AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ‘ಕ್ರಿಯಾಶೀಲ ಉದ್ಯಮಿ’ ಸೈರಸ್​ ಮಿಸ್ತ್ರಿ ಅವರಿಗೆ ‘ಅಮುಲ್​‘ ಗೌರವ

Amul : ಇತ್ತೀಚೆಗೆ ಕಾರು ಅಪಘಾತದಲ್ಲಿ ನಿಧನ ಹೊಂದಿದ ಪಾಂಡೋಲ್​ ಮಿಸ್ತ್ರಿ ಅವರ ಕಿರಿಯ ಪುತ್ರ ಮತ್ತು ಟಾಟಾ ಸಮೂಹ ಸಂಸ್ಥೆಯ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಗೌರವ ಸಲ್ಲಿಸಿದೆ ಅಮೂಲ್ ಸಂಸ್ಥೆ.

Trending : ‘ಕ್ರಿಯಾಶೀಲ ಉದ್ಯಮಿ’ ಸೈರಸ್​ ಮಿಸ್ತ್ರಿ ಅವರಿಗೆ ‘ಅಮುಲ್​‘ ಗೌರವ
ಕಪ್ಪು ಬಿಳುಪು ಡೂಡಲ್ ಮೂಲಕ ಗೌರವ ಸಲ್ಲಿಸಿದ ‘ಅಮುಲ್’
TV9 Web
| Edited By: |

Updated on:Sep 06, 2022 | 2:53 PM

Share

Amul : ಟಾಟಾ ಗ್ರೂಪ್​ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರ ಹಠಾತ್ ಸಾವು ಎಲ್ಲರಿಗೂ ಆಘಾತವನ್ನುಂಟು ಮಾಡಿದೆ. ಸೆಪ್ಟೆಂಬರ್ 4 ರಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಅವರ ಮರ್ಸಿಡಿಸ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದರು. ಈ ಪ್ರಯುಕ್ತ ‘ಅಮುಲ್’ ಕಂಪೆನಿಯು ಸೋಮವಾರದಂದು ಸಾಮಾಜಿಕ ಜಾಲತಾಣದಲ್ಲಿ ಮಿಸ್ತ್ರಿಯವರಿಗೆ ಗೌರವವನ್ನು ಅರ್ಪಿಸಿದೆ. ಕಪ್ಪುಬಿಳುಪಿನ ಡೂಡಲ್ ಅನ್ನು ಅಮುಲ್​ ಇಂಡಿಯಾ ಹಂಚಿಕೊಂಡಿದೆ. ‘ಅವರು ಇನ್ನೂ ಮೈಲುಗಳಷ್ಟು ದೂರ ಪ್ರಯಾಣಿಸಬೇಕಿತ್ತು, 1968-2022’ ಎಂಬ ಶಿರ್ಷಿಕೆಯೊಂದಿಗೆ ಈ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಲಭ್ಯವಿದೆ.

ಮಿಸ್ತ್ರಿ ಅವರ ಜೊತೆಗೆ ಜಹಾಂಗೀರ್ ಪಾಂಡೋಲ್, ಅನಾಹಿತಾ ಪಾಂಡೋಲ್ ಮತ್ತು ಡೇರಿಯಸ್ ಪಾಂಡೋಲ್ ಆ ದಿನ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಡೇರಿಯಸ್​ ಅವರ ಸಹೋದರ ಜಹಾಂಗೀರ್​ ಈ ಅಪಘಾತದಲ್ಲಿ ಸಾವನ್ನಪ್ಪಿದ ಇನ್ನೋರ್ವ ವ್ಯಕ್ತಿ. ಡೇರಿಯಸ್ ಪಾಂಡೋಲ್ ಟಾಟಾ ಸಮೂಹ ಸಂಸ್ಥೆಗಳಲ್ಲಿ ನಿರ್ದೇಶಕರಾಗಿದ್ದರು ಮತ್ತು ಮಿಸ್ತ್ರಿ ಅವರನ್ನು ಕಂಪನಿಯ ಅಧ್ಯಕ್ಷ ಸ್ಥಾನದಿಂದ ತೆರವುಗೊಳಿಸುವ ವಿಷಯಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಮಿಸ್ತ್ರಿ ಟಾಟಾ ಸಮೂಹ ತೊರೆದಾಗ ಡೇರಿಯಸ್ ಕೂಡ ಅವರೊಂದಿಗೆ ಅಲ್ಲಿಂದ ನಿರ್ಗಮಿಸಿದರು.

ಅನಾಹಿತಾ, ಡೇರಿಯಸ್ ಅವರ ಪತ್ನಿ. ಮುಂಬೈನ ಖ್ಯಾತ ಸ್ತ್ರೀರೋಗ ತಜ್ಞೆ. ಅವರೇ ಕಾರು ಚಲಾಯಿಸುತ್ತಿದ್ದರು. ಈ ಸ್ಥಳದಲ್ಲಿದ್ದ ಎಲ್ಲಾ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಹಿಡಿಯಲಾದ ದೃಶ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ ಮತ್ತು ವಿಶ್ಲೇಷಿಸುತ್ತಿದ್ದಾರೆ. ಕಾರಿನಲ್ಲಿ ಯಾವುದೇ ಯಾಂತ್ರಿಕ ದೋಷಗಳಿವೆಯೇ ಎಂದೂ ತನಿಖೆ ನಡೆಸುತ್ತಿದ್ದಾರೆ.  ವಾಹನದಲ್ಲಿ ಅಳವಡಿಸುವ ಚಿಪ್​ ಅನ್ನು ವಶಕ್ಕೆ ಪಡೆದುಕೊಂಡು ಅದರೊಳಗಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:01 pm, Tue, 6 September 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್