AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರೂಪಾಯಿಗೆ 50 ಕಿ.ಮಿ ಮೈಲೇಜ್ ನೀಡುತ್ತೆ ಈ ಎಲೆಕ್ಟ್ರಿಕ್ ಬೈಕ್, 8ನೇ ತರಗತಿ ವಿದ್ಯಾರ್ಥಿಯ ಹೊಸ ಆವಿಷ್ಕಾರ

ವಾಹನಗಳಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ಮಾಡುತ್ತಾ ನೋಡುಗರ ಹುಬ್ಬೇರಿಸುವಂತೆ ಮಾಡುವುದು ಹೊಸದೇನಲ್ಲ. ಈಗಾಗಲೇ ಇಂತಹ ಪ್ರಯತ್ನಗಳನ್ನು ಸಾಕಷ್ಟು ಜನರು ಮಾಡಿದ್ದು ಭೇಷ್ ಎನಿಸಿಕೊಂಡಿದ್ದಾರೆ. ಇಂತಹ ಸಾಕಷ್ಟು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ಬಿಹಾರದ 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಸ್ಕ್ರ್ಯಾಪ್‌ಗಳನ್ನು ಬಳಸಿ ಎಲೆಕ್ಟ್ರಿಕ್ ಬೈಕನ್ನು ತಯಾರಿಸಿದ್ದು ನೆಟ್ಟಿಗರ ಹುಬ್ಬೇರಿಸುವಂತೆ ಮಾಡಿದೆ.

5 ರೂಪಾಯಿಗೆ 50 ಕಿ.ಮಿ ಮೈಲೇಜ್ ನೀಡುತ್ತೆ ಈ ಎಲೆಕ್ಟ್ರಿಕ್ ಬೈಕ್, 8ನೇ ತರಗತಿ ವಿದ್ಯಾರ್ಥಿಯ ಹೊಸ ಆವಿಷ್ಕಾರ
ವೈರಲ್​ ವಿಡಿಯೋ
ಸಾಯಿನಂದಾ
| Edited By: |

Updated on: Dec 28, 2024 | 12:28 PM

Share

ನಮ್ಮ ದೇಶದಲ್ಲಿ ಪ್ರತಿಭೆಗಳಿಗೆ ಯಾವ ಕೊರತೆಯಿಲ್ಲ. ಹೀಗಾಗಿ ತಮ್ಮ ಕಲ್ಪನೆಗೆ ಹೊಸ ರೆಕ್ಕೆಯನ್ನು ಕಟ್ಟಿ ತಮ್ಮ ನೆಚ್ಚಿನ ವಾಹನಗಳ ಹೊಸ ಲುಕ್ ನೀಡುವುದನ್ನು ನೋಡಿರಬಹುದು. ಅಷ್ಟೇ ಅಲ್ಲದೇ, ಮನೆಯಲ್ಲಿ ಕೆಟ್ಟು ಹೋದ ವಸ್ತುಗಳಿಂದ ಕಡಿಮೆ ಖರ್ಚಿನಲ್ಲಿ ಹೊಸ ಬಗೆಯ ವಸ್ತುಗಳನ್ನು ತಯಾರಿಸುವಂತಹ ಸಣ್ಣ ಪುಟ್ಟ ಆವಿಷ್ಕಾರಗಳ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತದೆ. ಇದೀಗ ವಿದ್ಯಾರ್ಥಿಯೊಬ್ಬನು ಸ್ಕ್ರ್ಯಾಪ್‌ಗಳನ್ನು ಬಳಸಿ ಎಲೆಕ್ಟ್ರಿಕ್ ಬೈಕನ್ನು ತಯಾರಿಸಿದ್ದು, ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು ಗೇಮ್ಸ್ ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ‘ಬಿಹಾರದ 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಸ್ಕ್ರ್ಯಾಪ್‌ಗಳನ್ನು ಬಳಸಿ ಎಲೆಕ್ಟ್ರಿಕ್ ಬೈಕ್ ಅನ್ನು ನಿರ್ಮಿಸಿದ್ದು, ಈ ಬೈಕ್ ಕೇವಲ ₹5 ವೆಚ್ಚದಲ್ಲಿ 50 ಕಿ.ಮೀ ಪ್ರಯಾಣಿಸುವ ಸಾಮರ್ಥ್ಯ ಹೊಂದಿದೆ’ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಕಂಡಿದೆ. ಈ ಬೈಕ್‌ ಬಹಳಷ್ಟು ಫೀಚರ್ಸ್ ಸೆಕ್ಯೂರಿಟಿ ಸೈರನ್ ಹೊಂದಿದೆ. ಮಾಲಿನ್ಯ ರಹಿತವಾಗಿರುವುದು ವಿಶೇಷ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಭಾರತೀಯ ಸೇನೆಯ ವಿಮಾನದಿಂದ ಸ್ಫೂರ್ತಿ ಪಡೆದು ಈ ಬೈಕ್ ತಯಾರಿಸಲಾಗಿದೆ. ಎಲೆಕ್ಟ್ರಿಕ್ಸ್ ಎಂದು ವಿದ್ಯಾರ್ಥಿ ತೇಜಸ್ ಹೆಸರಿಟ್ಟಿದ್ದು, ಈ ವಿಡಿಯೋಗೆ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ. ಈ ವಿಡಿಯೋ ಬಳಕೆದಾರರೊಬ್ಬರು, ಈ ವಿದ್ಯಾರ್ಥಿಯ ಈ ಆವಿಷ್ಕಾರವು ನಿಜಕ್ಕೂ ಅದ್ಭುತವಾಗಿದೆ ಎಂದಿದ್ದಾರೆ. ಮತ್ತೊಬ್ಬರು, ಸೂಪರ್ ಎಂದು ಕಾಮೆಂಟ್ ಮಾಡಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಙಷ್ಟನೆ: ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಙಷ್ಟನೆ: ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ
ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ಧೂರಿ ಸಂಭ್ರಮ
ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ಧೂರಿ ಸಂಭ್ರಮ
ಟಿ ನರಸೀಪುರದಲ್ಲಿ ಪ್ರತಿಭಟನೆ ವೇಳೆ ಬಿಜೆಪಿ ಅಸಮಾಧಾನ ಸ್ಫೋಟ!
ಟಿ ನರಸೀಪುರದಲ್ಲಿ ಪ್ರತಿಭಟನೆ ವೇಳೆ ಬಿಜೆಪಿ ಅಸಮಾಧಾನ ಸ್ಫೋಟ!
ಮೈಸೂರಿನಲ್ಲಿ ಸಿದ್ದರಾಮಯ್ಯ ನೂತನ ಗೃಹಪ್ರವೇಶ: ಹೋಮ-ಹವನ, ಪೂಜೆ
ಮೈಸೂರಿನಲ್ಲಿ ಸಿದ್ದರಾಮಯ್ಯ ನೂತನ ಗೃಹಪ್ರವೇಶ: ಹೋಮ-ಹವನ, ಪೂಜೆ