿಸ್ಟ್ ಎಂದೂ ಟೀಕಿಸಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಇನ್ನಷ್ಟು ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ