AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನ ಗಂಡನ ಸಂತೋಷಕ್ಕಾಗಿ ಹೆಂಡತಿಯ ಭರ್ಜರಿ ಆಫರ್​​

ತನ್ನ ಪತಿಗೆ ಪ್ರತೀ ಕ್ಷಣ ಸಂತೋಷ ನೀಡುವುದು ತನ್ನ ಆದ್ಯ ಕರ್ತವ್ಯ. ಆದ್ದರಿಂದ ತನಗೆ ಬಿಡುವಿಲ್ಲದ ಸಮಯದಲ್ಲಿ ತನ್ನ ಗಂಡನಿಗೆ ಬೇರೆ ಮಹಿಳೆಯೊಂದಿಗೆ ಸಂತೋಷವಾಗಿ ಸಮಯ ಕಳೆಯಲು ನಾನು ಅವಕಾಶ ನೀಡಿದ್ದೇನೆ ಎಂದು ಅಮೆರಿಕಾದ ಮಹಿಳೆಯೊಬ್ಬಳು ಬಹಿರಂಗವಾಗಿ ಹೇಳಿಕೊಂಡಿದ್ದಾಳೆ.

Viral News: ತನ್ನ ಗಂಡನ ಸಂತೋಷಕ್ಕಾಗಿ ಹೆಂಡತಿಯ ಭರ್ಜರಿ ಆಫರ್​​
ತನ್ನ ಗಂಡನಿಗೆ ಬೇರೆ ಮಹಿಳೆಯೊಂದಿಗೆ ಸಮಯ ಕಳೆಯಲು ನಾನು ಅವಕಾಶ ನೀಡಿದ ಪತ್ನಿ
Follow us
ಅಕ್ಷತಾ ವರ್ಕಾಡಿ
|

Updated on:Mar 28, 2023 | 1:06 PM

ಹೆಂಡತಿಗೆ ನನ್ನ ಮೇಲೆ ಯಾವಾಗಲೂ ಅನುಮಾನ. ಬೇರೆ ಯಾವ ಮಹಿಳೆಯೊಂದಿಗೆ ಮಾತನಾಡಿದರೂ ಕೂಡ ಆ ದಿನ ಮನೆ ರಣರಂಗವಾಗಿ ಬಿಡುತ್ತದೆ ಎಂದು ಹೆದರುವ ಪುರುಷರೇ ಹೆಚ್ಚು. ಯಾಕೆಂದರೆ ಒಂದು ಹೆಣ್ಣಿಗೆ ತನ್ನ ಪತಿ ತನಗೆ ಮಾತ್ರ ಸೀಮಿತ, ಆದ್ದರಿಂದ ಆಕೆಯ ಅತಿಯಾದ ಪ್ರೀತಿ ಕೆಲವೊಮ್ಮೆ ಅಸೂಯೆ ಹಾಗೂ ಅನುಮಾನವನ್ನುಂಟು ಮಾಡುತ್ತದೆ. ಆದರೆ ಅಮೇರಿಕಾದ ಮೋನಿಕಾ ಹಲ್ಟ್ ಎಂಬ ಮಹಿಳೆ ತನ್ನ ಪತಿಯನ್ನು ಪ್ರತೀ ದಿನ ಸಂತೋಷವಾಗಿಟ್ಟುಕೊಳ್ಳಲು ತಾನು ಬ್ಯೂಸಿಯಾಗಿರುವ ಸಮಯದಲ್ಲಿ ಬೇರೆ ಮಹಿಳೆಯರೊಂದಿಗೆ ಮಲಗಲು ಅವಕಾಶ ನೀಡಿದ್ದಾಳೆ. ತನ್ನ ಪತಿಯನ್ನು ಸಂತೋಷಪಡಿಸುವುದು ತನ್ನ ಕರ್ತವ್ಯ ಎಂದು ನಂಬುತ್ತಾಳೆ ಈಕೆ. ತನಗೆ ಬಿಡುವಿಲ್ಲದ ಕಾರಣ ಇತರ ಮಹಿಳೆಯರೊಂದಿಗೆ ಸಂಬಂಧ ಹೊಂದಲು ಕಳುಹಿಸಿದ ನಂತರ ಅವಳು ತನ್ನ ಪತಿಗೆ ಬೇಕಾಗುವಂತಹ ಅಡುಗೆ ಮಾಡಿ, ಮನೆಯನ್ನು ಸ್ವಚ್ಛಗೊಳಿಸುತ್ತಾಳೆ.

ಅಮೆರಿಕಾದ ಸುದ್ದಿ ಸಂಸ್ಥೆಯಾದ ನ್ಯೂಯಾರ್ಕ್ ಪೋಸ್ಟ್‌ನ ಸಂದರ್ಶನವೊಂದರಲ್ಲಿ, ತನ್ನ ಪತಿ ಜಾನ್ ಅವರನ್ನು ಸಂತೋಷಪಡಿಸುವುದು ಹೆಂಡತಿಯಾಗಿ ತನ್ನ ಪ್ರಾಥಮಿಕ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ. ತನ್ನ ಪತಿಗೆ ಇತರ ಮಹಿಳೆಯರೊಂದಿಗೆ ಮಲಗಲು ಅವಕಾಶ ನೀಡುವುದು ನಮ್ಮ ಸಂಬಂಧಕ್ಕೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ ಎಂದು ಆಕೆ ಹೇಳಿದ್ದಾಳೆ.

ಇದನ್ನೂ ಓದಿ: 76% ಅಂಗವೈಕಲ್ಯ ಹೊಂದಿರುವ ವ್ಯಕ್ತಿ ಮ್ಯಾರಾಥಾನ್ ಪೂರ್ಣಗೊಳಿಸಿದ್ದಾರೆ; ಇದು ವಿಶ್ವದಲ್ಲೇ ಮೊದಲು!

ತಾನು ಗೃಹಿಣಿಯಾಗಿದ್ದು, ತನ್ನ ಮನೆಯ ಜವಾಬ್ದಾರಿಯನ್ನು ಜೊತೆಗೆ ಅಡುಗೆ ಮತ್ತು ಮನೆಕೆಲಸಗಳನ್ನು ನೋಡಿಕೊಳ್ಳುವಾಗ ತನ್ನ ಪತಿಯೊಂದಿಗೆ ಸಮಯ ಕಳೆಯಲು ಸಾಧ್ಯವಾಗುವುದಿಲ್ಲ, ಆಗ ತನ್ನ ಪತಿಯನ್ನು ಇತರ ಮಹಿಳೆಯರೊಂದಿಗೆ ಸಮಯ ಕಳೆಯಲು ಕಳುಹಿಸುತ್ತೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾಳೆ. ಇದಲ್ಲದೆ, ತನ್ನ ಪತಿ ಬೇರೆ ಮಹಿಳೆಯೊಂದಿಗೆ ಸಮಯ ಕಳೆಯಲು ಹೋಗುವಾಗ ಯಾವ ರೀತಿ ಬಟ್ಟೆಗಳನ್ನು ಧರಿಸಬೇಕು ಎಂದು ನಿರ್ಧರಿಸುವುದು ಕೂಡ ನಾನೇ ಎಂದು ಹೇಳಿಕೊಂಡಿದ್ದಾಳೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 1:06 pm, Tue, 28 March 23

ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ