AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ‘ಕ್ರಿಯಾಶೀಲ ಉದ್ಯಮಿ’ ಸೈರಸ್​ ಮಿಸ್ತ್ರಿ ಅವರಿಗೆ ‘ಅಮುಲ್​‘ ಗೌರವ

Amul : ಇತ್ತೀಚೆಗೆ ಕಾರು ಅಪಘಾತದಲ್ಲಿ ನಿಧನ ಹೊಂದಿದ ಪಾಂಡೋಲ್​ ಮಿಸ್ತ್ರಿ ಅವರ ಕಿರಿಯ ಪುತ್ರ ಮತ್ತು ಟಾಟಾ ಸಮೂಹ ಸಂಸ್ಥೆಯ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಗೌರವ ಸಲ್ಲಿಸಿದೆ ಅಮೂಲ್ ಸಂಸ್ಥೆ.

Trending : ‘ಕ್ರಿಯಾಶೀಲ ಉದ್ಯಮಿ’ ಸೈರಸ್​ ಮಿಸ್ತ್ರಿ ಅವರಿಗೆ ‘ಅಮುಲ್​‘ ಗೌರವ
ಕಪ್ಪು ಬಿಳುಪು ಡೂಡಲ್ ಮೂಲಕ ಗೌರವ ಸಲ್ಲಿಸಿದ ‘ಅಮುಲ್’
TV9 Web
| Updated By: ಶ್ರೀದೇವಿ ಕಳಸದ|

Updated on:Sep 06, 2022 | 2:53 PM

Share

Amul : ಟಾಟಾ ಗ್ರೂಪ್​ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರ ಹಠಾತ್ ಸಾವು ಎಲ್ಲರಿಗೂ ಆಘಾತವನ್ನುಂಟು ಮಾಡಿದೆ. ಸೆಪ್ಟೆಂಬರ್ 4 ರಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಅವರ ಮರ್ಸಿಡಿಸ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದರು. ಈ ಪ್ರಯುಕ್ತ ‘ಅಮುಲ್’ ಕಂಪೆನಿಯು ಸೋಮವಾರದಂದು ಸಾಮಾಜಿಕ ಜಾಲತಾಣದಲ್ಲಿ ಮಿಸ್ತ್ರಿಯವರಿಗೆ ಗೌರವವನ್ನು ಅರ್ಪಿಸಿದೆ. ಕಪ್ಪುಬಿಳುಪಿನ ಡೂಡಲ್ ಅನ್ನು ಅಮುಲ್​ ಇಂಡಿಯಾ ಹಂಚಿಕೊಂಡಿದೆ. ‘ಅವರು ಇನ್ನೂ ಮೈಲುಗಳಷ್ಟು ದೂರ ಪ್ರಯಾಣಿಸಬೇಕಿತ್ತು, 1968-2022’ ಎಂಬ ಶಿರ್ಷಿಕೆಯೊಂದಿಗೆ ಈ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಲಭ್ಯವಿದೆ.

ಮಿಸ್ತ್ರಿ ಅವರ ಜೊತೆಗೆ ಜಹಾಂಗೀರ್ ಪಾಂಡೋಲ್, ಅನಾಹಿತಾ ಪಾಂಡೋಲ್ ಮತ್ತು ಡೇರಿಯಸ್ ಪಾಂಡೋಲ್ ಆ ದಿನ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಡೇರಿಯಸ್​ ಅವರ ಸಹೋದರ ಜಹಾಂಗೀರ್​ ಈ ಅಪಘಾತದಲ್ಲಿ ಸಾವನ್ನಪ್ಪಿದ ಇನ್ನೋರ್ವ ವ್ಯಕ್ತಿ. ಡೇರಿಯಸ್ ಪಾಂಡೋಲ್ ಟಾಟಾ ಸಮೂಹ ಸಂಸ್ಥೆಗಳಲ್ಲಿ ನಿರ್ದೇಶಕರಾಗಿದ್ದರು ಮತ್ತು ಮಿಸ್ತ್ರಿ ಅವರನ್ನು ಕಂಪನಿಯ ಅಧ್ಯಕ್ಷ ಸ್ಥಾನದಿಂದ ತೆರವುಗೊಳಿಸುವ ವಿಷಯಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಮಿಸ್ತ್ರಿ ಟಾಟಾ ಸಮೂಹ ತೊರೆದಾಗ ಡೇರಿಯಸ್ ಕೂಡ ಅವರೊಂದಿಗೆ ಅಲ್ಲಿಂದ ನಿರ್ಗಮಿಸಿದರು.

ಅನಾಹಿತಾ, ಡೇರಿಯಸ್ ಅವರ ಪತ್ನಿ. ಮುಂಬೈನ ಖ್ಯಾತ ಸ್ತ್ರೀರೋಗ ತಜ್ಞೆ. ಅವರೇ ಕಾರು ಚಲಾಯಿಸುತ್ತಿದ್ದರು. ಈ ಸ್ಥಳದಲ್ಲಿದ್ದ ಎಲ್ಲಾ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಹಿಡಿಯಲಾದ ದೃಶ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ ಮತ್ತು ವಿಶ್ಲೇಷಿಸುತ್ತಿದ್ದಾರೆ. ಕಾರಿನಲ್ಲಿ ಯಾವುದೇ ಯಾಂತ್ರಿಕ ದೋಷಗಳಿವೆಯೇ ಎಂದೂ ತನಿಖೆ ನಡೆಸುತ್ತಿದ್ದಾರೆ.  ವಾಹನದಲ್ಲಿ ಅಳವಡಿಸುವ ಚಿಪ್​ ಅನ್ನು ವಶಕ್ಕೆ ಪಡೆದುಕೊಂಡು ಅದರೊಳಗಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:01 pm, Tue, 6 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?